AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು. ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, […]

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 04, 2020 | 3:41 PM

Share

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು.

ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, ದಿಢೀರನೆ ಇನ್ನೂ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ಶಾಸಕ ಪಕ್ಷದ ನಾಯಕತ್ವದ ಕೈಗೆ ಸಿಗದೆ, ಒಟ್ಟು 3 ಶಾಸಕರು ಕಾಂಗ್ರೆಸ್​ನಿಂದ ದೂರವಿರುವುದಾಗಿ ಸ್ವತಃ ಪಕ್ಷದ ಮೂಲಗಳೇ ಹೇಳಿವೆ. ಇದರಿಂದ ಈ ಬಾರಿಯೂ ಗುಜರಾತ್ ಕಡೆಯ ರಾಜ್ಯಸಭೆ ಚುನಾವಣೆ ಕುತೂಹಲ ಘಟ್ಟದ ಪ್ರವೇಶಿಸಿದೆ.

ಬಿಜೆಪಿ ಜರೂರತ್ತು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದಿಂದ 103 ಶಾಸಕರು ಇದ್ದಾರೆ. ಇವರ ಮೂಲಕ ಇಬ್ಬರು ಸುಲಲಿತವಾಗಿ ರಾಜ್ಯಸಭೆಗೆ ಆಯ್ಕೆಯಾಗಬಹುದು. ಕಾಂಗ್ರೆಸ್ ಪಕ್ಷಕ್ಕೂ ಸಹ ಇಬ್ಬರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಕಳಿಸುವ ಅವಕಾಶವಿತ್ತು. ಆದ್ರೆ ಈಗ ಒಂದಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದ್ದು, 4ನೆಯ ಸ್ಥಾನಕ್ಕೆ ಆಯ್ಕೆ ಮುಕ್ತವಾಗಿದೆ. ಬಿಜೆಪಿ ಆ ನಾಲ್ಕನೆಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ರಾಜ್ಯಸಭೆಯಲ್ಲಿಯೂ ಸಂಪೂರ್ಣ ಬಹುಮತ ಸಾಧಿಸಲು ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟಕ್ಕೆ ಅಗತ್ಯ ರಾಜ್ಯಸಭಾ ಸದಸ್ಯರ ಸಂಖ್ಯೆ ಇಲ್ಲ. ಹಾಗಾಗಿ ಬಿಜೆಪಿ ತನ್ನ ವತಿಯಿಂದ ಹೆಚ್ಚು ಹೆಚ್ಚು ಸಂಸದರನ್ನು ರಾಜ್ಯಸಭೆಗೆ ಆರಿಸಿಕೊಳ್ಳುವ ಜರೂರತ್ತು ಇದೆ ಎಂದು ರಾಜಕೀಯ ಪರಿಣತರು ವಿಶ್ಲೇಷಿಸಿದ್ದಾರೆ.

Published On - 1:25 pm, Thu, 4 June 20

Follow Us
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!