AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು. ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, […]

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 04, 2020 | 3:41 PM

Share

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು.

ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, ದಿಢೀರನೆ ಇನ್ನೂ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ಶಾಸಕ ಪಕ್ಷದ ನಾಯಕತ್ವದ ಕೈಗೆ ಸಿಗದೆ, ಒಟ್ಟು 3 ಶಾಸಕರು ಕಾಂಗ್ರೆಸ್​ನಿಂದ ದೂರವಿರುವುದಾಗಿ ಸ್ವತಃ ಪಕ್ಷದ ಮೂಲಗಳೇ ಹೇಳಿವೆ. ಇದರಿಂದ ಈ ಬಾರಿಯೂ ಗುಜರಾತ್ ಕಡೆಯ ರಾಜ್ಯಸಭೆ ಚುನಾವಣೆ ಕುತೂಹಲ ಘಟ್ಟದ ಪ್ರವೇಶಿಸಿದೆ.

ಬಿಜೆಪಿ ಜರೂರತ್ತು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದಿಂದ 103 ಶಾಸಕರು ಇದ್ದಾರೆ. ಇವರ ಮೂಲಕ ಇಬ್ಬರು ಸುಲಲಿತವಾಗಿ ರಾಜ್ಯಸಭೆಗೆ ಆಯ್ಕೆಯಾಗಬಹುದು. ಕಾಂಗ್ರೆಸ್ ಪಕ್ಷಕ್ಕೂ ಸಹ ಇಬ್ಬರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಕಳಿಸುವ ಅವಕಾಶವಿತ್ತು. ಆದ್ರೆ ಈಗ ಒಂದಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದ್ದು, 4ನೆಯ ಸ್ಥಾನಕ್ಕೆ ಆಯ್ಕೆ ಮುಕ್ತವಾಗಿದೆ. ಬಿಜೆಪಿ ಆ ನಾಲ್ಕನೆಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ರಾಜ್ಯಸಭೆಯಲ್ಲಿಯೂ ಸಂಪೂರ್ಣ ಬಹುಮತ ಸಾಧಿಸಲು ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟಕ್ಕೆ ಅಗತ್ಯ ರಾಜ್ಯಸಭಾ ಸದಸ್ಯರ ಸಂಖ್ಯೆ ಇಲ್ಲ. ಹಾಗಾಗಿ ಬಿಜೆಪಿ ತನ್ನ ವತಿಯಿಂದ ಹೆಚ್ಚು ಹೆಚ್ಚು ಸಂಸದರನ್ನು ರಾಜ್ಯಸಭೆಗೆ ಆರಿಸಿಕೊಳ್ಳುವ ಜರೂರತ್ತು ಇದೆ ಎಂದು ರಾಜಕೀಯ ಪರಿಣತರು ವಿಶ್ಲೇಷಿಸಿದ್ದಾರೆ.

Published On - 1:25 pm, Thu, 4 June 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್