AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟಾ ಯೋಜನೆಗೆ ಕಾಂಗ್ರೆಸ್​ನಿಂದ ತೀವ್ರ ವಿರೋಧ; ಆದರೆ ರಾಜಸ್ಥಾನದಲ್ಲಿ 160 ಫ್ಲ್ಯಾಟ್​​ಗಳ ನಿರ್ಮಾಣ ಸದ್ದಿಲ್ಲದೆ ಆರಂಭ

ಒಟ್ಟು 176 ಫ್ಲ್ಯಾಟ್​ಗಳ ನಿರ್ಮಾಣಕ್ಕೆ ಜೈಪುರ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾವನೆ ಇಟ್ಟಿತ್ತು. ಆದರೆ ವಸತಿ ಮಂಡಳಿ 160 ಫ್ಲ್ಯಾಟ್​​ಗಳಿಗೆ ಮಾತ್ರ ಅನುಮೋದನೆ ನೀಡಿದೆ.

ವಿಸ್ಟಾ ಯೋಜನೆಗೆ ಕಾಂಗ್ರೆಸ್​ನಿಂದ ತೀವ್ರ ವಿರೋಧ; ಆದರೆ ರಾಜಸ್ಥಾನದಲ್ಲಿ 160 ಫ್ಲ್ಯಾಟ್​​ಗಳ ನಿರ್ಮಾಣ ಸದ್ದಿಲ್ಲದೆ ಆರಂಭ
ಅಶೋಕ್​ ಗೆಹ್ಲೋಟ್​
TV9 Web
| Edited By: |

Updated on: Jun 05, 2021 | 2:52 PM

Share

ಕೊರೊನಾ ಉಲ್ಬಣಗೊಂಡ ಸಂದರ್ಭದಲ್ಲೂ ಕೇಂದ್ರ ಸರ್ಕಾರ ವಿಸ್ಟಾ ಯೋಜನೆಯಡಿ ಹೊಸ ಸಂಸತ್​ ಭವನ ನಿರ್ಮಾಣ ಸೇರಿ ಅಭಿವೃದ್ಧಿ ಕಾರ್ಯವನ್ನು ಮುಂದುವರಿಸಿದೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಆರೋಪಿಸಿದ್ದವು. ಆದರೆ ಇದೀಗ ಕೊವಿಡ್​ ಸಾಂಕ್ರಾಮಿಕದ ಮಧ್ಯೆ ರಾಜಸ್ಥಾನ ಕಾಂಗ್ರೆಸ್​ ಸರ್ಕಾರ, ಶಾಸಕರಿಗಾಗಿ 160 ಐಷಾರಾಮಿ ಫ್ಲ್ಯಾಟ್​​ಗಳ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ. ಜ್ಯೋತಿನಗರದಲ್ಲಿರುವ ರಾಜ್ಯದ ವಿಧಾನಸೌಧದ ಬಳಿಯೇ ಈ ಫ್ಲ್ಯಾಟ್​ಗಳು ನಿರ್ಮಾಣವಾಗಲಿದ್ದು, ಮೇ 20ರಿಂದ ಕೆಲಸ ಶುರುವಾಗಿದೆ. ಸುಮಾರು 266 ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದೆ.

ಈ ಯೋಜನೆಯನ್ನು ರಾಜಸ್ಥಾನ ವಸತಿ ಮಂಡಳಿ (ಆರ್​ಎಚ್​ಬಿ) ಪ್ರಾರಂಭಿಸಿದ್ದು, ಪ್ರತಿ ಫ್ಲ್ಯಾಟ್​ 3,200 ಚದರ್​ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿದೆ. ಹಾಗೇ, ನಾಲ್ಕು ಮಲಗುವ ಕೋಣೆಯನ್ನು ಒಳಗೊಂಡಿರಲಿದೆ ಎಂದು ಮಂಡಳಿ ತಿಳಿಸಿದೆ. 30 ತಿಂಗಳ ಒಳಗೆ ಈ ಯೋಜನೆಯನ್ನು ಸಂಪೂರ್ಣಗೊಳಿಸಲು ನಿಗದಿ ಮಾಡಲಾಗಿದ್ದು, ಅದರ ಒಳಗೇ ಕೆಲಸ ಮುಗಿಸುವುದಾಗಿಯೂ ಆರ್​ಎಚ್​​ಬಿ ತಿಳಿಸಿದೆ.

ಒಟ್ಟು 176 ಫ್ಲ್ಯಾಟ್​ಗಳ ನಿರ್ಮಾಣಕ್ಕೆ ಜೈಪುರ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾವನೆ ಇಟ್ಟಿತ್ತು. ಆದರೆ ವಸತಿ ಮಂಡಳಿ 160 ಫ್ಲ್ಯಾಟ್​​ಗಳಿಗೆ ಮಾತ್ರ ಅನುಮೋದನೆ ನೀಡಿದೆ. ಕಾನೂನು ಪ್ರಕಾರವೇ ಫ್ಲ್ಯಾಟ್​​ಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಗೋವಿಂದ್ ಸಿಂಗ್​ ದೋಸ್ತಾರಾ ತಿಳಿಸಿದ್ದಾರೆ. ಒಂದು ಕಡೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿಸ್ಟಾ ಯೋಜನೆಯನ್ನು ವಿರೋಧಿಸುತ್ತಿದೆ. ಇತ್ತ ರಾಜಸ್ಥಾನದಲ್ಲಿ ಕಾಂಗ್ರೆಸ್​ ಸರ್ಕಾರ ಕೊವಿಡ್ 19 ಕಾಲದಲ್ಲೇ 160 ಫ್ಲ್ಯಾಟ್​​ಗಳ ನಿರ್ಮಾಣ ಶುರು ಮಾಡಿದೆ. ಅದರಲ್ಲೂ ರಾಹುಲ್ ಗಾಂಧಿ, ವಿಸ್ಟಾ ಯೋಜನೆಯನ್ನು ಕ್ರಿಮಿನಲ್​ ವೇಸ್ಟೇಜ್​ ಎಂದು ಹೇಳಿದ್ದರು.

ಇದನ್ನು ಓದಿ: Amazon Kannada Insult: ಆ ಗೂಗಲ್ ಆಯ್ತು, ಈಗ ಅಮೆಜಾನ್‌ ಆನ್​ಲೈನ್ ಶಾಪಿಂಗ್​ನಲ್ಲೂ ಕನ್ನಡ ಧ್ವಜ, ಲಾಂಛನಕ್ಕೆ ಅಪಮಾನ

Congress led Rajasthan government has started the construction of 160 luxurious flats

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ