AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಣಿಗೆ ಸಂಗ್ರಹಕ್ಕೆ ಕಾಂಗ್ರೆಸ್​ ಹೊಸ ಯೋಜನೆ, 670 ರೂ. ನೀಡಿ ರಾಹುಲ್ ಹಸ್ತಾಕ್ಷರ ಇರುವ ಟಿ-ಶರ್ಟ್​ ಪಡೆಯಿರಿ

ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra) ಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಶನಿವಾರ ಕ್ರೌಡ್ ಫಂಡಿಂಗ್ ಅಭಿಯಾನವನ್ನು ಆರಂಭಿಸಿದೆ. ಅದಕ್ಕೆ ಪಕ್ಷವು ಡೊನೇಟ್ ಫಾರ್ ಜಸ್ಟಿಸ್ ಎಂದು ಹೆಸರಿಟ್ಟಿದೆ. ಈ ಅಭಿಯಾನದಡಿ ದೇಣಿಗೆ ನೀಡುವವರಿಗೆ ರಾಹುಲ್ ಗಾಂಧಿ(Rahul Gandhi) ಅವರ ಹಸ್ತಾಕ್ಷರ ಇರುವ ಟಿ- ಶರ್ಟ್ ಮತ್ತು ಯಾತ್ರೆಗೆ ಸಂಬಂಧಿಸಿದ ಇತರ ಕೆಲವು ಸಾಮಗ್ರಿಗಳು ಸಿಗಲಿವೆ.

ದೇಣಿಗೆ ಸಂಗ್ರಹಕ್ಕೆ ಕಾಂಗ್ರೆಸ್​ ಹೊಸ ಯೋಜನೆ, 670 ರೂ. ನೀಡಿ ರಾಹುಲ್ ಹಸ್ತಾಕ್ಷರ ಇರುವ ಟಿ-ಶರ್ಟ್​ ಪಡೆಯಿರಿ
ರಾಹುಲ್ ಗಾಂಧಿImage Credit source: Mint
ನಯನಾ ರಾಜೀವ್
|

Updated on: Jan 28, 2024 | 8:45 AM

Share

ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra) ಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಶನಿವಾರ ಕ್ರೌಡ್ ಫಂಡಿಂಗ್ ಅಭಿಯಾನವನ್ನು ಆರಂಭಿಸಿದೆ. ಅದಕ್ಕೆ ಪಕ್ಷವು ಡೊನೇಟ್ ಫಾರ್ ಜಸ್ಟಿಸ್ ಎಂದು ಹೆಸರಿಟ್ಟಿದೆ. ಈ ಅಭಿಯಾನದಡಿ ದೇಣಿಗೆ ನೀಡುವವರಿಗೆ ರಾಹುಲ್ ಗಾಂಧಿ(Rahul Gandhi) ಅವರ ಹಸ್ತಾಕ್ಷರ ಇರುವ ಟಿ- ಶರ್ಟ್ ಮತ್ತು ಯಾತ್ರೆಗೆ ಸಂಬಂಧಿಸಿದ ಇತರ ಕೆಲವು ಸಾಮಗ್ರಿಗಳು ಸಿಗಲಿವೆ.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆ 67 ದಿನಗಳ ಕಾಲ ನಡೆಯಲಿದೆ ಎಂದು ಪಕ್ಷದ ಖಜಾಂಚಿ ಅಜಯ್ ಮಾಕೆನ್ ಹೇಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ವ್ಯಕ್ತಿ ಕನಿಷ್ಠ 67 ಅಥವಾ 670 ರೂ, 6700, 67000 ಅಥವಾ 6.7 ಲಕ್ಷದವರೆಗೆ ದೇಣಿಗೆ ನೀಡಬಹುದು.

ಈ ಹಿಂದೆ ಕಾಂಗ್ರೆಸ್ ನಡೆಸುತ್ತಿದ್ದ ‘ದೇಶಕ್ಕಾಗಿ ದೇಣಿಗೆ’ ಅಭಿಯಾನದ ಅಡಿಯಲ್ಲಿ, ಒಂದು ತಿಂಗಳಲ್ಲಿ 17 ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಸಂಗ್ರಹಿಸಲಾಗಿತ್ತು. ದೇಣಿಗೆ ಸಂಗ್ರಹಿಸುವುದು ಮಾತ್ರವಲ್ಲದೆ ಲೋಕಸಭೆ ಚುನಾವಣೆಗೂ ಮುನ್ನ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ಮತ್ತಷ್ಟು ಓದಿ: ಭಾರತ್ ಜೋಡೋ ನ್ಯಾಯ್ ಯಾತ್ರೆ: ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ

ಪಕ್ಷಕ್ಕೆ 670 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚು ದೇಣಿಗೆ ನೀಡುವವರಿಗೆ ರಾಹುಲ್ ಗಾಂಧಿ ಅವರ ಸಹಿ ಇರುವ ಟಿ-ಶರ್ಟ್ ನೀಡಲಾಗುವುದು ಎಂದು ಮಾಕೆನ್ ಹೇಳಿದ್ದಾರೆ.

ಕಾಂಗ್ರೆಸ್‌ನ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಜನವರಿ 14 ರಂದು ಮಣಿಪುರದಿಂದ ಪ್ರಾರಂಭವಾಯಿತು. ಯಾತ್ರೆಯು 6,713 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ ಮತ್ತು 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ ಮತ್ತು ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಡೊನೇಟ್ ಫಾರ್ ಜಸ್ಟಿಸ್ ಅಭಿಯಾನ ಆರಂಭಿಸಿದ ಎರಡು ಗಂಟೆಯಲ್ಲಿ 2 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಿದ್ದಾರೆ. 67,000 ಅಥವಾ ಅದಕ್ಕಿಂತ ಹೆಚ್ಚು ದೇಣಿಗೆ ನೀಡುವವರಿಗೆ ನ್ಯಾಯ ಕಿಟ್ ನೀಡಲಾಗುವುದು, ಅದರಲ್ಲಿ ಟಿ-ಶರ್ಟ್, ಬ್ಯಾಗ್, ಬ್ಯಾಂಡ್, ಬ್ಯಾಡ್ಜ್ ಮತ್ತು ಸ್ಟಿಕ್ಕರ್ ಇರುತ್ತದೆ.

ಡಿಸೆಂಬರ್ 18, 2023 ರಂದು ಪಕ್ಷವು ಪ್ರಾರಂಭಿಸಿದ ಡೊನೇಟ್ ಫಾರ್ ದೇಶ್ ಕ್ರೌಡ್‌ಫಂಡಿಂಗ್ ಅಭಿಯಾನದ ಮೂಲಕ ಇದುವರೆಗೆ ಒಟ್ಟು 20 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ