AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Results 2022 ಗುಜರಾತ್​ನಲ್ಲಿ ಕಾಂಗ್ರೆಸ್ ಸೋಲು, ಹಿಮಾಚಲ ಪ್ರದೇಶದಲ್ಲಿ ಗೆಲುವು: ಇಲ್ಲಿದೆ ಖರ್ಗೆ ಮಾತು

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಒಂದು ಕಡೆ ಕಾಂಗ್ರೆಸ್ ಗೆದ್ದರೆ ಮತ್ತೊಂದೆಡೆ ಬಿಜೆಪಿ ಬಿಜೆಪಿ ಅಧಿಕಾರಕ್ಕೇರಿದೆ. ಇನ್ನೂ ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಸೋಲು-ಗೆಲುವಿಗೆ ಕಾರಣಗಳನ್ನು ಕೊಟ್ಟಿದ್ದಾರೆ.

Assembly Election Results 2022 ಗುಜರಾತ್​ನಲ್ಲಿ ಕಾಂಗ್ರೆಸ್ ಸೋಲು, ಹಿಮಾಚಲ ಪ್ರದೇಶದಲ್ಲಿ ಗೆಲುವು: ಇಲ್ಲಿದೆ ಖರ್ಗೆ ಮಾತು
ಗಾಡ್ ಫಾದರ್ ಇಲ್ಲದೇ ರಾಜಕೀಯದಲ್ಲಿ ಬೆಳೆದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​ ಅಧ್ಯಕ್ಷರಾದರು! ಖರ್ಗೆ ಜೀವನಗಾಥೆ ಇಲ್ಲಿದೆ
TV9 Web
| Edited By: |

Updated on: Dec 08, 2022 | 6:50 PM

Share

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ(Himachal Pradesh Election Results 2022) ಕಾಂಗ್ರೆಸ್ ಭರ್ಜರಿಯಾಗಿ ಗೆಲುವು ಸಾಧಿಸಿದರೆ, ಗುಜರಾತ್​ನಲ್ಲಿ (Gujarat) ಮಕಾಡೆ ಮಲಗಿದೆ. ಇನ್ನು ಈ ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರತಿಕ್ರಿಯಿಸಿದ್ದು, ​ಕಳೆದ ಒಂದು ವರ್ಷದಿಂದಲೂ ಮೋದಿ ಪ್ರಚಾರ ಮಾಡಿದ್ದಾರೆ. ನರೇಂದ್ರ ಮೋದಿ(Narendra Modi) ನಾನು ಈ ಮಣ್ಣಿನ ಮಗ ಎಂದು ಹೇಳಿದ್ದರು. ರೋಡ್​ ಶೋ, ನಡೆದುಕೊಂಡು ಬಂದು ಮತದಾನ ಮಾಡಿ ಗಿಮಿಕ್​ ಮಾಡಿದ್ದಾರೆ. ಬಿಜೆಪಿ(BJP), ನರೇಂದ್ರ ಮೋದಿ ಗಿಮಿಕ್​ಗಳೇ ನಮ್ಮ ಸೋಲಿಗೆ ಕಾರಣ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ ಎಂದು ಎಎಪಿ ಪ್ರವೇಶದಿಂದ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: Assembly Election Results 2022 LIVE: ಗುಜರಾತ್​ನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಜಯಭೇರಿ

ಗುಜರಾತ್​ನಲ್ಲಿ ಕಾಂಗ್ರೆಸ್ ಸೋಲಿಗೆ ಸಾಕಷ್ಟು ಕಾರಣಗಳಿವೆ. ಪ್ರಚಾರ ಮಾಡದಿದ್ದರಿಂದ ಪಕ್ಷ ಇಷ್ಟು ಕೆಳಮಟ್ಟಕ್ಕೆ ಇಳಿದಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಿಗೆ ಭೇಟಿ ನೀಡಿದ್ದೆವು. ಆದರೂ ಹಲವೆಡೆ ಬಹಳ ಕಡಿಮೆ ಅಂತರದಿಂದ ಸೋತಿದ್ದೆವು. ಈ ಬಾರಿ ಹೊಸ ಪಕ್ಷ ನಮ್ಮ ಮತಗಳನ್ನು ಕೆಡಿಸಿವೆ ಎಂದು ಸ್ಪಷ್ಟಪಡಿಸಿದರು.

ಗುಜರಾತ್ ಸೋಲಿಗೆ ಸಾಕಷ್ಟು ಕಾರಣಗಳಿವೆ. ಪಕ್ಷ ಇಷ್ಟು ಕೆಳ ಮಟ್ಟಕ್ಕೆ ಬರಲು ಕ್ಯಾಂಪೇನ್ ಮಾಡಿಲ್ಲ. ಕಳೆದ ಬಾರಿ ಅತೀ ಹೆಚ್ಚು ಕ್ಷೇತ್ರ ಭೇಟಿ ಕೊಟ್ಟಿದ್ದೇವು. ಆದ್ರೆ ಹಲವು ಕಡೆ ಕಡಿಮೆ ಅಂತರದಲ್ಲಿ ಸೋತಿದ್ದೇವು. ಈ ಸಲ ಕೆಲವು ಪಕ್ಷ ಹೊಸದಾಗಿ ಬಂದು ನಮ್ಮ ಮತ ಕೆಡಿಸಿವೆ. ವೈಚಾರಿಕವಾಗಿ, ಸೈಂದಾಂತಿಕವಾಗಿ ಕಾರಣವಾಗಿದೆ. ಒಂದು ವರ್ಷದಿಂದ ಮೋದಿ ಪ್ರಚಾರ ಮಾಡಿದ್ದಾರೆ. ಮಣ್ಣಿನ ಮಗ ಅಂತಾ ಹೇಳಿದ್ದು, ದಾಖಲೆಯ ರೋಡ್ ಶೋ, ಮತದಾನದ ದಿನ ನಡೆದುಕೊಂಡು ಬಂದು ಮತದಾನ ಮಾಡಿದ ಗಿಮಿಕ್ ಗಳು ನಮ್ಮ ಸೋಲಿಗೆ ಕಾರಣ. ಅವರ ಪ್ರಚಾರದ ಹಕ್ಕು ಅವರು ಮಾಡಿದ್ದಾರೆ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ ಎಂದು ಪರೋಕ್ಷವಾಗಿ ಆಮ್ ಆದ್ಮಿ ಪಕ್ಷವೇ ನಮ್ಮ ಸೋಲಿಗೆ ಕಾರಣ ಎಂದರು.

ಇದನ್ನೂ ಓದಿ: Himachal Pradesh Poll Results 2022 ಹಿಮಾಚಲದಲ್ಲಿ ಗದ್ದುಗೆ ಹಿಡಿದ್ರೂ ಸಿಎಂ ಆಯ್ಕೆ ಕಗ್ಗಂಟು: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು..?

ಹಿಮಾಚಲ ಪ್ರದೇಶ ಫಲಿತಾಂಶದ ಖರ್ಗೆ ಮಾತು

ಇನ್ನು ಇದೇ ವೇಳೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಗೆಲುವಿನ ಬಗ್ಗೆ ಮಾತನಾಡಿರುವ ಖರ್ಗೆ, ಆ ರಾಜ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮದ ಪಟ್ಟಿ ನೀಡಿದ್ದೆವು. ಆದ್ದರಿಂದ ಹಿಮಾಚಲ ಪ್ರದೇಶದ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಹಿಮಾಚಲ ಪ್ರದೇಶದ ಗೆಲುವಿನಲ್ಲಿ ಪ್ರಿಯಾಂಕಾ ಪಾತ್ರವೂ ಇದೆ. ರ್ಯಾಲಿ, ಸಮಾವೇಶ ನಡೆಸಿ ಪಕ್ಷದ ಗೆಲುವಿಗೆ ಕಾರಣರಾಗಿದ್ದಾರೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹಿಮಾಚಲ ಪ್ರದೇಶ ರಾಜ್ಯದ ಜನ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದರು. ನಾನು ಹಿಮಾಚಲ ಪ್ರದೇಶಕ್ಕೆ ಹೋದಾಗ ಉತ್ತಮ ಸ್ಪಂದನೆ ಸಿಕ್ಕಿತ್ತು.ಹೀಗಾಗಿ ಉತ್ತಮ ಬಹುಮತದಿಂದ ಪಕ್ಷಕ್ಕೆ ಗೆಲುವು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ