AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದ ಕಾಂಗ್ರೆಸ್ ಸಂಸದ ವಸಂತ್ ಕುಮಾರ್

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ಯಾಕುಮಾರಿಯ ಕಾಂಗ್ರೆಸ್ ಸಂಸದ ಹರಿಕೃಷ್ಣ ವಸಂತ್ ಕುಮಾರ್ ಶುಕ್ರವಾರ ಸಾಯಂಕಾಲ ಪಿಡುಗಿಗೆ ಬಲಿಯಾದರು, ಅವರಿಗೆ 70 ವರ್ಷ ವಯಸ್ಸಾಗಿತ್ತು. ವಸಂತ್ ಕುಮಾರ್ ಅವರನ್ನು ಇದೇ ತಿಂಗಳು 10ನೇ ತಾರೀಕಿನಂದು ಚೆನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಆಸ್ಪತ್ರೆಗೆ ಸೇರಿಸಿದ ನಂತರ ನ್ಯುಮೊನಿಯಾ ಕೂಡ ಬಾಧಿಸಲಾರಂಭಿಸಿದ್ದರಿಂದ ಅವರ ಆರೋಗ್ಯ ತೀವ್ರಗತಿಯಲ್ಲಿ ಕ್ಷೀಣಿಸಲಾರಂಭಿಸಿತ್ತು. ವೈದ್ಯರ ಪ್ರಕಾರ ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲ ಬಾರಿಗೆ ಸಂಸದರಾಗಿದ್ದ ವಸಂತ ಕುಮಾರ್, ಅದಕ್ಕೆ ಮೊದಲು ಎರಡು […]

ಕೊರೊನಾಗೆ ಬಲಿಯಾದ ಕಾಂಗ್ರೆಸ್ ಸಂಸದ ವಸಂತ್ ಕುಮಾರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 28, 2020 | 9:18 PM

Share

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ಯಾಕುಮಾರಿಯ ಕಾಂಗ್ರೆಸ್ ಸಂಸದ ಹರಿಕೃಷ್ಣ ವಸಂತ್ ಕುಮಾರ್ ಶುಕ್ರವಾರ ಸಾಯಂಕಾಲ ಪಿಡುಗಿಗೆ ಬಲಿಯಾದರು, ಅವರಿಗೆ 70 ವರ್ಷ ವಯಸ್ಸಾಗಿತ್ತು.

ವಸಂತ್ ಕುಮಾರ್ ಅವರನ್ನು ಇದೇ ತಿಂಗಳು 10ನೇ ತಾರೀಕಿನಂದು ಚೆನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಆಸ್ಪತ್ರೆಗೆ ಸೇರಿಸಿದ ನಂತರ ನ್ಯುಮೊನಿಯಾ ಕೂಡ ಬಾಧಿಸಲಾರಂಭಿಸಿದ್ದರಿಂದ ಅವರ ಆರೋಗ್ಯ ತೀವ್ರಗತಿಯಲ್ಲಿ ಕ್ಷೀಣಿಸಲಾರಂಭಿಸಿತ್ತು. ವೈದ್ಯರ ಪ್ರಕಾರ ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೊದಲ ಬಾರಿಗೆ ಸಂಸದರಾಗಿದ್ದ ವಸಂತ ಕುಮಾರ್, ಅದಕ್ಕೆ ಮೊದಲು ಎರಡು ಬಾರಿ ಶಾಸಕನಾಗಿ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದರು. ರಾಜಕಾರಣಿಯಲ್ಲದೆ, ಉದ್ಯಮಿಯೂ ಆಗಿದ್ದ ಅವರು ಗೃಹುಪಯೋಗಿ ವಸ್ತುಗಳ ಅತಿ ದೊಡ್ಡ ಸರಪಳಿಯಾಗಿರುವ ವಸಂತ್ ಌಂಡೆ್ ಕಂಪನಿಯ ಸಂಸ್ಥಾಪಕರಾಗಿದ್ದರು . ತಮಿಳನಾಡಿನಲ್ಲಿ ಜನಪ್ರಿಯ ಟಿವಿ ಚ್ಯಾನಲ್​ಗಳಲ್ಲೊಂದಾಗಿರುವ ವಸಂತ್ ಟಿವಿ ಅವರ ಒಡೆತನಕ್ಕೆ ಸೇರಿದ್ದು.

ವಸಂತ್ ಅವರ ಸಾವಿನ ಬಗ್ಗೆ ಶೋಕ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ

‘‘ವಸಂತ್ ಕುಮಾರ್ ಜೀ ಅವರ ಸಾವಿನ ಸುದ್ದಿ ಕೇಳಿ ದುಖಃವಾಗಿದೆ. ಉದ್ಯಮ ಹಾಗು ಸಾಮಾಜಿಕ ಸೇವೆಗೆ ಅವರು ನೀಡಿರುವ ಕಾಣಿಕೆ ಉಲ್ಲೇಖನೀಯವಾಗಿದೆ. ಅವರೊಂದಿಗೆ ಮಾತಾಡುವಾಗಲೆಲ್ಲ ತಮಿಳು ನಾಡಿನ ಪ್ರಗತಿ ಬಗ್ಗೆ ಅವರಿಗಿದ್ದ ಕಾಳಜಿಯನ್ನು ನಾನು ಗಮನಿಸುತ್ತಿದ್ದೆ. ಅವರ ಕುಟುಂಬ, ಸ್ನೇಹಿತರು ಹಾಗು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ, ಓಂ ಶಾಂತಿ@narendramodi’’

ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

‘‘ಹುಟ್ಟು ಹೋರಾಟಗಾರ, ದಿಟ್ಟ ಕಾಂಗ್ರೆಸ್ ನಾಯಕ, ಸಂಸದ, ಮತ್ತು ಟಿಎನ್​ಸಿಸಿಯ ಕಾರ್ಯಾಧ್ಯಕ್ಷರಾಗಿದ್ದ ವಸಂತ್ ಕುಮಾರ್ ಅವರ ಅಕಾಲಿಕ ಮರಣದಿಂದ ಅತೀವ ದುಖಃವಾಗಿದೆ. ಅವರ ಲಕ್ಷಾಂತರ ಬೆಂಬಲಿಗರೊಂದಿಗೆ ನಾವೆಲ್ಲ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಹೃದಯಾಂತರಾಳದ ಸಂತಾಪಗಳು, ಅವರ ಆತ್ಮಕ್ಕೆ ಶಾಂತಿ ಸಿಗಲಿ@rssurjewala’’ 

ಅಂದಹಾಗೆ, ಕೊವಿಡ್ ಬಲಿಯಾದ ಮೊದಲ ಸಂಸದ ವಸಂತ್ ಕುಮಾರ್ ಅವರಾಗಿದ್ದಾರೆ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ