AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಣಿಗೆ ಸಂಗ್ರಹಕ್ಕೆ ಕಾಂಗ್ರೆಸ್​ ಹೊಸ ಯೋಜನೆ, 670 ರೂ. ನೀಡಿ ರಾಹುಲ್ ಹಸ್ತಾಕ್ಷರ ಇರುವ ಟಿ-ಶರ್ಟ್​ ಪಡೆಯಿರಿ

ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra) ಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಶನಿವಾರ ಕ್ರೌಡ್ ಫಂಡಿಂಗ್ ಅಭಿಯಾನವನ್ನು ಆರಂಭಿಸಿದೆ. ಅದಕ್ಕೆ ಪಕ್ಷವು ಡೊನೇಟ್ ಫಾರ್ ಜಸ್ಟಿಸ್ ಎಂದು ಹೆಸರಿಟ್ಟಿದೆ. ಈ ಅಭಿಯಾನದಡಿ ದೇಣಿಗೆ ನೀಡುವವರಿಗೆ ರಾಹುಲ್ ಗಾಂಧಿ(Rahul Gandhi) ಅವರ ಹಸ್ತಾಕ್ಷರ ಇರುವ ಟಿ- ಶರ್ಟ್ ಮತ್ತು ಯಾತ್ರೆಗೆ ಸಂಬಂಧಿಸಿದ ಇತರ ಕೆಲವು ಸಾಮಗ್ರಿಗಳು ಸಿಗಲಿವೆ.

ದೇಣಿಗೆ ಸಂಗ್ರಹಕ್ಕೆ ಕಾಂಗ್ರೆಸ್​ ಹೊಸ ಯೋಜನೆ, 670 ರೂ. ನೀಡಿ ರಾಹುಲ್ ಹಸ್ತಾಕ್ಷರ ಇರುವ ಟಿ-ಶರ್ಟ್​ ಪಡೆಯಿರಿ
ರಾಹುಲ್ ಗಾಂಧಿImage Credit source: Mint
ನಯನಾ ರಾಜೀವ್
|

Updated on: Jan 28, 2024 | 8:45 AM

Share

ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra) ಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಶನಿವಾರ ಕ್ರೌಡ್ ಫಂಡಿಂಗ್ ಅಭಿಯಾನವನ್ನು ಆರಂಭಿಸಿದೆ. ಅದಕ್ಕೆ ಪಕ್ಷವು ಡೊನೇಟ್ ಫಾರ್ ಜಸ್ಟಿಸ್ ಎಂದು ಹೆಸರಿಟ್ಟಿದೆ. ಈ ಅಭಿಯಾನದಡಿ ದೇಣಿಗೆ ನೀಡುವವರಿಗೆ ರಾಹುಲ್ ಗಾಂಧಿ(Rahul Gandhi) ಅವರ ಹಸ್ತಾಕ್ಷರ ಇರುವ ಟಿ- ಶರ್ಟ್ ಮತ್ತು ಯಾತ್ರೆಗೆ ಸಂಬಂಧಿಸಿದ ಇತರ ಕೆಲವು ಸಾಮಗ್ರಿಗಳು ಸಿಗಲಿವೆ.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆ 67 ದಿನಗಳ ಕಾಲ ನಡೆಯಲಿದೆ ಎಂದು ಪಕ್ಷದ ಖಜಾಂಚಿ ಅಜಯ್ ಮಾಕೆನ್ ಹೇಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ವ್ಯಕ್ತಿ ಕನಿಷ್ಠ 67 ಅಥವಾ 670 ರೂ, 6700, 67000 ಅಥವಾ 6.7 ಲಕ್ಷದವರೆಗೆ ದೇಣಿಗೆ ನೀಡಬಹುದು.

ಈ ಹಿಂದೆ ಕಾಂಗ್ರೆಸ್ ನಡೆಸುತ್ತಿದ್ದ ‘ದೇಶಕ್ಕಾಗಿ ದೇಣಿಗೆ’ ಅಭಿಯಾನದ ಅಡಿಯಲ್ಲಿ, ಒಂದು ತಿಂಗಳಲ್ಲಿ 17 ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಸಂಗ್ರಹಿಸಲಾಗಿತ್ತು. ದೇಣಿಗೆ ಸಂಗ್ರಹಿಸುವುದು ಮಾತ್ರವಲ್ಲದೆ ಲೋಕಸಭೆ ಚುನಾವಣೆಗೂ ಮುನ್ನ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ಮತ್ತಷ್ಟು ಓದಿ: ಭಾರತ್ ಜೋಡೋ ನ್ಯಾಯ್ ಯಾತ್ರೆ: ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ

ಪಕ್ಷಕ್ಕೆ 670 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚು ದೇಣಿಗೆ ನೀಡುವವರಿಗೆ ರಾಹುಲ್ ಗಾಂಧಿ ಅವರ ಸಹಿ ಇರುವ ಟಿ-ಶರ್ಟ್ ನೀಡಲಾಗುವುದು ಎಂದು ಮಾಕೆನ್ ಹೇಳಿದ್ದಾರೆ.

ಕಾಂಗ್ರೆಸ್‌ನ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಜನವರಿ 14 ರಂದು ಮಣಿಪುರದಿಂದ ಪ್ರಾರಂಭವಾಯಿತು. ಯಾತ್ರೆಯು 6,713 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ ಮತ್ತು 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ ಮತ್ತು ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಡೊನೇಟ್ ಫಾರ್ ಜಸ್ಟಿಸ್ ಅಭಿಯಾನ ಆರಂಭಿಸಿದ ಎರಡು ಗಂಟೆಯಲ್ಲಿ 2 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಿದ್ದಾರೆ. 67,000 ಅಥವಾ ಅದಕ್ಕಿಂತ ಹೆಚ್ಚು ದೇಣಿಗೆ ನೀಡುವವರಿಗೆ ನ್ಯಾಯ ಕಿಟ್ ನೀಡಲಾಗುವುದು, ಅದರಲ್ಲಿ ಟಿ-ಶರ್ಟ್, ಬ್ಯಾಗ್, ಬ್ಯಾಂಡ್, ಬ್ಯಾಡ್ಜ್ ಮತ್ತು ಸ್ಟಿಕ್ಕರ್ ಇರುತ್ತದೆ.

ಡಿಸೆಂಬರ್ 18, 2023 ರಂದು ಪಕ್ಷವು ಪ್ರಾರಂಭಿಸಿದ ಡೊನೇಟ್ ಫಾರ್ ದೇಶ್ ಕ್ರೌಡ್‌ಫಂಡಿಂಗ್ ಅಭಿಯಾನದ ಮೂಲಕ ಇದುವರೆಗೆ ಒಟ್ಟು 20 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ