AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್

Indira Gandhi Death Anniversary ನನ್ನ ಅಜ್ಜಿ ಕೊನೆಯ ಕ್ಷಣದವರೆಗೂ ನಿರ್ಭೀತಿಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು ಅವರ ಜೀವನ ನಮಗೆ ಸ್ಫೂರ್ತಿಯ ಮೂಲವಾಗಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್
ಇಂದಿರಾ ಗಾಂಧಿ ಸಮಾಧಿಗೆ ರಾಹುಲ್ ಗಾಂಧಿ ಪುಷ್ಪಾರ್ಚನೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 31, 2021 | 1:45 PM

Share

ದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯಂದು (Indira Gandhi  death anniversary) ಕಾಂಗ್ರೆಸ್ ಪಕ್ಷ ಮತ್ತು ಹಲವಾರು ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರು ನವದೆಹಲಿಯಲ್ಲಿ ಇಂದಿರಾ ಗಾಂಧಿ ಅವರ ಸ್ಮಾರಕ “ಶಕ್ತಿ ಸ್ಥಳ” (Shakti Sthal)ದಲ್ಲಿ ಪುಷ್ಪ ನಮನ ಸಲ್ಲಿಸುವ ಸಂದರ್ಭದಲ್ಲಿ ಇಂದಿರಾಗಾಂಧಿ ನಾರಿಶಕ್ತಿಗೆ ಉತ್ತಮ ಉದಾಹರಣೆ ಎಂದು ಶ್ಲಾಘಿಸಿದರು. 1984ರಲ್ಲಿ ಇದೇ ದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರ ಇಬ್ಬರು ಭದ್ರತಾ ಸಿಬ್ಬಂದಿಯಿಂದ ಹತ್ಯೆಗೀಡಾಗಿದ್ದರು.

ನನ್ನ ಅಜ್ಜಿ ಕೊನೆಯ ಕ್ಷಣದವರೆಗೂ ನಿರ್ಭೀತಿಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು ಅವರ ಜೀವನ ನಮಗೆ ಸ್ಫೂರ್ತಿಯ ಮೂಲವಾಗಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. “ಮಹಿಳಾ ಶಕ್ತಿಯ ಅತ್ಯುತ್ತಮ ಉದಾಹರಣೆ, ಇಂದಿರಾ ಗಾಂಧಿಯವರ ಹುತಾತ್ಮ ದಿನದಂದು ಅವರಿಗೆ ನಮ್ರ ಗೌರವಗಳು” ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವೂ ಮಾಜಿ ಪ್ರಧಾನಿ ದೇಶಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದೆ. “ಅವರು ಶಕ್ತಿಯನ್ನು ಪ್ರತಿನಿಧಿಸಿದಳರು. ತ್ಯಾಗವನ್ನು ಸಾಕಾರಗೊಳಿಸಿದರು, ಸೇವೆಯನ್ನು ವ್ಯಕ್ತಿಗತಗೊಳಿಸಿದಳು. ಭಾರತದ ಉಕ್ಕಿನ ಮಹಿಳೆ, ನಮ್ಮ ಮೊದಲ ಮಹಿಳಾ ಪ್ರಧಾನ ಮಂತ್ರಿ, ನಿಜವಾದ ಭಾರತ ರತ್ನ, ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಶತಕೋಟಿ ನಮಸ್ಕಾರಗಳು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ನಾಯಕ ಮತ್ತು ಸಂಸದ ಶಶಿ ತರೂರ್ ಕೂಡ ಇಂದಿರಾ ಗಾಂದಿ ಚಿತ್ರವನ್ನು ಹಂಚಿಕೊಂಡಿದ್ದು ಹುತಾತ್ಮರ ನೆನಪು ಎಂದು ಬರೆದಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ