AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? -ಪ್ರಲ್ಹಾದ್ ಜೋಶಿ ಲೇವಡಿ

Pralhad Joshi: ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ ಅನ್ನೋದನ್ನ ದೇಶದ ಜನರಿಗೆ ತಿಳಿಸಲಿ. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ..? - ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? -ಪ್ರಲ್ಹಾದ್ ಜೋಶಿ ಲೇವಡಿ
ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? - ಪ್ರಲ್ಹಾದ್ ಜೋಶಿ ಲೇವಡಿ
TV9 Web
| Edited By: ಸಾಧು ಶ್ರೀನಾಥ್​|

Updated on: Jul 29, 2022 | 2:09 PM

Share

ನವದೆಹಲಿ: ಸದನದ ಕಲಾಪಗಳಲ್ಲಿ ಗದ್ದಲ ಎಬ್ಬಿಸಿ ಗಾಂಧಿ ಪ್ರತಿಮೆ ಎದುರು (Gandhi Statue, Parliament) ಧರಣಿ ನಡೆಸುತ್ತಿರುವ ಕಾಂಗ್ರೆಸ್ ಸಂಸದರ (Congress MPs) ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ ಅನ್ನೋದನ್ನ ದೇಶದ ಜನರಿಗೆ ತಿಳಿಸಲಿ. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ..? ದೇಶದ ಜನರಿಗೆ ಹೇಳಿ ಎಂದು ಪ್ರತಿಭಟನಾ ನಿರತ ಕೈ ಸಂಸದರನ್ನ ಜೋಶಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗಾಂಧಿಜಿಯವರು ಅಹಿಂಸೆಯಲ್ಲಿ ಅಚಲ ನಂಬಿಕೆಯುಳ್ಳ ಮಹಾತ್ಮರು. ಮಹಾತ್ಮ ಗಾಂಧೀಜಿಯವರ ಪ್ರತಿಮೆ ಕೆಳಗೆ ಕುಳಿತು ಕಾಂಗ್ರೆಸ್ ಸಂಸದರು ಕೋಳಿ ಮಾಂಸ ತಿನ್ನುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ದೇಶದ ಮಹಾನ್ ವ್ಯಕ್ತಿಗಳನ್ನ ಅವಮಾನಿಸುವುದು ಕಾಂಗ್ರೆಸ್ ಗೆ ಅಭ್ಯಾಸವಾಗಿದೆ ಎಂದು ಪ್ರಲ್ಹಾದ್ ಜೋಶಿ ಕೈ ಸಂಸದರ ವಿರುದ್ಧ ಹರಿಹಾಯ್ದಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆಯೂ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧಿರ್ ರಂಜನ್ ಚೌಧರಿ ಅವರು ಅವಹೇಳನಕಾರಿಯಾಗಿ ಮಾತಾಡಿದ್ದಾರೆ, ರಾಷ್ಟ್ರಪತಿ ಬದಲು ರಾಷ್ಟ್ರಪತ್ನಿ ಎಂದು ಅಧಿರ್ ರಂಜನ್ ಚೌಧರಿ ಅವರು ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ಆದಿವಾಸಿಗಳಿಗೆ ಮಾಡಿದ ಅವಮಾನ. ಈ ಬಗ್ಗೆ ಕ್ಷಮೆಯಾಚಿಸುವ ಬದಲು, ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಿರುವಂತೆ ತೋರುತ್ತಿದೆ. ಸೋನಿಯಾ ಗಾಂಧಿ ಅವರೇ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ