AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಣಿಗೆ ಸಂಗ್ರಹ: ಕಾಂಗ್ರೆಸ್ ಪಕ್ಷದ ಡೊನೇಟ್ ಫಾರ್ ದೇಶ್ ಅಭಿಯಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

ಕಾಂಗ್ರೆಸ್ ಪಕ್ಷ 138 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಡೊನೇಟ್ ಫಾರ್ ದೇಶ್ ಅಭಿಯಾನ ಆರಂಭಿಸಲಾಗಿದೆ. ಅಭಿಯಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಮೂಲಕ ದಾನಿಗಳು  ₹ 138 ಅಥವಾ ₹ 1,380 ಅಥವಾ ₹ 13,800 ದೇಣಿಗೆ ನೀಡಬಹುದು.

ದೇಣಿಗೆ ಸಂಗ್ರಹ: ಕಾಂಗ್ರೆಸ್ ಪಕ್ಷದ ಡೊನೇಟ್ ಫಾರ್ ದೇಶ್ ಅಭಿಯಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ
ಮಲ್ಲಿಕಾರ್ಜುನ ಖರ್ಗೆ
Follow us
ರಶ್ಮಿ ಕಲ್ಲಕಟ್ಟ
|

Updated on:Dec 18, 2023 | 12:45 PM

ದೆಹಲಿ ಡಿಸೆಂಬರ್ 18: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ನಿಧಿ ಸಂಗ್ರಹಿಸಲು ಪಕ್ಷದ ಡೊನೇಟ್ ಫಾರ್ ದೇಶ್ ಅಭಿಯಾನಕ್ಕೆ (Donate for Desh campaign) ಇಂದು (ಸೋಮವಾರ) ಚಾಲನೆ ನೀಡಿದ್ದಾರೆ. “ಕಾಂಗ್ರೆಸ್ ದೇಶಕ್ಕಾಗಿ ದೇಣಿಗೆ ಕೇಳುತ್ತಿರುವುದು ಇದೇ ಮೊದಲು, ನೀವು ಶ್ರೀಮಂತರನ್ನು ಅವಲಂಬಿಸಿ ಕೆಲಸ ಮಾಡಿದರೆ, ನಂತರ ನೀವು ಅವರ ನೀತಿಗಳನ್ನು ಅನುಸರಿಸಬೇಕು. ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಾರ್ವಜನಿಕರಿಂದ ದೇಣಿಗೆ ಪಡೆದರು ಎಂದು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

“ದೇಶಕ್ಕಾಗಿ ದೇಣಿಗೆ ನೀಡಿ” (Donate for Desh )ಅಭಿಯಾನವು “ಅಂಚಿಗೆ ಒಳಗಾದ ಸಮುದಾಯಗಳ ಹಕ್ಕುಗಳು, ಅಸಮಾನತೆಗಳನ್ನು ನಿವಾರಿಸುವುದು ಮತ್ತು ಶ್ರೀಮಂತರಿಗೆ ಒಲವು ತೋರುವ ಸರ್ಕಾರದ ವಿರುದ್ಧ ಅಸಾಧಾರಣ ವಿರೋಧವಾಗಿ ನಿಲ್ಲುವ ಬದ್ಧತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ 138 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಆರಂಭಿಸಲಾಗಿದೆ. ಕಾಂಗ್ರೆಸ್ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಮೂಲಕ ದಾನಿಗಳು  ₹ 138 ಅಥವಾ ₹ 1,380 ಅಥವಾ ₹ 13,800 ದೇಣಿಗೆ ನೀಡಬಹುದು. ಆದಾಗ್ಯೂ, ದಾನಿಯು ಬೇರೆ ಮೊತ್ತವನ್ನು ದೇಣಿಗೆ ಮಾಡುವ  ಆಯ್ಕೆಯೂ ಇಲ್ಲಿದೆ.

ಸಮಾರಂಭದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿ, ಕ್ರೌಡ್‌ಫಂಡಿಂಗ್ ಉಪಕ್ರಮವು 1920-21ರಲ್ಲಿ ಪ್ರಾರಂಭವಾದ ಮಹಾತ್ಮ ಗಾಂಧಿಯವರ ಐತಿಹಾಸಿಕ ‘ತಿಲಕ್ ಸ್ವರಾಜ್ ನಿಧಿ’ಯಿಂದ ಪ್ರೇರಿತವಾಗಿದೆ ಎಂದು ಹೇಳಿದರು.

ಈ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುವಂತೆ ಎಲ್ಲಾ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಡಿಸೆಂಬರ್ 28 ರಂದು ಪಕ್ಷದ ಸಂಸ್ಥಾಪನಾ ದಿನದವರೆಗೆ ಚಾಲನೆಯು ಪ್ರಾಥಮಿಕವಾಗಿ ಆನ್‌ಲೈನ್‌ನಲ್ಲಿರುತ್ತದೆ, ನಂತರ ಕಾಂಗ್ರೆಸ್ ಸ್ವಯಂಸೇವಕರು ಕನಿಷ್ಠ ₹ 138 ರ ಕೊಡುಗೆಗಾಗಿ ಮನೆ-ಮನೆಗೆ ಹೋಗುತ್ತಾರೆ.

ಕಳೆದ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ 2018 ರಲ್ಲಿ ಔಟ್ರೀಚ್-ಕಮ್-ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿತ್ತು, ಆದರೆ ಅದು ಹೆಚ್ಚು ವೇಗವನ್ನು ಪಡೆಯಲಿಲ್ಲ. ಪಕ್ಷದಲ್ಲಿ ಹಣದ ಕೊರತೆ ಹೊಂದಿದ್ದು, ಅಧಿಕ ಸಾಮರ್ಥ್ಯ ಹೊಂದಿರುವ ಬಿಜೆಪಿಯನ್ನು ಎದುರಿಸಲು ಹೆಣಗಾಡುತ್ತಿದೆ ಎಂದು ಹೇಳಿದೆ. ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಈ ಯೋಜನೆಯನ್ನು ರೂಪಿಸಿರುವುದರಿಂದ ಬಿಜೆಪಿ ಬಹುಪಾಲು ಚುನಾವಣಾ ಬಾಂಡ್‌ಗಳನ್ನು ಸಂಗ್ರಹಿಸುತ್ತಿದೆ ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

60 ವರ್ಷಗಳಿಂದ ಭಾರತವನ್ನು ಲೂಟಿ ಮಾಡಿದವರು ಈಗ ನಿಧಿ ಹುಡುಕಲು ಹೊರಟಿದ್ದಾರೆ ಎಂದು ಬಿಜೆಪಿ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಲೇವಡಿ ಮಾಡಿದೆ. ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಆವರಣದಿಂದ ಭಾರೀ ಪ್ರಮಾಣದ ನಗದು ದಂಧೆಯಿಂದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ ಎಂದು ಆಡಳಿತ ಪಕ್ಷ ಹೇಳಿಕೊಂಡಿದೆ.

ಮಹಾತ್ಮಾ ಗಾಂಧಿಯವರ ಐತಿಹಾಸಿಕ ತಿಲಕ್ ಸ್ವರಾಜ್ ನಿಧಿಯಿಂದ ಪ್ರೇರಿತವಾದ ಈ ಕ್ರೌಡ್‌ಸೋರ್ಸಿಂಗ್‌ನ ಬಗ್ಗೆ ಕಾಂಗ್ರೆಸ್ ಮಾತುಗಳಿಗೇ ಮೂರ್ಖರಾಗಬೇಡಿ. ಅವರು ಮಹಾತ್ಮ ಮತ್ತು ತಿಲಕರಿಬ್ಬರನ್ನೂ ಕಳಂಕಗೊಳಿಸುತ್ತಾರೆ. ಅವರ ಹಿಂದಿನ ದಾಖಲೆಯ ಪ್ರಕಾರ, ಇದು ಸಾರ್ವಜನಿಕ ಹಣವನ್ನು ಲೂಟಿ ಮಾಡುವ ಮತ್ತು ಗಾಂಧಿಗಳನ್ನು ಶ್ರೀಮಂತಗೊಳಿಸುವ ಮತ್ತೊಂದು ಪ್ರಯತ್ನ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿನ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ವಾರಣಾಸಿ: ಸ್ವರ್ವೇದ್ ಮಹಾಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ 

ಜನರು ಕಷ್ಟಪಟ್ಟು ದುಡಿದ ಹಣವನ್ನು ಅವರು ದಾನ ಮಾಡಿದರೆ ಉತ್ತಮ ಜೀವನವನ್ನು ಆನಂದಿಸುವ ಗಾಂಧಿಗಳಿಗೆ ಹೋಗುತ್ತದೆ. ಇದರಿಂದ ಏನೇನೂ ಸಾಧಿಸುವುದಿಲ್ಲ.ಆದರೆ ಇನ್ನೊಂದು ವಿಧಾನವೆಂದರೆ ಕಪ್ಪು ಹಣವನ್ನು ಕೇಳುವುದು. ಈಗ ನೋಡಿ ಕಾಂಗ್ರೆಸ್ ಸಂಸದ ಧೀರಜ್ ಸಾಹು ಸಿಕ್ಕಿಬಿದ್ದಿದ್ದಾರೆ. ಕುಟುಂಬ ರಾಜಕಾರಣಕ್ಕಾಗಿ ದೇಣಿಗೆ ನೀಡಬೇಡಿ ಎಂದಿದ್ದಾರೆ ಮಾಳವಿಯಾ.

ಸಾಹು ಅವರ ಕುಟುಂಬದ ಒಡೆತನದ ಒಡಿಶಾ ಮೂಲದ ಡಿಸ್ಟಿಲರಿ ಸಂಸ್ಥೆ ಮತ್ತು ಸಂಬಂಧಿತ ಘಟಕಗಳ ವಿರುದ್ಧ ಆದಾಯ ತೆರಿಗೆ ಇಲಾಖೆಯ ದಾಳಿಗಳು ₹ 351 ಕೋಟಿಗೂ ಹೆಚ್ಚು ನಗದು ಮೊತ್ತವನ್ನು ಪತ್ತೆಹಚ್ಚಿವೆ. ಈ ಪ್ರಕರಣದಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದೆ. ಆದಾಗ್ಯೂ,ಸಾಹು ವ್ಯವಹಾರಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಅಂತರ ಕಾಪಾಡಿಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 18 December 23

ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ