AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದ ಕಾಂಗ್ರೆಸ್ ಸಂಸದ ವಸಂತ್ ಕುಮಾರ್

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ಯಾಕುಮಾರಿಯ ಕಾಂಗ್ರೆಸ್ ಸಂಸದ ಹರಿಕೃಷ್ಣ ವಸಂತ್ ಕುಮಾರ್ ಶುಕ್ರವಾರ ಸಾಯಂಕಾಲ ಪಿಡುಗಿಗೆ ಬಲಿಯಾದರು, ಅವರಿಗೆ 70 ವರ್ಷ ವಯಸ್ಸಾಗಿತ್ತು. ವಸಂತ್ ಕುಮಾರ್ ಅವರನ್ನು ಇದೇ ತಿಂಗಳು 10ನೇ ತಾರೀಕಿನಂದು ಚೆನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಆಸ್ಪತ್ರೆಗೆ ಸೇರಿಸಿದ ನಂತರ ನ್ಯುಮೊನಿಯಾ ಕೂಡ ಬಾಧಿಸಲಾರಂಭಿಸಿದ್ದರಿಂದ ಅವರ ಆರೋಗ್ಯ ತೀವ್ರಗತಿಯಲ್ಲಿ ಕ್ಷೀಣಿಸಲಾರಂಭಿಸಿತ್ತು. ವೈದ್ಯರ ಪ್ರಕಾರ ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲ ಬಾರಿಗೆ ಸಂಸದರಾಗಿದ್ದ ವಸಂತ ಕುಮಾರ್, ಅದಕ್ಕೆ ಮೊದಲು ಎರಡು […]

ಕೊರೊನಾಗೆ ಬಲಿಯಾದ ಕಾಂಗ್ರೆಸ್ ಸಂಸದ ವಸಂತ್ ಕುಮಾರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 28, 2020 | 9:18 PM

Share

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ಯಾಕುಮಾರಿಯ ಕಾಂಗ್ರೆಸ್ ಸಂಸದ ಹರಿಕೃಷ್ಣ ವಸಂತ್ ಕುಮಾರ್ ಶುಕ್ರವಾರ ಸಾಯಂಕಾಲ ಪಿಡುಗಿಗೆ ಬಲಿಯಾದರು, ಅವರಿಗೆ 70 ವರ್ಷ ವಯಸ್ಸಾಗಿತ್ತು.

ವಸಂತ್ ಕುಮಾರ್ ಅವರನ್ನು ಇದೇ ತಿಂಗಳು 10ನೇ ತಾರೀಕಿನಂದು ಚೆನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಆಸ್ಪತ್ರೆಗೆ ಸೇರಿಸಿದ ನಂತರ ನ್ಯುಮೊನಿಯಾ ಕೂಡ ಬಾಧಿಸಲಾರಂಭಿಸಿದ್ದರಿಂದ ಅವರ ಆರೋಗ್ಯ ತೀವ್ರಗತಿಯಲ್ಲಿ ಕ್ಷೀಣಿಸಲಾರಂಭಿಸಿತ್ತು. ವೈದ್ಯರ ಪ್ರಕಾರ ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೊದಲ ಬಾರಿಗೆ ಸಂಸದರಾಗಿದ್ದ ವಸಂತ ಕುಮಾರ್, ಅದಕ್ಕೆ ಮೊದಲು ಎರಡು ಬಾರಿ ಶಾಸಕನಾಗಿ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದರು. ರಾಜಕಾರಣಿಯಲ್ಲದೆ, ಉದ್ಯಮಿಯೂ ಆಗಿದ್ದ ಅವರು ಗೃಹುಪಯೋಗಿ ವಸ್ತುಗಳ ಅತಿ ದೊಡ್ಡ ಸರಪಳಿಯಾಗಿರುವ ವಸಂತ್ ಌಂಡೆ್ ಕಂಪನಿಯ ಸಂಸ್ಥಾಪಕರಾಗಿದ್ದರು . ತಮಿಳನಾಡಿನಲ್ಲಿ ಜನಪ್ರಿಯ ಟಿವಿ ಚ್ಯಾನಲ್​ಗಳಲ್ಲೊಂದಾಗಿರುವ ವಸಂತ್ ಟಿವಿ ಅವರ ಒಡೆತನಕ್ಕೆ ಸೇರಿದ್ದು.

ವಸಂತ್ ಅವರ ಸಾವಿನ ಬಗ್ಗೆ ಶೋಕ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ

‘‘ವಸಂತ್ ಕುಮಾರ್ ಜೀ ಅವರ ಸಾವಿನ ಸುದ್ದಿ ಕೇಳಿ ದುಖಃವಾಗಿದೆ. ಉದ್ಯಮ ಹಾಗು ಸಾಮಾಜಿಕ ಸೇವೆಗೆ ಅವರು ನೀಡಿರುವ ಕಾಣಿಕೆ ಉಲ್ಲೇಖನೀಯವಾಗಿದೆ. ಅವರೊಂದಿಗೆ ಮಾತಾಡುವಾಗಲೆಲ್ಲ ತಮಿಳು ನಾಡಿನ ಪ್ರಗತಿ ಬಗ್ಗೆ ಅವರಿಗಿದ್ದ ಕಾಳಜಿಯನ್ನು ನಾನು ಗಮನಿಸುತ್ತಿದ್ದೆ. ಅವರ ಕುಟುಂಬ, ಸ್ನೇಹಿತರು ಹಾಗು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ, ಓಂ ಶಾಂತಿ@narendramodi’’

ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

‘‘ಹುಟ್ಟು ಹೋರಾಟಗಾರ, ದಿಟ್ಟ ಕಾಂಗ್ರೆಸ್ ನಾಯಕ, ಸಂಸದ, ಮತ್ತು ಟಿಎನ್​ಸಿಸಿಯ ಕಾರ್ಯಾಧ್ಯಕ್ಷರಾಗಿದ್ದ ವಸಂತ್ ಕುಮಾರ್ ಅವರ ಅಕಾಲಿಕ ಮರಣದಿಂದ ಅತೀವ ದುಖಃವಾಗಿದೆ. ಅವರ ಲಕ್ಷಾಂತರ ಬೆಂಬಲಿಗರೊಂದಿಗೆ ನಾವೆಲ್ಲ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಹೃದಯಾಂತರಾಳದ ಸಂತಾಪಗಳು, ಅವರ ಆತ್ಮಕ್ಕೆ ಶಾಂತಿ ಸಿಗಲಿ@rssurjewala’’ 

ಅಂದಹಾಗೆ, ಕೊವಿಡ್ ಬಲಿಯಾದ ಮೊದಲ ಸಂಸದ ವಸಂತ್ ಕುಮಾರ್ ಅವರಾಗಿದ್ದಾರೆ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ