AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಜೀವ್ ಸಾತವ್ ಕೊರೊನಾ ಸೋಂಕಿಗೆ ಬಲಿ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಸಾತವ್​ ಅವರು ಕೊರೊನಾ ಸೋಂಕು ಹಿನ್ನೆಲೆ ನಿಧನರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಜೀವ್ ಸಾತವ್ ಕೊರೊನಾ ಸೋಂಕಿಗೆ ಬಲಿ
ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಸಾತವ್​
shruti hegde
|

Updated on:May 16, 2021 | 11:22 AM

Share

ದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಸಾತವ್​ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಏಪ್ರಿಲ್​ 23ರಂದು ಕೊವಿಡ್​ ಪಾಸಿಟಿವ್​ ವರದಿ ಬಳಿಕ ಪುಣೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 16) ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಬಲಿಗರಾಗಿ ಗುರುತಿಸಲ್ಪಟ್ಟ ರಾಜೀವ್ ಸಾತವ್​ ಅವರ ನಿಧನದ ವಿಷಯ ತಿಳಿದ ರಾಹುಲ್​ ಗಾಂಧಿಯವರು ಸಂತಾಪ ಸೂಚಿಸಿದ್ದಾರೆ. ‘ನನ್ನ ಸ್ನೇಹಿತ ರಾಜೀವ್ ಸಾತವ್​ ಅವರನ್ನು ಕಳೆದುಕೊಂಡಿರುವುದು ನನಗೆ ತುಂಬಾ ಬೇಸರವಾಗಿದೆ. ಕಾಂಗ್ರೆಸ್​ನ ಆದರ್ಶಗಳನ್ನು ಸಾಕಾರಗೊಳಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದ ವಿಷಯ ನಮಗೆ ಮತ್ತು ಅವರ ಕುಟುಂಬಕ್ಕೆ ದೊಡ್ಡ ನಷ್ಟ ಉಂಟುಮಾಡಿದೆ’ ಎಂದು ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದ ಮಹಾರಾಷ್ಟ್ರದ ಕಾಂಗ್ರೆಸ್​ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ‘ಇದು ಅತ್ಯಂತ ಆಘಾತಕಾರಿ ಸುದ್ದಿ. ನಾನು ನನ್ನ ಕಿರಿಯ ಸಹೋದರನನ್ನು ಇಂದು ಕಳೆದುಕೊಂಡಿದ್ದೇನೆ. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ತಂದೊಡ್ಡಿದೆ. ಈ ನಷ್ಟಕ್ಕೆ ಕೇವಲ ಪದಗಳು ನ್ಯಾಯ ಒದಗಿಸಲು ಸಾಧ್ಯವಿಲ್ಲ. ಇಷ್ಟು ಚಿಕ್ಕ ವಯಸ್ಸಿಗೆ ಅವರು ನಿಧನರಾಗಿದ್ದಾರೆ ಎಂಬುದು ವಿಷಾಧನೀಯ’ ಎಂದು ಬೇಸರ ಹೊರಹಾಕಿದ್ದಾರೆ.

Published On - 11:12 am, Sun, 16 May 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ