AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? -ಪ್ರಲ್ಹಾದ್ ಜೋಶಿ ಲೇವಡಿ

Pralhad Joshi: ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ ಅನ್ನೋದನ್ನ ದೇಶದ ಜನರಿಗೆ ತಿಳಿಸಲಿ. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ..? - ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? -ಪ್ರಲ್ಹಾದ್ ಜೋಶಿ ಲೇವಡಿ
ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? - ಪ್ರಲ್ಹಾದ್ ಜೋಶಿ ಲೇವಡಿ
TV9 Web
| Edited By: |

Updated on: Jul 29, 2022 | 2:09 PM

Share

ನವದೆಹಲಿ: ಸದನದ ಕಲಾಪಗಳಲ್ಲಿ ಗದ್ದಲ ಎಬ್ಬಿಸಿ ಗಾಂಧಿ ಪ್ರತಿಮೆ ಎದುರು (Gandhi Statue, Parliament) ಧರಣಿ ನಡೆಸುತ್ತಿರುವ ಕಾಂಗ್ರೆಸ್ ಸಂಸದರ (Congress MPs) ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ ಅನ್ನೋದನ್ನ ದೇಶದ ಜನರಿಗೆ ತಿಳಿಸಲಿ. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ..? ದೇಶದ ಜನರಿಗೆ ಹೇಳಿ ಎಂದು ಪ್ರತಿಭಟನಾ ನಿರತ ಕೈ ಸಂಸದರನ್ನ ಜೋಶಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗಾಂಧಿಜಿಯವರು ಅಹಿಂಸೆಯಲ್ಲಿ ಅಚಲ ನಂಬಿಕೆಯುಳ್ಳ ಮಹಾತ್ಮರು. ಮಹಾತ್ಮ ಗಾಂಧೀಜಿಯವರ ಪ್ರತಿಮೆ ಕೆಳಗೆ ಕುಳಿತು ಕಾಂಗ್ರೆಸ್ ಸಂಸದರು ಕೋಳಿ ಮಾಂಸ ತಿನ್ನುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ದೇಶದ ಮಹಾನ್ ವ್ಯಕ್ತಿಗಳನ್ನ ಅವಮಾನಿಸುವುದು ಕಾಂಗ್ರೆಸ್ ಗೆ ಅಭ್ಯಾಸವಾಗಿದೆ ಎಂದು ಪ್ರಲ್ಹಾದ್ ಜೋಶಿ ಕೈ ಸಂಸದರ ವಿರುದ್ಧ ಹರಿಹಾಯ್ದಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆಯೂ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧಿರ್ ರಂಜನ್ ಚೌಧರಿ ಅವರು ಅವಹೇಳನಕಾರಿಯಾಗಿ ಮಾತಾಡಿದ್ದಾರೆ, ರಾಷ್ಟ್ರಪತಿ ಬದಲು ರಾಷ್ಟ್ರಪತ್ನಿ ಎಂದು ಅಧಿರ್ ರಂಜನ್ ಚೌಧರಿ ಅವರು ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ಆದಿವಾಸಿಗಳಿಗೆ ಮಾಡಿದ ಅವಮಾನ. ಈ ಬಗ್ಗೆ ಕ್ಷಮೆಯಾಚಿಸುವ ಬದಲು, ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಿರುವಂತೆ ತೋರುತ್ತಿದೆ. ಸೋನಿಯಾ ಗಾಂಧಿ ಅವರೇ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ