AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಭಾರತವನ್ನು ಒಂದು ರಾಷ್ಟ್ರವೆಂದು ಪರಿಗಣಿಸುತ್ತಿಲ್ಲ; ಪ್ರಧಾನಿ ನರೇಂದ್ರ ಮೋದಿ

ಉತ್ತರಾಖಂಡ್​ನ ರುದ್ರಪುರದಲ್ಲಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಕೊವಿಡ್​ 19 ಪರಿಸ್ಥಿತಿಯಲ್ಲಿ ಉತ್ತರಾಖಂಡ್​ ಸರ್ಕಾರ ಬಡಜನರಿಗೆ ಉಚಿತ ಪಡಿತರ ನೀಡಿದೆ. ಅಷ್ಟೇ ಅಲ್ಲ, ಇನ್ನಿತರ ಯೋಜನೆಗಳ ಮೂಲಕ ಅವರಿಗೆ ಸೌಕರ್ಯಗಳನ್ನು ಒದಗಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಾಂಗ್ರೆಸ್​ ಭಾರತವನ್ನು ಒಂದು ರಾಷ್ಟ್ರವೆಂದು ಪರಿಗಣಿಸುತ್ತಿಲ್ಲ; ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on: Feb 12, 2022 | 6:30 PM

Share

ಉತ್ತರಾಖಂಡ್​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ (Uttarakhand Assembly Election 2022) ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)  ಅಲ್ಲಿ ಪ್ರಚಾರ ಸಭೆ ನಡೆಸಿದರು. ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಮಂತ್ರಿ ಮೋದಿ, ವಿರೋಧ ಪಕ್ಷ ಕಾಂಗ್ರೆಸ್​ ಭಾರತವನ್ನು ಒಂದು ರಾಷ್ಟ್ರವನ್ನಾಗಿ ಪರಿಗಣಿಸಲೂ ಸಿದ್ಧವಿಲ್ಲ ಎಂದು ಹೇಳಿದ್ದಾರೆ. ಈ ಭಾರತವೆಂಬ ರಾಷ್ಟ್ರ ಒಂದೇ. ಆದರೆ ಕಾಂಗ್ರೆಸ್​​ ಭಾರತವನ್ನು ರಾಷ್ಟ್ರವೆಂದು ಒಪ್ಪಿಕೊಳ್ಳುತ್ತಿಲ್ಲ ಎಂದು ಹೇಳಿದ ಅವರು, ನಮ್ಮ ಬಿಜೆಪಿ ಸರ್ಕಾರ ಈ ಉತ್ತರಾಖಂಡ್​ ದೇವಭೂಮಿಯ ದೈವತ್ವವನ್ನು ಸದಾ ಕಾಪಾಡುತ್ತದೆ ಎಂದು ಹೇಳಿದರು.

ಇಂದು ಉತ್ತರಾಖಂಡ್​ನ ರುದ್ರಪುರದಲ್ಲಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಕೊವಿಡ್​ 19 ಪರಿಸ್ಥಿತಿಯಲ್ಲಿ ಉತ್ತರಾಖಂಡ್​ ಸರ್ಕಾರ ಬಡಜನರಿಗೆ ಉಚಿತ ಪಡಿತರ ನೀಡಿದೆ. ಅಷ್ಟೇ ಅಲ್ಲ, ಇನ್ನಿತರ ಯೋಜನೆಗಳ ಮೂಲಕ ಅವರಿಗೆ ಸೌಕರ್ಯಗಳನ್ನು ಒದಗಿಸಿದೆ. ಅದೇ ಏನಾದರೂ ಕಾಂಗ್ರೆಸ್ ಸರ್ಕಾರವಿದ್ದರೆ ಪರಿಸ್ಥಿತಿ ಬೇರೆಯೇ ಇರುತ್ತಿತ್ತು.ಭ್ರಷ್ಟಾಚಾರವೆಂಬುದು ಪ್ರತಿ ಹಂತದಲ್ಲೂ ತಾಂಡವವಾಡುತ್ತಿತ್ತು ಎಂದು ಹೇಳಿದ್ದಾರೆ.  ಉತ್ತರಾಖಂಡ್​​ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಕೊವಿಡ್​ 19ನಿಂದ ಉಂಟಾಗಿದ್ದ ಸವಾಲಿನ ಸಂದರ್ಭದಲ್ಲೂ ಉತ್ತರಾಖಂಡ್​ನಲ್ಲಿ ನಾವು ಹೆದ್ದಾರಿಗಳನ್ನು ನಿರ್ಮಿಸಿದ್ದೇವೆ, ಏರ್​ಪೋರ್ಟ್ ಕಟ್ಟಿದ್ದೇವೆ. ಇನ್ನು ಮುಂದೆ ಕೂಡ ಪರ್ವತ್​ ಮಾಲಾ ಯೋಜನೆಯಡಿ, ಉತ್ತರಾಖಂಡ್​​ನ ದುರ್ಗಮ ಪ್ರದೇಶಗಳಿಗೆ ರೋಪ್​ವೇ ಸೌಲಭ್ಯ ಕಲ್ಪಿಸಲಾಗುವುದು. ಅಷ್ಟೇ ಅಲ್ಲ, ವೈದ್ಯಕೀಯ ಕಾಲೇಜುಗಳು, ಪದವಿ ಕಾಲೇಜುಗಳನ್ನೂ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇಲ್ಲಿ ಅನೇಕ ಬಂಗಾಳಿ ಕುಟುಂಬಗಳು ವಾಸಿಸುತ್ತಿವೆ. ಹೀಗೆ ಪುನರ್ವಸತಿ ಪಡೆದ ಬಂಗಾಳಿಗಳ ಜಾತಿ ಪ್ರಮಾಣ ಪತ್ರದಿಂದ ಪೂರ್ವಿ ಪಾಕಿಸ್ತಾನ ಎಂಬ ಉಲ್ಲೇಖವನ್ನು ತೆಗೆದು ಹಾಕಿದ್ದಕ್ಕಾಗಿ ಇಲ್ಲಿನ ಸಿಎಂ ಪುಷ್ಕರ್ ಸಿಂಗ್ ಧಮಿಯವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಉತ್ತರಾಖಂಡ್​ನಲ್ಲಿ ಫೆ.14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್​ 10ಕ್ಕೆ ಮತಎಣಿಕೆ ಇದೆ.

ಇದನ್ನೂ ಓದಿ: Shocking News: ಹಸು ಕದ್ದವನ ಅರ್ಧ ತಲೆ, ಮೀಸೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಮೆರವಣಿಗೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ