AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತ್ನಿ ಹೇಳಿಕೆ: ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದು ಕ್ಷಮೆ ಕೇಳಿದ ಅಧೀರ್​​ರಂಜನ್ ಚೌಧರಿ

ಸುದ್ದಿ ಮಾಧ್ಯಮವೊಂದಕ್ಕೆ  ನೀಡಿದ ಹೇಳಿಕೆಯಲ್ಲಿ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನು ರಾಷ್ಟ್ರಪತ್ನಿ ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು

ರಾಷ್ಟ್ರಪತ್ನಿ ಹೇಳಿಕೆ:  ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದು ಕ್ಷಮೆ ಕೇಳಿದ ಅಧೀರ್​​ರಂಜನ್ ಚೌಧರಿ
ದ್ರೌಪದಿ ಮುರ್ಮು
TV9 Web
| Edited By: |

Updated on:Jul 29, 2022 | 8:15 PM

Share

ದೆಹಲಿ: ಕಾಂಗ್ರೆಸ್ (Congress) ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury )ಕ್ಷಮೆ ಕೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ  ನೀಡಿದ ಹೇಳಿಕೆಯಲ್ಲಿ  ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮ (Droupadi Murmu) ಅವರನ್ನು ರಾಷ್ಟ್ರಪತ್ನಿ ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು. ನೀವು ಹೊಂದಿರುವ ಸ್ಥಾನವನ್ನು ವಿವರಿಸಲು ನಾನು ತಪ್ಪಾದ ಪದ ಬಳಕೆ ಮಾಡಿದ್ದು, ಆ ಪ್ರಮಾದಕ್ಕೆ ನಾನು ಖೇದ ವ್ಯಕ್ತಪಡಿಸುತ್ತೇನೆ. ಅದು ಬಾಯ್ತಪ್ಪಿನಿಂದ ಆಗಿದೆ. ನಾನು ಆ ಬಗ್ಗೆ ನಿಮ್ಮಲ್ಲಿ ಕ್ಷಮೆ ಕೇಳುತ್ತಿದ್ದು, ನೀವು ನನ್ನನ್ನು ಮನ್ನಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಚೌಧರಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಚೌಧರಿ ಅವರ ಹೇಳಿಕೆ ಖಂಡಿಸಿದ್ದ ಬಿಜೆಪಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಧಿ ಕೂಡಾ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿತ್ತು. ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದಾಗ ಮಾಧ್ಯಮವೊಂದರಲ್ಲಿ ಮಾತನಾಡಿದ ಲೋಕಸಭಾ ಸಂಸದ, ಕಾಂಗ್ರೆಸ್ ನಾಯಕ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಹೇಳಿದ್ದರು.

ಚೌಧರಿ ಅವರು ಬಾಯ್ತಪ್ಪಿ ಈ ಮಾತನ್ನು ಆಡಿದ್ದಲ್ಲ ಎಂದು ಬಿಜೆಪಿ ಹೇಳಿತ್ತು. ಇದು ಬಾಯ್ತಪ್ಪಿನಿಂದ ಆದದಲ್ಲ. ನೀವು ವಿಡಿಯೊ ತುಣುಕನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅವರು ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಎಂದು ಎರಡು ಬಾರಿ ಹೇಳಿದ್ದು ಆಮೇಲೆ ರಾಷ್ಟ್ರಪತ್ನಿ ಎಂದಿದ್ದಾರೆ. ಇಂಥವುಗಳನ್ನೆಲ್ಲಾ ಲಘುವಾಗಿ ಪರಿಗಣಿಸಬಾರದು ಎಂದು ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದರು.

ತಾನು ಬಂಗಾಳಿ, ನನಗೆ ಹಿಂದಿ ಸರಾಗವಾಗಿ ಬರುವುದಿಲ್ಲ. ಭಾಷೆಯ ಸಮಸ್ಯೆಯಿಂದ ಬಾಯ್ತಪ್ಪಿ ನಾನು ಹಾಗೆ ಹೇಳಿದ್ದೇನೆ.ಅದನ್ನೇ ಬಿಜೆಪಿ ದೊಡ್ಡದು ಮಾಡಿದೆ ಎಂದು ಚೌಧರಿ ಹೇಳಿದ್ದಾರೆ. ಬುಧವಾರ ಆ ಹೇಳಿಕೆ ವಿವಾದಕ್ಕೀಡಾದಾಗ, ನಾನು ಬಿಜೆಪಿ ಕ್ಷಮೆ ಕೇಳಲ್ಲ. ರಾಷ್ಟ್ರಪತಿಯವರಿಗೆ ನೋವಾಗಿದ್ದರೆ ನಾನು ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿ ಅವರಲ್ಲಿ ನೇರವಾಗಿ ನೂರು ಬಾರಿ ಕ್ಷಮೆ ಕೇಳುತ್ತೇನೆ ಎಂದಿದ್ದರು.

Published On - 7:19 pm, Fri, 29 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ