AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು. ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, […]

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:41 PM

Share

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು.

ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, ದಿಢೀರನೆ ಇನ್ನೂ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ಶಾಸಕ ಪಕ್ಷದ ನಾಯಕತ್ವದ ಕೈಗೆ ಸಿಗದೆ, ಒಟ್ಟು 3 ಶಾಸಕರು ಕಾಂಗ್ರೆಸ್​ನಿಂದ ದೂರವಿರುವುದಾಗಿ ಸ್ವತಃ ಪಕ್ಷದ ಮೂಲಗಳೇ ಹೇಳಿವೆ. ಇದರಿಂದ ಈ ಬಾರಿಯೂ ಗುಜರಾತ್ ಕಡೆಯ ರಾಜ್ಯಸಭೆ ಚುನಾವಣೆ ಕುತೂಹಲ ಘಟ್ಟದ ಪ್ರವೇಶಿಸಿದೆ.

ಬಿಜೆಪಿ ಜರೂರತ್ತು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದಿಂದ 103 ಶಾಸಕರು ಇದ್ದಾರೆ. ಇವರ ಮೂಲಕ ಇಬ್ಬರು ಸುಲಲಿತವಾಗಿ ರಾಜ್ಯಸಭೆಗೆ ಆಯ್ಕೆಯಾಗಬಹುದು. ಕಾಂಗ್ರೆಸ್ ಪಕ್ಷಕ್ಕೂ ಸಹ ಇಬ್ಬರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಕಳಿಸುವ ಅವಕಾಶವಿತ್ತು. ಆದ್ರೆ ಈಗ ಒಂದಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದ್ದು, 4ನೆಯ ಸ್ಥಾನಕ್ಕೆ ಆಯ್ಕೆ ಮುಕ್ತವಾಗಿದೆ. ಬಿಜೆಪಿ ಆ ನಾಲ್ಕನೆಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ರಾಜ್ಯಸಭೆಯಲ್ಲಿಯೂ ಸಂಪೂರ್ಣ ಬಹುಮತ ಸಾಧಿಸಲು ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟಕ್ಕೆ ಅಗತ್ಯ ರಾಜ್ಯಸಭಾ ಸದಸ್ಯರ ಸಂಖ್ಯೆ ಇಲ್ಲ. ಹಾಗಾಗಿ ಬಿಜೆಪಿ ತನ್ನ ವತಿಯಿಂದ ಹೆಚ್ಚು ಹೆಚ್ಚು ಸಂಸದರನ್ನು ರಾಜ್ಯಸಭೆಗೆ ಆರಿಸಿಕೊಳ್ಳುವ ಜರೂರತ್ತು ಇದೆ ಎಂದು ರಾಜಕೀಯ ಪರಿಣತರು ವಿಶ್ಲೇಷಿಸಿದ್ದಾರೆ.

Published On - 1:25 pm, Thu, 4 June 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!