AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಜಾದಿ ಉತ್ಸವದ ಬ್ಯಾನರ್​​ನಲ್ಲಿಲ್ಲ ನೆಹರೂ ಫೋಟೋ; ಕಾಂಗ್ರೆಸ್​ ನಾಯಕರ ಆಕ್ರೋಶ

Azadi ka Amrit Mahotsav: ಟ್ವೀಟ್ ಮಾಡಿರುವ ಶಶಿ ತರೂರ್​, ಭಾರತೀಯ ಸ್ವಾತಂತ್ರ್ಯದ ಮುಂಚೂಣಿ ಧ್ವನಿಯಾಗಿರುವ ಜವಾಹರ್​ ಲಾಲ್​ ನೆಹರೂರವರನ್ನು ಬಿಟ್ಟು ಆಜಾದಿ ಕಾ ಅಮೃತ್​ ಮಹೋತ್ಸವ ಆಚರಣೆ ಮಾಡುವುದು ತೀರ ಕ್ಷುಲ್ಲಕ ಎಂದು ಹೇಳಿದ್ದಾರೆ.

ಆಜಾದಿ ಉತ್ಸವದ ಬ್ಯಾನರ್​​ನಲ್ಲಿಲ್ಲ ನೆಹರೂ ಫೋಟೋ; ಕಾಂಗ್ರೆಸ್​ ನಾಯಕರ ಆಕ್ರೋಶ
ಆಜಾದಿ ಕಿ ಅಮೃತ್​ ಮಹೋತ್ಸವ್​
TV9 Web
| Edited By: |

Updated on:Oct 29, 2021 | 3:18 PM

Share

ದೆಹಲಿ: ಸ್ವಾತಂತ್ರ್ಯ ಬಂದು 75ವರ್ಷಗಳಾದ ಹಿನ್ನೆಲೆಯಲ್ಲಿ ಈ ಬಾರಿ ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ್​ ಮಹೋತ್ಸವ ಆಚರಿಸುತ್ತಿದೆ. ಆದರೆ ಭಾರತೀಯ ಸಂಶೋಧನಾ ಐತಿಹಾಸಿಕ ಮಂಡಳಿ (ICHR) ವೆಬ್​ಸೈಟ್​​ನಲ್ಲಿರುವ ಬ್ಯಾನರ್​​ನಲ್ಲಿ ಜವಾಹರ್​ ಲಾಲ್​ ನೆಹರೂ ಫೋಟೋವನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್​ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ (ICHR)ಯ ವೆಬ್​ಸೈಟ್​​ನಲ್ಲಿ ಈ ಆಜಾದಿ ಕಾ ಅಮೃತ ಮಹೋತ್ಸವ್​​​ದ ಬ್ಯಾನರ್​ ಹಾಕಲಾಗಿದೆ. ಅದರಲ್ಲಿ ಗಾಂಧೀಜಿ, ಸುಭಾಷ್ ಚಂದ್ರ ಬೋಸ್​, ಭಗತ್​ ಸಿಂಗ್​, ವಿನಾಯಕ್​ ದಾಮೋದರ್​ ಸಾವರ್ಕರ್​, ಬಿ.ಆರ್​.ಅಂಬೇಡ್ಕರ್ ಸೇರಿ ಹಲವು ಪ್ರಮುಖರ ಫೋಟೋ ಇದೆ. ಆದರೆ ಅದರಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರ್​ ಲಾಲ್ ನೆಹರೂ ಫೋಟೋವನ್ನು ಹಾಕಿಯೇ ಇಲ್ಲ. ಅದೀಗ ಕಾಂಗ್ರೆಸ್ ಸಂಸದ ಶಶಿ ತರೂರ್​ ಸೇರಿ, ಹಲವು ಗಣ್ಯರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ವೀಟ್ ಮಾಡಿರುವ ಶಶಿ ತರೂರ್​, ಭಾರತೀಯ ಸ್ವಾತಂತ್ರ್ಯದ ಮುಂಚೂಣಿ ಧ್ವನಿಯಾಗಿರುವ ಜವಾಹರ್​ ಲಾಲ್​ ನೆಹರೂರವರನ್ನು ಬಿಟ್ಟು ಆಜಾದಿ ಕಾ ಅಮೃತ್​ ಮಹೋತ್ಸವ ಆಚರಣೆ ಮಾಡುವುದು ತೀರ ಕ್ಷುಲ್ಲಕ. ಈ ಬ್ಯಾನರ್​ ಮೂಲಕ ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ ಮತ್ತೊಮ್ಮೆ ತನ್ನನ್ನು ತಾನು ಅವಮಾನಿಸಿಕೊಂಡಿದೆ. ಇದೊಂದು ಹವ್ಯಾಸವಾಗುತ್ತಿದೆ ಎಂದು ಹೇಳಿದ್ದಾರೆ.

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

ಶಶಿ ತರೂರ್​ ಅವರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಚತ್ತೀಸ್​ಗಡ್​ ಆರೋಗ್ಯ ಸಚಿವ ಟಿ.ಎಸ್​. ಸಿಂಗ್​ ಡಿಯೋ, ಜವಾಹರ್​ ಲಾಲ್​ ನೆಹರೂ ಅವರು ತಮ್ಮ ಮನಸು ಮತ್ತು ಹೃದಯದಿಂದ ಭಾರತೀಯರನ್ನು ಪ್ರೀತಿಸುತ್ತಿದ್ದರು..ಹಾಗೇ, ದೇಶದ ಜನರಿಗೂ ಪ್ರೀತಿ ಪಾತ್ರರಾಗಿದ್ದರು ಎಂದು ಹೇಳಿದ್ದಾರೆ. ಹಾಗೇ, ಗೌರವ್​ ಗೊಗೊಯಿ ಕೂಡ ಟ್ವೀಟ್ ಮಾಡಿದ್ದು, ಇನ್ಯಾವುದೇ ದೇಶದ ಸ್ವಾತಂತ್ರ್ಯ ಹೋರಾಟದ ವೆಬ್​ಸೈಟ್​​ನಲ್ಲೂ ನಾವು ಇಂಥದ್ದನ್ನು ನೋಡಲು ಸಾಧ್ಯವಿಲ್ಲ. ಯಾವ ದೇಶವೂ ತನ್ನ ಮೊದಲ ಪ್ರಧಾನಿಯ ಫೋಟೋವನ್ನು ಕೈಬಿಡುವುದಿಲ್ಲ. ಜವಾಹರ್​ ಲಾಲ್ ನೆಹರೂ ಮತ್ತು ಅಬುಲ್ ಕಲಾಂ ಆಜಾದ್ ಫೋಟೋ ಹಾಕದೆ ಇರುವುದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಹೇಳಿದ್ದಾರೆ. ಆರ್​ಎಸ್​ಎಸ್​ ಭಾರತದ ಸ್ವಾತಂತ್ರ್ಯ ಸಂಗ್ರಾಮದಿಂದ ದೂರವೇ ಇತ್ತು ಎಂಬುದನ್ನು ಭಾರತ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Whatsapp Scam: ವಾಟ್ಸ್​ಆ್ಯಪ್​ನಲ್ಲಿ ಬರುವ ಸ್ಕ್ಯಾಮ್ ಮೆಸೇಜ್ ಪತ್ತೆ ಮಾಡುವುದು ಈಗ ಸುಲಭ: ಹೀಗೆ ಮಾಡಿ

Kerala Corona cases: ಕೇರಳ ಈಗಲಾದರೂ ಲಾಕ್​ಡೌನ್​ ಹೇರಬೇಕು, ಗಡಿ ಬಂದ್​ ಮಾಡಲಿ: ಬರುಣ್​ ದಾಸ್

Azadi Ka Amrit Mahotsav

ಆಜಾದಿ ಕಿ ಅಮೃತ್​ ಮಹೋತ್ಸವ್​

Published On - 3:46 pm, Sat, 28 August 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ