AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? -ಪ್ರಲ್ಹಾದ್ ಜೋಶಿ ಲೇವಡಿ

Pralhad Joshi: ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ ಅನ್ನೋದನ್ನ ದೇಶದ ಜನರಿಗೆ ತಿಳಿಸಲಿ. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ..? - ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? -ಪ್ರಲ್ಹಾದ್ ಜೋಶಿ ಲೇವಡಿ
ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? - ಪ್ರಲ್ಹಾದ್ ಜೋಶಿ ಲೇವಡಿ
TV9 Web
| Updated By: ಸಾಧು ಶ್ರೀನಾಥ್​|

Updated on: Jul 29, 2022 | 2:09 PM

Share

ನವದೆಹಲಿ: ಸದನದ ಕಲಾಪಗಳಲ್ಲಿ ಗದ್ದಲ ಎಬ್ಬಿಸಿ ಗಾಂಧಿ ಪ್ರತಿಮೆ ಎದುರು (Gandhi Statue, Parliament) ಧರಣಿ ನಡೆಸುತ್ತಿರುವ ಕಾಂಗ್ರೆಸ್ ಸಂಸದರ (Congress MPs) ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ ಅನ್ನೋದನ್ನ ದೇಶದ ಜನರಿಗೆ ತಿಳಿಸಲಿ. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ..? ದೇಶದ ಜನರಿಗೆ ಹೇಳಿ ಎಂದು ಪ್ರತಿಭಟನಾ ನಿರತ ಕೈ ಸಂಸದರನ್ನ ಜೋಶಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗಾಂಧಿಜಿಯವರು ಅಹಿಂಸೆಯಲ್ಲಿ ಅಚಲ ನಂಬಿಕೆಯುಳ್ಳ ಮಹಾತ್ಮರು. ಮಹಾತ್ಮ ಗಾಂಧೀಜಿಯವರ ಪ್ರತಿಮೆ ಕೆಳಗೆ ಕುಳಿತು ಕಾಂಗ್ರೆಸ್ ಸಂಸದರು ಕೋಳಿ ಮಾಂಸ ತಿನ್ನುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ದೇಶದ ಮಹಾನ್ ವ್ಯಕ್ತಿಗಳನ್ನ ಅವಮಾನಿಸುವುದು ಕಾಂಗ್ರೆಸ್ ಗೆ ಅಭ್ಯಾಸವಾಗಿದೆ ಎಂದು ಪ್ರಲ್ಹಾದ್ ಜೋಶಿ ಕೈ ಸಂಸದರ ವಿರುದ್ಧ ಹರಿಹಾಯ್ದಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆಯೂ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧಿರ್ ರಂಜನ್ ಚೌಧರಿ ಅವರು ಅವಹೇಳನಕಾರಿಯಾಗಿ ಮಾತಾಡಿದ್ದಾರೆ, ರಾಷ್ಟ್ರಪತಿ ಬದಲು ರಾಷ್ಟ್ರಪತ್ನಿ ಎಂದು ಅಧಿರ್ ರಂಜನ್ ಚೌಧರಿ ಅವರು ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ಆದಿವಾಸಿಗಳಿಗೆ ಮಾಡಿದ ಅವಮಾನ. ಈ ಬಗ್ಗೆ ಕ್ಷಮೆಯಾಚಿಸುವ ಬದಲು, ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಿರುವಂತೆ ತೋರುತ್ತಿದೆ. ಸೋನಿಯಾ ಗಾಂಧಿ ಅವರೇ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ