AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಯೋಜನೆಗಳ ಸಂಕ್ಷಿಪ್ತ ರೂಪದ ಬಗ್ಗೆ ಕಾಂಗ್ರೆಸ್ ವ್ಯಂಗ್ಯ; ಶ್ರೀಮತಿ ಎಲ್ಲಿ ಎಂದ ಜೈರಾಮ್ ರಮೇಶ್

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸುಪ್ರಸಿದ್ಧ ನುಡಿಗಟ್ಟುಗಳು ಅಥವಾ ಪದಗಳೊಂದಿಗೆ ಸಂಬಂಧಿಸಿರುವ ಸಂಕ್ಷಿಪ್ತ ರೂಪಗಳ ಮೂಲಕ ಗುರುತಿಸಬಹುದಾದ ಹಲವಾರು ಯೋಜನೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ

ಕೇಂದ್ರ ಸರ್ಕಾರದ ಯೋಜನೆಗಳ ಸಂಕ್ಷಿಪ್ತ ರೂಪದ ಬಗ್ಗೆ ಕಾಂಗ್ರೆಸ್ ವ್ಯಂಗ್ಯ; ಶ್ರೀಮತಿ ಎಲ್ಲಿ ಎಂದ ಜೈರಾಮ್ ರಮೇಶ್
ಜೈರಾಮ್ ರಮೇಶ್
ರಶ್ಮಿ ಕಲ್ಲಕಟ್ಟ
|

Updated on: Feb 21, 2023 | 8:22 PM

Share

ಬಿಜೆಪಿ(BJP) ನೇತೃತ್ವದ ಕೇಂದ್ರ ಸರ್ಕಾರ ತ್ವರಿತವಾಗಿ ಸಂಕ್ಷಿಪ್ತ ರೂಪಗಳನ್ನು ಕೊಡುವ ರೀತಿಯನ್ನು ಕಾಂಗ್ರೆಸ್ (Congress) ಸಂಸದ ಜೈರಾಮ್ ರಮೇಶ್ (Jairam Ramesh) ವ್ಯಂಗ್ಯವಾಡಿದ್ದಾರೆ. ಇತ್ತೀಚಿನ ಸಂಸದೀಯ ಸ್ಥಾಯಿ ಸಮಿತಿ ಸಭೆಯ ಸಂಚಿಕೆಯನ್ನು ಹಂಚಿಕೊಂಡ ರಮೇಶ್, ‘ಶ್ರೀಮಾನ್’ ಎಂದು ಸಂಕ್ಷೇಪಿಸುವ ಸರ್ಕಾರ ಆಯೋಜಿಸಿದ ಕಾರ್ಯಕ್ರಮದ ಬಗ್ಗೆ ಸದಸ್ಯರಿಗೆ ತಿಳಿಸಲಾಗಿದೆ ಎಂದು ಹೇಳಿದರು. ಪುರುಷನ್ನು ಸಂಭೋದಿಸಲು ಹಿಂದಿಯಲ್ಲಿ ಶ್ರೀಮಾನ್ ಎಂದು ಬಳಸಲಾಗುತ್ತದೆ.

ಆಕರ್ಷಕ ಅಕ್ರೋನೇಮ್‌ಗಳನ್ನು ರೂಪಿಸುವ ಮೋದಿ ಸರ್ಕಾರದ ಗೀಳಿಗೆ ಸರಿಸಾಟಿ ಯಾರೂ ಇಲ್ಲ… ಇಂದು ಸ್ಥಾಯಿ ಸಮಿತಿ ಸಭೆಯಲ್ಲಿ ನಮಗೆ ವೈಜ್ಞಾನಿಕ ಸಂಶೋಧನಾ ಮೂಲಸೌಕರ್ಯ ಹಂಚಿಕೆ ನಿರ್ವಹಣೆ ಮತ್ತು ನೆಟ್‌ವರ್ಕ್‌ಗಳ (SRIMAN-Scientific Research Infrastructure Sharing Maintenance and Networks) ಬಗ್ಗೆ ಅರಿವು ಮೂಡಿಸಲಾಯಿತು. ಶ್ರೀಮತಿ ಎಲ್ಲಿದ್ದಾಳೆ ಎಂಬುದು ನನ್ನ ಪ್ರತಿಕ್ರಿಯೆ!” ಎಂದು ಜೈರಾಮ್ ರಮೇಶ್ ಟ್ವೀಟ್‌ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸುಪ್ರಸಿದ್ಧ ನುಡಿಗಟ್ಟುಗಳು ಅಥವಾ ಪದಗಳೊಂದಿಗೆ ಸಂಬಂಧಿಸಿರುವ ಸಂಕ್ಷಿಪ್ತ ರೂಪಗಳ ಮೂಲಕ ಗುರುತಿಸಬಹುದಾದ ಹಲವಾರು ಯೋಜನೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಉದಾಹರಣೆಗೆ, ಕೇಂದ್ರದ ವಾಯುಯಾನ ಯೋಜನೆ ಉಡಾನ್ ಕಾರ್ಯಕ್ರಮ ಹಿಂದಿಯಲ್ಲಿ ತನ್ನದೇ ಆದ ಅರ್ಥವನ್ನು ಹೊಂದಿದೆ, ಆದಾಗ್ಯೂ, ಇದು ‘ಉಡೇ ದೇಶ್ ಕಾ ಆಮ್ ನಾಗರಿಕ್’ (ದೇಶದ ಸಾಮಾನ್ಯ ನಾಗರಿಕರು ಹಾರಾಟ ಮಾಡಲಿ) ಅಥವಾ ಅಮೃತ್ (Atal Mission for Rejuvenation and Urban Transformation) ಎಂದಾಗಿದೆ.

ಇದನ್ನೂ ಓದಿ: ಭಿವಾನಿಯಲ್ಲಿ ಮುಸ್ಲಿಂ ಯುವಕರ ಹತ್ಯೆ; ಅಶೋಕ್ ಗೆಹ್ಲೋಟ್ ವಿರುದ್ಧ ಓವೈಸಿ ಟೀಕಾ ಪ್ರಹಾರ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಕಾರ ಸಂಬಂಧಿತ ಮಧ್ಯಸ್ಥಗಾರರ ಜಾಲವನ್ನು ರಚಿಸುವ ಮೂಲಕ ದೇಶದ ವಿಜ್ಞಾನಿಗಳು, ಉದ್ಯಮ ವೃತ್ತಿಪರರು ಮತ್ತು ಸಂಶೋಧಕರಿಗೆ ಸಂಶೋಧನಾ ಮೂಲಸೌಕರ್ಯಗಳ ಸಮರ್ಥ ಬಳಕೆ ಮತ್ತು ವ್ಯಾಪಕ ಪ್ರವೇಶವನ್ನು ಉತ್ತೇಜಿಸುವ ಗುರಿಯನ್ನು SRIMAN ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ