AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಯೋಜನೆಗಳ ಸಂಕ್ಷಿಪ್ತ ರೂಪದ ಬಗ್ಗೆ ಕಾಂಗ್ರೆಸ್ ವ್ಯಂಗ್ಯ; ಶ್ರೀಮತಿ ಎಲ್ಲಿ ಎಂದ ಜೈರಾಮ್ ರಮೇಶ್

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸುಪ್ರಸಿದ್ಧ ನುಡಿಗಟ್ಟುಗಳು ಅಥವಾ ಪದಗಳೊಂದಿಗೆ ಸಂಬಂಧಿಸಿರುವ ಸಂಕ್ಷಿಪ್ತ ರೂಪಗಳ ಮೂಲಕ ಗುರುತಿಸಬಹುದಾದ ಹಲವಾರು ಯೋಜನೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ

ಕೇಂದ್ರ ಸರ್ಕಾರದ ಯೋಜನೆಗಳ ಸಂಕ್ಷಿಪ್ತ ರೂಪದ ಬಗ್ಗೆ ಕಾಂಗ್ರೆಸ್ ವ್ಯಂಗ್ಯ; ಶ್ರೀಮತಿ ಎಲ್ಲಿ ಎಂದ ಜೈರಾಮ್ ರಮೇಶ್
ಜೈರಾಮ್ ರಮೇಶ್
ರಶ್ಮಿ ಕಲ್ಲಕಟ್ಟ
|

Updated on: Feb 21, 2023 | 8:22 PM

Share

ಬಿಜೆಪಿ(BJP) ನೇತೃತ್ವದ ಕೇಂದ್ರ ಸರ್ಕಾರ ತ್ವರಿತವಾಗಿ ಸಂಕ್ಷಿಪ್ತ ರೂಪಗಳನ್ನು ಕೊಡುವ ರೀತಿಯನ್ನು ಕಾಂಗ್ರೆಸ್ (Congress) ಸಂಸದ ಜೈರಾಮ್ ರಮೇಶ್ (Jairam Ramesh) ವ್ಯಂಗ್ಯವಾಡಿದ್ದಾರೆ. ಇತ್ತೀಚಿನ ಸಂಸದೀಯ ಸ್ಥಾಯಿ ಸಮಿತಿ ಸಭೆಯ ಸಂಚಿಕೆಯನ್ನು ಹಂಚಿಕೊಂಡ ರಮೇಶ್, ‘ಶ್ರೀಮಾನ್’ ಎಂದು ಸಂಕ್ಷೇಪಿಸುವ ಸರ್ಕಾರ ಆಯೋಜಿಸಿದ ಕಾರ್ಯಕ್ರಮದ ಬಗ್ಗೆ ಸದಸ್ಯರಿಗೆ ತಿಳಿಸಲಾಗಿದೆ ಎಂದು ಹೇಳಿದರು. ಪುರುಷನ್ನು ಸಂಭೋದಿಸಲು ಹಿಂದಿಯಲ್ಲಿ ಶ್ರೀಮಾನ್ ಎಂದು ಬಳಸಲಾಗುತ್ತದೆ.

ಆಕರ್ಷಕ ಅಕ್ರೋನೇಮ್‌ಗಳನ್ನು ರೂಪಿಸುವ ಮೋದಿ ಸರ್ಕಾರದ ಗೀಳಿಗೆ ಸರಿಸಾಟಿ ಯಾರೂ ಇಲ್ಲ… ಇಂದು ಸ್ಥಾಯಿ ಸಮಿತಿ ಸಭೆಯಲ್ಲಿ ನಮಗೆ ವೈಜ್ಞಾನಿಕ ಸಂಶೋಧನಾ ಮೂಲಸೌಕರ್ಯ ಹಂಚಿಕೆ ನಿರ್ವಹಣೆ ಮತ್ತು ನೆಟ್‌ವರ್ಕ್‌ಗಳ (SRIMAN-Scientific Research Infrastructure Sharing Maintenance and Networks) ಬಗ್ಗೆ ಅರಿವು ಮೂಡಿಸಲಾಯಿತು. ಶ್ರೀಮತಿ ಎಲ್ಲಿದ್ದಾಳೆ ಎಂಬುದು ನನ್ನ ಪ್ರತಿಕ್ರಿಯೆ!” ಎಂದು ಜೈರಾಮ್ ರಮೇಶ್ ಟ್ವೀಟ್‌ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸುಪ್ರಸಿದ್ಧ ನುಡಿಗಟ್ಟುಗಳು ಅಥವಾ ಪದಗಳೊಂದಿಗೆ ಸಂಬಂಧಿಸಿರುವ ಸಂಕ್ಷಿಪ್ತ ರೂಪಗಳ ಮೂಲಕ ಗುರುತಿಸಬಹುದಾದ ಹಲವಾರು ಯೋಜನೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಉದಾಹರಣೆಗೆ, ಕೇಂದ್ರದ ವಾಯುಯಾನ ಯೋಜನೆ ಉಡಾನ್ ಕಾರ್ಯಕ್ರಮ ಹಿಂದಿಯಲ್ಲಿ ತನ್ನದೇ ಆದ ಅರ್ಥವನ್ನು ಹೊಂದಿದೆ, ಆದಾಗ್ಯೂ, ಇದು ‘ಉಡೇ ದೇಶ್ ಕಾ ಆಮ್ ನಾಗರಿಕ್’ (ದೇಶದ ಸಾಮಾನ್ಯ ನಾಗರಿಕರು ಹಾರಾಟ ಮಾಡಲಿ) ಅಥವಾ ಅಮೃತ್ (Atal Mission for Rejuvenation and Urban Transformation) ಎಂದಾಗಿದೆ.

ಇದನ್ನೂ ಓದಿ: ಭಿವಾನಿಯಲ್ಲಿ ಮುಸ್ಲಿಂ ಯುವಕರ ಹತ್ಯೆ; ಅಶೋಕ್ ಗೆಹ್ಲೋಟ್ ವಿರುದ್ಧ ಓವೈಸಿ ಟೀಕಾ ಪ್ರಹಾರ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಕಾರ ಸಂಬಂಧಿತ ಮಧ್ಯಸ್ಥಗಾರರ ಜಾಲವನ್ನು ರಚಿಸುವ ಮೂಲಕ ದೇಶದ ವಿಜ್ಞಾನಿಗಳು, ಉದ್ಯಮ ವೃತ್ತಿಪರರು ಮತ್ತು ಸಂಶೋಧಕರಿಗೆ ಸಂಶೋಧನಾ ಮೂಲಸೌಕರ್ಯಗಳ ಸಮರ್ಥ ಬಳಕೆ ಮತ್ತು ವ್ಯಾಪಕ ಪ್ರವೇಶವನ್ನು ಉತ್ತೇಜಿಸುವ ಗುರಿಯನ್ನು SRIMAN ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?