AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಜೀವ್ ಸಾತವ್ ಕೊರೊನಾ ಸೋಂಕಿಗೆ ಬಲಿ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಸಾತವ್​ ಅವರು ಕೊರೊನಾ ಸೋಂಕು ಹಿನ್ನೆಲೆ ನಿಧನರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಜೀವ್ ಸಾತವ್ ಕೊರೊನಾ ಸೋಂಕಿಗೆ ಬಲಿ
ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಸಾತವ್​
shruti hegde
|

Updated on:May 16, 2021 | 11:22 AM

Share

ದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಸಾತವ್​ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಏಪ್ರಿಲ್​ 23ರಂದು ಕೊವಿಡ್​ ಪಾಸಿಟಿವ್​ ವರದಿ ಬಳಿಕ ಪುಣೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 16) ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಬಲಿಗರಾಗಿ ಗುರುತಿಸಲ್ಪಟ್ಟ ರಾಜೀವ್ ಸಾತವ್​ ಅವರ ನಿಧನದ ವಿಷಯ ತಿಳಿದ ರಾಹುಲ್​ ಗಾಂಧಿಯವರು ಸಂತಾಪ ಸೂಚಿಸಿದ್ದಾರೆ. ‘ನನ್ನ ಸ್ನೇಹಿತ ರಾಜೀವ್ ಸಾತವ್​ ಅವರನ್ನು ಕಳೆದುಕೊಂಡಿರುವುದು ನನಗೆ ತುಂಬಾ ಬೇಸರವಾಗಿದೆ. ಕಾಂಗ್ರೆಸ್​ನ ಆದರ್ಶಗಳನ್ನು ಸಾಕಾರಗೊಳಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದ ವಿಷಯ ನಮಗೆ ಮತ್ತು ಅವರ ಕುಟುಂಬಕ್ಕೆ ದೊಡ್ಡ ನಷ್ಟ ಉಂಟುಮಾಡಿದೆ’ ಎಂದು ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದ ಮಹಾರಾಷ್ಟ್ರದ ಕಾಂಗ್ರೆಸ್​ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ‘ಇದು ಅತ್ಯಂತ ಆಘಾತಕಾರಿ ಸುದ್ದಿ. ನಾನು ನನ್ನ ಕಿರಿಯ ಸಹೋದರನನ್ನು ಇಂದು ಕಳೆದುಕೊಂಡಿದ್ದೇನೆ. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ತಂದೊಡ್ಡಿದೆ. ಈ ನಷ್ಟಕ್ಕೆ ಕೇವಲ ಪದಗಳು ನ್ಯಾಯ ಒದಗಿಸಲು ಸಾಧ್ಯವಿಲ್ಲ. ಇಷ್ಟು ಚಿಕ್ಕ ವಯಸ್ಸಿಗೆ ಅವರು ನಿಧನರಾಗಿದ್ದಾರೆ ಎಂಬುದು ವಿಷಾಧನೀಯ’ ಎಂದು ಬೇಸರ ಹೊರಹಾಕಿದ್ದಾರೆ.

Published On - 11:12 am, Sun, 16 May 21

Follow Us
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ