AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Guarantee: ಮೋದಿ ಗ್ಯಾರಂಟಿಗೆ ಪ್ರತಿಯಾಗಿ ರಾಹುಲ್ ಗಾಂಧಿ ಪಂಚ ಗ್ಯಾರಂಟಿ; ಏನವು ಅವರ ಐದು ಭರವಸೆಗಳು

Modi Ki Guarantee vs Rahul Guarantee: ಲೋಕಸಭಾ ಚುನಾವಣೆಯಲ್ಲಿ ಈಗ ಗ್ಯಾರಂಟಿಗಳ ಸಮರ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆಯ ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಎಂಎಸ್​ಪಿಗೆ ಕಾನೂನು ಖಾತ್ರಿ, 30 ಲಕ್ಷ ಸರ್ಕಾರಿ ಉದ್ಯೋಗಗಳ ನೇಮಕಾತಿ ಗ್ಯಾರಂಟಿಗಳು ಇದರಲ್ಲಿ ಒಳಗೊಂಡಿವೆ. ಕಳೆದ 10 ವರ್ಷದಲ್ಲಿ ಖಾಲಿ ಉಳಿದಿರುವ ಕೇಂದ್ರ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

Congress Guarantee: ಮೋದಿ ಗ್ಯಾರಂಟಿಗೆ ಪ್ರತಿಯಾಗಿ ರಾಹುಲ್ ಗಾಂಧಿ ಪಂಚ ಗ್ಯಾರಂಟಿ; ಏನವು ಅವರ ಐದು ಭರವಸೆಗಳು
ರಾಹುಲ್ ಗಾಂಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 07, 2024 | 6:41 PM

Share

ನವದೆಹಲಿ, ಮಾರ್ಚ್ 7: ಕರ್ನಾಟಕದ ಕಾಂಗ್ರೆಸ್​ನಿಂದ ಶುರುವಾದ ಗ್ಯಾರಂಟಿ (congress guarantee) ಭರವಸೆ ಈಗ ಲೋಕ ಸಮರದಲ್ಲಿ ಜೋರಾಗಿ ನಡೆಯುತ್ತಿದೆ. ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ (Modi ki Guarantee) ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಖಾತ್ರಿ ಭರವಸೆಗಳನ್ನು ಕಾಂಗ್ರೆಸ್ ನೀಡಿದೆ. ದೇಶದ ಯುವಕರಿಗೆ ಉದ್ಯೋಗ ಕೊಡುವ ಉದ್ದೇಶ ಪ್ರಧಾನಿ ಮೋದಿಗೆ ಇಲ್ಲ ಎಂದು ಹಂಗಿಸಿರುವ ರಾಹುಲ್ ಗಾಂಧಿ, ಖಾಲಿ ಉಳಿದಿರುವ 30 ಲಕ್ಷ ಸರ್ಕಾರಿ ನೌಕರಿಗಳನ್ನು ಭರ್ತಿ ಮಾಡುವುದಾಗಿ ದೊಡ್ಡ ಭರವಸೆ ಕೂಡ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು

  1. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ
  2. ಗುತ್ತಿಗೆ ಕೆಲಸಗಾರರಿಗೆ (ಗಿಗ್ ವರ್ಕರ್ಸ್) ಸಾಮಾಜಿಕ ಭದ್ರತೆ
  3. ಖಾಲಿ ಇರುವ 30 ಲಕ್ಷ ಸರ್ಕಾರಿ ನೌಕರಿಗಳ ನೇಮಕಾತಿ
  4. ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸೋರಿಕೆ ತಡೆಯಲು ಕಠಿಣ ಕಾನೂನು
  5. ಸ್ಟಾರ್ಟಪ್​ಗಳಿಗೆ 5,000 ಕೋಟಿ ರೂ ಫಂಡ್ ನಿಯೋಜನೆ

ಇದನ್ನೂ ಓದಿ: ಈ ಹಣಕಾಸು ವರ್ಷ ಜಿಡಿಪಿ ದರ ಶೇ. 8ಕ್ಕೆ ಸಮೀಪ: ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಂದಾಜು

ಯುವಕರತ್ತ ಕಾಂಗ್ರೆಸ್ ಚಿತ್ತ…

ಯುವಕರಿಗೆ ಅಪ್ರೆಂಟಿಸ್ ಅಥವಾ ತರಬೇತಿ ಹಕ್ಕು ಒದಗಿಸುವ ಭರವಸೆಯನ್ನು ಕಾಂಗ್ರೆಸ್ ಪರಿಶೀಲಿಸುತ್ತಿದೆ. ಅದರ ಅಡಿಯಲ್ಲಿ ಯುವಸಮುದಾಯಕ್ಕೆ ಅಗತ್ಯ ವೃತ್ತಿಪರ ಶಿಕ್ಷಣದ ವ್ಯವಸ್ಥೆ ಮಾಡುವುದರ ಜೊತೆಗೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಅವರಿಗೆ ಇಂಟರ್ನ್​ಶಿಪ್ ಅಥವಾ ತರಬೇತಿ ಕೊಡಿಸುವುದು ಈ ಯೋಜನೆಯಲ್ಲಿದೆ.

ಯುವಕರನ್ನು ವೃತ್ತಿಪರ ತರಬೇತಿ ಮೂಲಕ ಕೆಲಸಕ್ಕೆ ಅಣಿಗೊಳಿಸುವುದು ಈ ಯೋಜನೆಯ ಉದ್ದೇಶ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Thu, 7 March 24

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್