AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹುಡುಗಿ ವ್ಯವಸ್ಥೆಯಿಂದ ಬೇಸತ್ತಿದ್ದಾಳೆ: ಕುಸ್ತಿಪಟು ವಿನೇಶ್ ಫೋಗಟ್‌ ಬಗ್ಗೆ ಶಶಿ ತರೂರ್ ಟ್ವೀಟ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡು ಅನರ್ಹಗೊಂಡ ಒಂದು ದಿನದ ನಂತರ ಕುಸ್ತಿಪಟು ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಶಶಿ ತರೂರ್, ಇಸ್ ಸಿಸ್ಟಂ ಸೆ ಪಕ್ ಗಯೀ ಹೈ ಯೇ ಲಡ್ಕಿ, ಲಡ್ತೇ ಲಡ್ತೇ ಥಕ್ ಗಯೀ ಹೈ ಯೇ ಲಡ್ಕೀ (ಈ ಹುಡುಗಿ ವ್ಯವಸ್ಥೆಯಿಂದ ಬೇಸತ್ತಿದ್ದಾಳೆ. ಹೋರಾಡಿ ಹೋರಾಡಿ ಸುಸ್ತಾಗಿದ್ದಾಳೆ ಈ ಹುಡುಗಿ)"ಎಂದಿದ್ದಾರೆ.

ಈ ಹುಡುಗಿ ವ್ಯವಸ್ಥೆಯಿಂದ ಬೇಸತ್ತಿದ್ದಾಳೆ: ಕುಸ್ತಿಪಟು ವಿನೇಶ್ ಫೋಗಟ್‌ ಬಗ್ಗೆ ಶಶಿ ತರೂರ್ ಟ್ವೀಟ್
ವಿನೇಶ್ ಫೋಗಟ್ -ಶಶಿ ತರೂರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 08, 2024 | 12:54 PM

Share

ದೆಹಲಿ ಆಗಸ್ಟ್ 08: ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor) ಅವರು ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಕ್ರೀಡೆಯಿಂದ ನಿವೃತ್ತಿ ಘೋಷಿಸಿದ ನಂತರ ಗುರುವಾರ ಹಿಂದಿಯಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡು ಅನರ್ಹಗೊಂಡ ಒಂದು ದಿನದ ನಂತರ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇಸ್ ಸಿಸ್ಟಂ ಸೆ ಪಕ್ ಗಯೀ ಹೈ ಯೇ ಲಡ್ಕಿ, ಲಡ್ತೇ ಲಡ್ತೇ ಥಕ್ ಗಯೀ ಹೈ ಯೇ ಲಡ್ಕೀ (ಈ ಹುಡುಗಿ ವ್ಯವಸ್ಥೆಯಿಂದ ಬೇಸತ್ತಿದ್ದಾಳೆ. ಹೋರಾಡಿ ಹೋರಾಡಿ ಸುಸ್ತಾಗಿದ್ದಾಳೆ ಈ ಹುಡುಗಿ),” ಎಂದು ತರೂರ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ಮಂಗಳವಾರ ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮೊದಲ ಬಾರಿಗೆ ಜಪಾನ್‌ನ ಹಾಲಿ ವಿಶ್ವ ಮತ್ತು ಒಲಿಂಪಿಕ್ ಚಾಂಪಿಯನ್ ಯುಯಿ ಸುಸಾಕಿಯನ್ನು ಅವರು ಸೋಲಿಸಿದ್ದರು. ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಅವರನ್ನು 5-0 ಅಂತರದಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದರು.

ಶಶಿ ತರೂರ್ ಟ್ವೀಟ್

ಆದಾಗ್ಯೂ, 50 ಕೆಜಿ ತೂಕದ ವಿಭಾಗದಲ್ಲಿ ಸ್ಪರ್ಧೆಗಿಳಿಯಲಿದ್ದ ವಿನೇಶ್ ಅವರಿಗೆ ಬುಧವಾರ ಬೆಳಗ್ಗೆ ತೂಕ ಪರೀಕ್ಷೆ ಮಾಡಿದಾಗ ಅವರ 50 ಕೆಜಿಗಿಂತ ಸ್ವಲ್ಪ ಹೆಚ್ಚು ಗ್ರಾಂ ದೇಹಭಾರ ಇತ್ತು ಎಂದು ಕಂಡು ಬಂದ ನಂತರ ಅವರು ಪಂದ್ಯದಿಂದ ಅನರ್ಹಗೊಂಡಿದ್ದರು.

ಕುಸ್ತಿ ನನ್ನನ್ನು ಸೋಲಿಸಿತು, ನಾನು ಸೋತಿದ್ದೇನೆ…ದಯವಿಟ್ಟು ನನ್ನನ್ನು ಕ್ಷಮಿಸು ..ನಿನ್ನ ಕನಸು. ನನ್ನ ಧೈರ್ಯ, ಎಲ್ಲವೂ ಛಿದ್ರವಾಗಿದೆ. ನನ್ನಲ್ಲಿ ಹೆಚ್ಚಿನ ಶಕ್ತಿ ಉಳಿದಿಲ್ಲ. ವಿದಾಯ ಕುಸ್ತಿ 2001-2024. ನಾನು ಯಾವಾಗಲೂ ನಿಮ್ಮೆಲ್ಲರಿಗೂ ಋಣಿಯಾಗಿರುತ್ತೇನೆ..ಕ್ಷಮಿಸಿ. ”ಎಂದು ನಿವೃತ್ತಿ ಘೋಷಿಸಿ ವಿನೇಶ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತೂಕ ಇಳಿಸುವ ಪ್ರಯತ್ನದಲ್ಲಿ ರಾತ್ರಿಯಿಡೀ ತಂಡ ನಡೆಸಿದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ವಿನೇಶ್ ಫೋಗಟ್ ಬುಧವಾರ ಬೆಳಗ್ಗೆ ನಿಗದಿತ 50 ಕೆಜಿಗಿಂತ 100ಗ್ರಾಂ ಹೆಚ್ಚುವರಿ ತೂಕವನ್ನು ಹೊಂದಿದ್ದರು. ಇಂದರಿಂದ ಪೈನಲ್ ಪಂದ್ಯದಿಂದ ಅನರ್ಹಗೊಂಡಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಹೇಳಿಕೆಯಲ್ಲಿ ತಿಳಿಸಿದೆ. ತೂಕ ಇಳಿಸಲು ನಡೆಸಿದ ಸತತ ಪ್ರಯತ್ನಗಳ ಪರಿಣಾಮವಾಗಿ ಅವರು ನಿರ್ಜಲೀಕರಣದಿಂದ ಬಳಲಿ ಅಸ್ವಸ್ಥಗೊಂಡಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಇದನ್ನೂ ಓದಿ: Vinesh Phogat: ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ವಿನೇಶ್ ಫೋಗಟ್ ಯಾರು?

ವಿನೇಶ್ ಮೂರು ಬಾರಿ ಒಲಿಂಪಿಯನ್ ಆಗಿದ್ದು, ಏಷ್ಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಎರಡರಲ್ಲೂ ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ವರ್ಷದಿಂದ, ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತದ ಮಾಜಿ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅವರು ತೀವ್ರ ಪ್ರತಿಭಟನೆ ನಡೆಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ