ಕಾಂಗ್ರೆಸ್​ ಭಾರತವನ್ನು ಒಂದು ರಾಷ್ಟ್ರವೆಂದು ಪರಿಗಣಿಸುತ್ತಿಲ್ಲ; ಪ್ರಧಾನಿ ನರೇಂದ್ರ ಮೋದಿ

ಉತ್ತರಾಖಂಡ್​ನ ರುದ್ರಪುರದಲ್ಲಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಕೊವಿಡ್​ 19 ಪರಿಸ್ಥಿತಿಯಲ್ಲಿ ಉತ್ತರಾಖಂಡ್​ ಸರ್ಕಾರ ಬಡಜನರಿಗೆ ಉಚಿತ ಪಡಿತರ ನೀಡಿದೆ. ಅಷ್ಟೇ ಅಲ್ಲ, ಇನ್ನಿತರ ಯೋಜನೆಗಳ ಮೂಲಕ ಅವರಿಗೆ ಸೌಕರ್ಯಗಳನ್ನು ಒದಗಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಾಂಗ್ರೆಸ್​ ಭಾರತವನ್ನು ಒಂದು ರಾಷ್ಟ್ರವೆಂದು ಪರಿಗಣಿಸುತ್ತಿಲ್ಲ; ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ
Follow us
| Updated By: Lakshmi Hegde

Updated on: Feb 12, 2022 | 6:30 PM

ಉತ್ತರಾಖಂಡ್​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ (Uttarakhand Assembly Election 2022) ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)  ಅಲ್ಲಿ ಪ್ರಚಾರ ಸಭೆ ನಡೆಸಿದರು. ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಮಂತ್ರಿ ಮೋದಿ, ವಿರೋಧ ಪಕ್ಷ ಕಾಂಗ್ರೆಸ್​ ಭಾರತವನ್ನು ಒಂದು ರಾಷ್ಟ್ರವನ್ನಾಗಿ ಪರಿಗಣಿಸಲೂ ಸಿದ್ಧವಿಲ್ಲ ಎಂದು ಹೇಳಿದ್ದಾರೆ. ಈ ಭಾರತವೆಂಬ ರಾಷ್ಟ್ರ ಒಂದೇ. ಆದರೆ ಕಾಂಗ್ರೆಸ್​​ ಭಾರತವನ್ನು ರಾಷ್ಟ್ರವೆಂದು ಒಪ್ಪಿಕೊಳ್ಳುತ್ತಿಲ್ಲ ಎಂದು ಹೇಳಿದ ಅವರು, ನಮ್ಮ ಬಿಜೆಪಿ ಸರ್ಕಾರ ಈ ಉತ್ತರಾಖಂಡ್​ ದೇವಭೂಮಿಯ ದೈವತ್ವವನ್ನು ಸದಾ ಕಾಪಾಡುತ್ತದೆ ಎಂದು ಹೇಳಿದರು.

ಇಂದು ಉತ್ತರಾಖಂಡ್​ನ ರುದ್ರಪುರದಲ್ಲಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಕೊವಿಡ್​ 19 ಪರಿಸ್ಥಿತಿಯಲ್ಲಿ ಉತ್ತರಾಖಂಡ್​ ಸರ್ಕಾರ ಬಡಜನರಿಗೆ ಉಚಿತ ಪಡಿತರ ನೀಡಿದೆ. ಅಷ್ಟೇ ಅಲ್ಲ, ಇನ್ನಿತರ ಯೋಜನೆಗಳ ಮೂಲಕ ಅವರಿಗೆ ಸೌಕರ್ಯಗಳನ್ನು ಒದಗಿಸಿದೆ. ಅದೇ ಏನಾದರೂ ಕಾಂಗ್ರೆಸ್ ಸರ್ಕಾರವಿದ್ದರೆ ಪರಿಸ್ಥಿತಿ ಬೇರೆಯೇ ಇರುತ್ತಿತ್ತು.ಭ್ರಷ್ಟಾಚಾರವೆಂಬುದು ಪ್ರತಿ ಹಂತದಲ್ಲೂ ತಾಂಡವವಾಡುತ್ತಿತ್ತು ಎಂದು ಹೇಳಿದ್ದಾರೆ.  ಉತ್ತರಾಖಂಡ್​​ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಕೊವಿಡ್​ 19ನಿಂದ ಉಂಟಾಗಿದ್ದ ಸವಾಲಿನ ಸಂದರ್ಭದಲ್ಲೂ ಉತ್ತರಾಖಂಡ್​ನಲ್ಲಿ ನಾವು ಹೆದ್ದಾರಿಗಳನ್ನು ನಿರ್ಮಿಸಿದ್ದೇವೆ, ಏರ್​ಪೋರ್ಟ್ ಕಟ್ಟಿದ್ದೇವೆ. ಇನ್ನು ಮುಂದೆ ಕೂಡ ಪರ್ವತ್​ ಮಾಲಾ ಯೋಜನೆಯಡಿ, ಉತ್ತರಾಖಂಡ್​​ನ ದುರ್ಗಮ ಪ್ರದೇಶಗಳಿಗೆ ರೋಪ್​ವೇ ಸೌಲಭ್ಯ ಕಲ್ಪಿಸಲಾಗುವುದು. ಅಷ್ಟೇ ಅಲ್ಲ, ವೈದ್ಯಕೀಯ ಕಾಲೇಜುಗಳು, ಪದವಿ ಕಾಲೇಜುಗಳನ್ನೂ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇಲ್ಲಿ ಅನೇಕ ಬಂಗಾಳಿ ಕುಟುಂಬಗಳು ವಾಸಿಸುತ್ತಿವೆ. ಹೀಗೆ ಪುನರ್ವಸತಿ ಪಡೆದ ಬಂಗಾಳಿಗಳ ಜಾತಿ ಪ್ರಮಾಣ ಪತ್ರದಿಂದ ಪೂರ್ವಿ ಪಾಕಿಸ್ತಾನ ಎಂಬ ಉಲ್ಲೇಖವನ್ನು ತೆಗೆದು ಹಾಕಿದ್ದಕ್ಕಾಗಿ ಇಲ್ಲಿನ ಸಿಎಂ ಪುಷ್ಕರ್ ಸಿಂಗ್ ಧಮಿಯವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಉತ್ತರಾಖಂಡ್​ನಲ್ಲಿ ಫೆ.14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್​ 10ಕ್ಕೆ ಮತಎಣಿಕೆ ಇದೆ.

ಇದನ್ನೂ ಓದಿ: Shocking News: ಹಸು ಕದ್ದವನ ಅರ್ಧ ತಲೆ, ಮೀಸೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಮೆರವಣಿಗೆ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು