AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರು ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿದ್ದಾರೆ, ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿ ಈ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಸೋನಿಯಾ ಗಾಂಧಿ
ನಯನಾ ರಾಜೀವ್
|

Updated on: Jan 06, 2026 | 12:37 PM

Share

ನವದೆಹಲಿ, ಜನವರಿ 06: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಕೆಲವು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿತ್ತು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.

ಸೋನಿಯಾ ಗಾಂಧಿಗೆ ಡಿಸೆಂಬರ್​​ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫೆಬ್ರವರಿಯಲ್ಲಿ ಅವರ ಆಸ್ಪತ್ರೆಗೆ ಒಂದು ದಿನ ಚಿಕಿತ್ಸೆ ನೀಡಲಾಯಿತು, ಆ ಸಮಯದಲ್ಲಿ ಅವರು ಗ್ಯಾಸ್ಟ್ರೋಎಂಟರಾಲಜಿ ತಜ್ಞರ ಮೇಲ್ವಿಚಾರಣೆಯಲ್ಲಿದ್ದರು.

ಜೂನ್ 19 ರಂದು, ಹೊಟ್ಟೆಗೆ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆದ ನಂತರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜೂನ್ 15 ರಂದು ಹೊಟ್ಟೆಯ ಸೋಂಕಿಗೆ ಒಳಗಾಘಿದ್ದರು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳಿಂದ,ಗಾಂಧಿಯವರ ಮೇಲೆ ತೀವ್ರ ವೈದ್ಯಕೀಯ ನಿಗಾ ಇಡಲಾಗಿತ್ತು.

ಮತ್ತಷ್ಟು ಓದಿ: ನೆಹರುಗೆ ಸಂಬಂಧಿಸಿದ ದಾಖಲೆಗಳು ಕಾಣೆಯಾಗಿರಲಿಲ್ವಾ? ಗಜೇಂದ್ರ ಶೇಖಾವತ್ ಹೇಳಿದ್ದೇನು? ಸೋನಿಯಾ ಕುರಿತು ಚರ್ಚೆ ಶುರು

ಜೂನ್ 7 ರಂದು ಕೂಡ ಕಾಂಗ್ರೆಸ್ ನಾಯಕಿ ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹೋಗಿದ್ದರು, ಕೆಲವು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಕರೆತರಲಾಗಿತ್ತು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯ ಪ್ರಧಾನ ಸಲಹೆಗಾರ (ಮಾಧ್ಯಮ) ನರೇಶ್ ಚೌಹಾಣ್ ಹೇಳಿದ್ದರು.

ಸೆಪ್ಟೆಂಬರ್ 2022 ರಲ್ಲಿ, ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಲು ಮುಂದಾಗಿದ್ದರು, ಆದರೆ ಕೋವಿಡ್-19 ಕೋವಿಡ್​ನಿಂದಾಗಿ ಆ ಭೇಟಿಯನ್ನು ಮುಂದೂಡಲಾಗಿತ್ತು. ಆ ಪ್ರವಾಸದಲ್ಲಿ ಅವರ ಮಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇದ್ದರು.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ