AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ: ಪತ್ರಿಕಾಗೋಷ್ಠಿ ವೇಳೆ ಕಾಂಗ್ರೆಸ್​ ಸಂಸದನ ಬಂಧನ

Congress MP Rakesh Rathore Arrested: ಅತ್ಯಾಚಾರ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್​ ಸಂಸದ ರಾಕೇಶ್​ ರಾಥೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಸದ ರಾಕೇಶ್​ ತಮ್ಮ ಲೋಹರ್​ಬಾಗ್​ನಲ್ಲಿರುವ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಆ ವೇಳೆ ಕೊತ್ವಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಧನದ ನಂತರ ಪೊಲೀಸರು ಸಂಸದರೊಂದಿಗೆ ನ್ಯಾಯಾಲಯಕ್ಕೆ ಬಂದಿದ್ದಾರೆ. ಸಂಸದರ ಬಂಧನದ ನಂತರ ನ್ಯಾಯಾಲಯದ ಆವರಣದಲ್ಲಿ ಗದ್ದಲ ಉಂಟಾಯಿತು. ಕೋರ್ಟ್ ಸಂಸದರನ್ನು ಜೈಲಿಗೆ ಕಳುಹಿಸಿದೆ. ಜನವರಿ 17 ರಂದು ಮಹಿಳೆಯ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಸಂಸದರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಂಸದರು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದರು. ಜಿಲ್ಲೆಯ ಎಂಪಿಎಂಎಲ್‌ಎ ನ್ಯಾಯಾಲಯದಿಂದ ಜಾಮೀನು ರದ್ದಾದ ನಂತರ, ಅವರು ಲಕ್ನೋ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅತ್ಯಾಚಾರ ಪ್ರಕರಣ: ಪತ್ರಿಕಾಗೋಷ್ಠಿ ವೇಳೆ ಕಾಂಗ್ರೆಸ್​ ಸಂಸದನ ಬಂಧನ
ರಾಕೇಶ್ ರಾಥೋಡ್Image Credit source: ABP Live
ನಯನಾ ರಾಜೀವ್
|

Updated on:Jan 30, 2025 | 3:38 PM

Share

ಅತ್ಯಾಚಾರ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್​ ಸಂಸದ ರಾಕೇಶ್​ ರಾಥೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಸದ ರಾಕೇಶ್​ ತಮ್ಮ ಲೋಹರ್​ಬಾಗ್​ನಲ್ಲಿರುವ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಆ ವೇಳೆ ಕೊತ್ವಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಂಧನದ ನಂತರ ಪೊಲೀಸರು ಸಂಸದರೊಂದಿಗೆ ನ್ಯಾಯಾಲಯಕ್ಕೆ ಬಂದಿದ್ದಾರೆ. ಸಂಸದರ ಬಂಧನದ ನಂತರ ನ್ಯಾಯಾಲಯದ ಆವರಣದಲ್ಲಿ ಗದ್ದಲ ಉಂಟಾಯಿತು.

ಕೋರ್ಟ್ ಸಂಸದರನ್ನು ಜೈಲಿಗೆ ಕಳುಹಿಸಿದೆ. ಜನವರಿ 17 ರಂದು ಮಹಿಳೆಯ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಸಂಸದರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಂಸದರು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದರು. ಜಿಲ್ಲೆಯ ಎಂಪಿಎಂಎಲ್‌ಎ ನ್ಯಾಯಾಲಯದಿಂದ ಜಾಮೀನು ರದ್ದಾದ ನಂತರ, ಅವರು ಲಕ್ನೋ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ರಾಕೇಶ್ ರಾಥೋಡ್ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಪತ್ರಿಕಾಗೋಷ್ಠಿಯಲ್ಲಿಯೇ ರಾಕೇಶ್ ರಾಥೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ, ಶರಣಾಗುವಂತೆ ಸ್ಪಷ್ಟವಾಗಿ ಹೇಳಿತ್ತು. ದೂರುದಾರ ಮಹಿಳೆ 4 ವರ್ಷಗಳ ನಂತರ ಈ ಪ್ರಕರಣವನ್ನು ದಾಖಲಿಸಿದ್ದಾರೆ .

ಮತ್ತಷ್ಟು ಓದಿ: ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್

ಸಂಸದ ರಾಥೋಡ್ ಅವರ ವಕೀಲರು ಶರಣಾಗಲು ನ್ಯಾಯಾಲಯದಿಂದ ಸಮಯ ಕೋರಿದರು, ಅದರ ಮೇಲೆ ನ್ಯಾಯಾಲಯವು ಸಂಸದರಿಗೆ ಎರಡು ವಾರಗಳಲ್ಲಿ ಸೆಷನ್ಸ್ ನ್ಯಾಯಾಲಯದಲ್ಲಿ ಶರಣಾಗುವಂತೆ ಸೂಚಿಸಿತು. ರಾಕೇಶ್ ರಾಥೋಡ್ ಅವರು ಈ ಹಿಂದೆ ಸೀತಾಪುರದ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು, ಅದು ತಿರಸ್ಕೃತವಾಗಿತ್ತು. ಜನವರಿ 15 ರಂದು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಸಂಸದರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಸಂಸದ ರಾಕೇಶ್ ರಾಥೋಡ್ ಕಳೆದ ನಾಲ್ಕು ವರ್ಷಗಳಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ಕರೆ ವಿವರಗಳು ಮತ್ತು ಕರೆ ರೆಕಾರ್ಡಿಂಗ್ ಅನ್ನು ಸಹ ಪೊಲೀಸರಿಗೆ ನೀಡಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:27 pm, Thu, 30 January 25

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ