AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Guarantee: ಮೋದಿ ಗ್ಯಾರಂಟಿಗೆ ಪ್ರತಿಯಾಗಿ ರಾಹುಲ್ ಗಾಂಧಿ ಪಂಚ ಗ್ಯಾರಂಟಿ; ಏನವು ಅವರ ಐದು ಭರವಸೆಗಳು

Modi Ki Guarantee vs Rahul Guarantee: ಲೋಕಸಭಾ ಚುನಾವಣೆಯಲ್ಲಿ ಈಗ ಗ್ಯಾರಂಟಿಗಳ ಸಮರ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆಯ ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಎಂಎಸ್​ಪಿಗೆ ಕಾನೂನು ಖಾತ್ರಿ, 30 ಲಕ್ಷ ಸರ್ಕಾರಿ ಉದ್ಯೋಗಗಳ ನೇಮಕಾತಿ ಗ್ಯಾರಂಟಿಗಳು ಇದರಲ್ಲಿ ಒಳಗೊಂಡಿವೆ. ಕಳೆದ 10 ವರ್ಷದಲ್ಲಿ ಖಾಲಿ ಉಳಿದಿರುವ ಕೇಂದ್ರ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

Congress Guarantee: ಮೋದಿ ಗ್ಯಾರಂಟಿಗೆ ಪ್ರತಿಯಾಗಿ ರಾಹುಲ್ ಗಾಂಧಿ ಪಂಚ ಗ್ಯಾರಂಟಿ; ಏನವು ಅವರ ಐದು ಭರವಸೆಗಳು
ರಾಹುಲ್ ಗಾಂಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 07, 2024 | 6:41 PM

Share

ನವದೆಹಲಿ, ಮಾರ್ಚ್ 7: ಕರ್ನಾಟಕದ ಕಾಂಗ್ರೆಸ್​ನಿಂದ ಶುರುವಾದ ಗ್ಯಾರಂಟಿ (congress guarantee) ಭರವಸೆ ಈಗ ಲೋಕ ಸಮರದಲ್ಲಿ ಜೋರಾಗಿ ನಡೆಯುತ್ತಿದೆ. ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ (Modi ki Guarantee) ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಖಾತ್ರಿ ಭರವಸೆಗಳನ್ನು ಕಾಂಗ್ರೆಸ್ ನೀಡಿದೆ. ದೇಶದ ಯುವಕರಿಗೆ ಉದ್ಯೋಗ ಕೊಡುವ ಉದ್ದೇಶ ಪ್ರಧಾನಿ ಮೋದಿಗೆ ಇಲ್ಲ ಎಂದು ಹಂಗಿಸಿರುವ ರಾಹುಲ್ ಗಾಂಧಿ, ಖಾಲಿ ಉಳಿದಿರುವ 30 ಲಕ್ಷ ಸರ್ಕಾರಿ ನೌಕರಿಗಳನ್ನು ಭರ್ತಿ ಮಾಡುವುದಾಗಿ ದೊಡ್ಡ ಭರವಸೆ ಕೂಡ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು

  1. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ
  2. ಗುತ್ತಿಗೆ ಕೆಲಸಗಾರರಿಗೆ (ಗಿಗ್ ವರ್ಕರ್ಸ್) ಸಾಮಾಜಿಕ ಭದ್ರತೆ
  3. ಖಾಲಿ ಇರುವ 30 ಲಕ್ಷ ಸರ್ಕಾರಿ ನೌಕರಿಗಳ ನೇಮಕಾತಿ
  4. ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸೋರಿಕೆ ತಡೆಯಲು ಕಠಿಣ ಕಾನೂನು
  5. ಸ್ಟಾರ್ಟಪ್​ಗಳಿಗೆ 5,000 ಕೋಟಿ ರೂ ಫಂಡ್ ನಿಯೋಜನೆ

ಇದನ್ನೂ ಓದಿ: ಈ ಹಣಕಾಸು ವರ್ಷ ಜಿಡಿಪಿ ದರ ಶೇ. 8ಕ್ಕೆ ಸಮೀಪ: ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಂದಾಜು

ಯುವಕರತ್ತ ಕಾಂಗ್ರೆಸ್ ಚಿತ್ತ…

ಯುವಕರಿಗೆ ಅಪ್ರೆಂಟಿಸ್ ಅಥವಾ ತರಬೇತಿ ಹಕ್ಕು ಒದಗಿಸುವ ಭರವಸೆಯನ್ನು ಕಾಂಗ್ರೆಸ್ ಪರಿಶೀಲಿಸುತ್ತಿದೆ. ಅದರ ಅಡಿಯಲ್ಲಿ ಯುವಸಮುದಾಯಕ್ಕೆ ಅಗತ್ಯ ವೃತ್ತಿಪರ ಶಿಕ್ಷಣದ ವ್ಯವಸ್ಥೆ ಮಾಡುವುದರ ಜೊತೆಗೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಅವರಿಗೆ ಇಂಟರ್ನ್​ಶಿಪ್ ಅಥವಾ ತರಬೇತಿ ಕೊಡಿಸುವುದು ಈ ಯೋಜನೆಯಲ್ಲಿದೆ.

ಯುವಕರನ್ನು ವೃತ್ತಿಪರ ತರಬೇತಿ ಮೂಲಕ ಕೆಲಸಕ್ಕೆ ಅಣಿಗೊಳಿಸುವುದು ಈ ಯೋಜನೆಯ ಉದ್ದೇಶ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Thu, 7 March 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!