AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು. ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, […]

RS ಚುನಾವಣೆ: ಗುಜರಾತ್​ನಲ್ಲಿ ಶುರುವಾಯ್ತು ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ!
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:41 PM

Share

ಗಾಂಧಿನಗರ: ಜೂನ್ 19ಕ್ಕೆ ರಾಜ್ಯಸಭೆ ಚುನಾವಣೆ ನಿಗದಿಯಾಗಿದೆ. ಅದಕ್ಕೂ ಮುನ್ನ ಗುಜರಾತ್​ನಲ್ಲಿ ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಶುರುವಾಗಿದೆ! ಗುಜರಾತ್​ ಕೋಟಾದಲ್ಲಿ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶವಿದೆ. ಅದರಲ್ಲಿ 2 ಸ್ಥಾನಗಳನ್ನು ತನ್ನದಾಗಿಸುವುದಕ್ಕೆ ಕಾಂಗ್ರೆಸ್​ಗೆ ಛಾನ್ಸ್ ಇತ್ತು. ಅದ್ರೆ ಮಾರ್ಚ್​ ತಿಂಗಳಲ್ಲೇ ರಾಜೀನಾಮೆ ಪರ್ವಕ್ಕೆ ಚಾಲನೆ ಸಿಕ್ಕಿ, ಐದು ಮಂದಿ ಕಾಂಗ್ರೆಸ್​ ಶಾಸಕರು ಪಕ್ಷಕ್ಕೆ ಗುಡ್​ಬೈ ಹೇಳಿದ್ದರು. ಇದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 68ಕ್ಕೆ ಕುಸಿದಿತ್ತು.

ಆದ್ರೆ ಇದು ಮತ್ತೊಂದು ಸುತ್ತಿನ ಬೆಳವಣಿಗೆಗಳು ಘಟಿಸಿದ್ದು, ದಿಢೀರನೆ ಇನ್ನೂ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ಶಾಸಕ ಪಕ್ಷದ ನಾಯಕತ್ವದ ಕೈಗೆ ಸಿಗದೆ, ಒಟ್ಟು 3 ಶಾಸಕರು ಕಾಂಗ್ರೆಸ್​ನಿಂದ ದೂರವಿರುವುದಾಗಿ ಸ್ವತಃ ಪಕ್ಷದ ಮೂಲಗಳೇ ಹೇಳಿವೆ. ಇದರಿಂದ ಈ ಬಾರಿಯೂ ಗುಜರಾತ್ ಕಡೆಯ ರಾಜ್ಯಸಭೆ ಚುನಾವಣೆ ಕುತೂಹಲ ಘಟ್ಟದ ಪ್ರವೇಶಿಸಿದೆ.

ಬಿಜೆಪಿ ಜರೂರತ್ತು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದಿಂದ 103 ಶಾಸಕರು ಇದ್ದಾರೆ. ಇವರ ಮೂಲಕ ಇಬ್ಬರು ಸುಲಲಿತವಾಗಿ ರಾಜ್ಯಸಭೆಗೆ ಆಯ್ಕೆಯಾಗಬಹುದು. ಕಾಂಗ್ರೆಸ್ ಪಕ್ಷಕ್ಕೂ ಸಹ ಇಬ್ಬರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಕಳಿಸುವ ಅವಕಾಶವಿತ್ತು. ಆದ್ರೆ ಈಗ ಒಂದಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದ್ದು, 4ನೆಯ ಸ್ಥಾನಕ್ಕೆ ಆಯ್ಕೆ ಮುಕ್ತವಾಗಿದೆ. ಬಿಜೆಪಿ ಆ ನಾಲ್ಕನೆಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ರಾಜ್ಯಸಭೆಯಲ್ಲಿಯೂ ಸಂಪೂರ್ಣ ಬಹುಮತ ಸಾಧಿಸಲು ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟಕ್ಕೆ ಅಗತ್ಯ ರಾಜ್ಯಸಭಾ ಸದಸ್ಯರ ಸಂಖ್ಯೆ ಇಲ್ಲ. ಹಾಗಾಗಿ ಬಿಜೆಪಿ ತನ್ನ ವತಿಯಿಂದ ಹೆಚ್ಚು ಹೆಚ್ಚು ಸಂಸದರನ್ನು ರಾಜ್ಯಸಭೆಗೆ ಆರಿಸಿಕೊಳ್ಳುವ ಜರೂರತ್ತು ಇದೆ ಎಂದು ರಾಜಕೀಯ ಪರಿಣತರು ವಿಶ್ಲೇಷಿಸಿದ್ದಾರೆ.

Published On - 1:25 pm, Thu, 4 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ