AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ-23 ಸಭೆಯ ನಂತರ ಕಾಂಗ್ರೆಸ್​​ನ ಹಿರಿಯ ನಾಯಕ ಭೂಪಿಂದರ್ ಸಿಂಗ್​​ ಹೂಡಾ ಭೇಟಿ ಮಾಡಿದ ರಾಹುಲ್​​ ಗಾಂಧಿ

ಸಭೆಯ ನಂತರ  ಹರಿಯಾಣದ ಮಾಜಿ ಮುಖ್ಯಮಂತ್ರಿ ಹೂಡಾ ಅವರು ಜಿ -23 ರ ಭಾಗವಾಗಿರುವ ಗುಲಾಂ ನಬಿ ಆಜಾದ್ ಅವರ ನಿವಾಸಕ್ಕೆ ಭೇಟಿ ನೀಡಿದರು

ಜಿ-23 ಸಭೆಯ ನಂತರ ಕಾಂಗ್ರೆಸ್​​ನ ಹಿರಿಯ ನಾಯಕ ಭೂಪಿಂದರ್ ಸಿಂಗ್​​ ಹೂಡಾ ಭೇಟಿ ಮಾಡಿದ ರಾಹುಲ್​​ ಗಾಂಧಿ
ರಾಹುಲ್ ಗಾಂಧಿ- ಹೂಡಾ
TV9 Web
| Edited By: |

Updated on: Mar 17, 2022 | 6:14 PM

Share

ದೆಹಲಿ: G-23 ನಾಯಕರ ನಿರ್ಣಾಯಕ ಸಭೆಯ ಒಂದು ದಿನದ ನಂತರ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರು ಗುರುವಾರ ಭೂಪಿಂದರ್ ಸಿಂಗ್ ಹೂಡಾ (Bhupinder Singh Hooda) ಅವರನ್ನು ಭೇಟಿ ಮಾಡಿದರು. ಇವರಿಬ್ಬರು ಐದು ವಿಧಾನಸಭಾ ಚುನಾವಣೆಗಳಲ್ಲಿ ಸೋತ ನಂತರ ಪಕ್ಷವನ್ನು ಪುನರುಜ್ಜೀವನಗೊಳಿಸುವ ಮತ್ತು ಮುಂದಿನ ಮಾರ್ಗದ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಜಿ-23 ಎಂಬುದು ಭಿನ್ನಾಭಿಪ್ರಾಯ ಹೊಂದಿರುವ ಕಾಂಗ್ರೆಸ್ ನಾಯಕರ ಗುಂಪಾಗಿದ್ದು, ಪಕ್ಷದೊಳಗಿನ ಕೂಲಂಕುಷ ಪರೀಕ್ಷೆಗೆ ಒತ್ತಾಯಿಸಿದ್ದಾರೆ.  ಸಭೆಯ ನಂತರ  ಹರಿಯಾಣದ ಮಾಜಿ ಮುಖ್ಯಮಂತ್ರಿ ಹೂಡಾ ಅವರು ಜಿ -23 ರ ಭಾಗವಾಗಿರುವ ಗುಲಾಂ ನಬಿ ಆಜಾದ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಬುಧವಾರ ಸಭೆ ಸೇರಿ ಜಂಟಿ ಹೇಳಿಕೆಗೆ ಸಹಿ ಹಾಕಿದ ಗುಂಪುಗಳ ಬೇಡಿಕೆಯಂತೆ ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ಸಾಮೂಹಿಕ ನಾಯಕತ್ವ ಮತ್ತು ನಿರ್ಧಾರ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹೂಡಾ ಮತ್ತು ಆಜಾದ್ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.  ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕ ಮತ್ತು ಇನ್ನೊಬ್ಬ ಜಿ-23 ನಾಯಕ ಆನಂದ್ ಶರ್ಮಾ ಕೂಡ ಆಜಾದ್ ಅವರ ನಿವಾಸದಲ್ಲಿ ಹೂಡಾ ಅವರ ಜತೆಗಿದ್ದರುಎಂದು ಮೂಲಗಳು ತಿಳಿಸಿವೆ. “ಕಾಂಗ್ರೆಸ್‌ನ ಮುಂದಿರುವ ಏಕೈಕ ಮಾರ್ಗವೆಂದರೆ ಎಲ್ಲರನ್ನೂ ಒಳಗೊಳ್ಳುವ ಮತ್ತು ಸಾಮೂಹಿಕ ನಾಯಕತ್ವ ಮತ್ತು ಎಲ್ಲಾ ಹಂತಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮಾದರಿಯನ್ನು ಅಳವಡಿಸಿಕೊಳ್ಳುವುದು” ಎಂದು ಗುಂಪು ಬುಧವಾರ ಹೇಳಿದೆ.

ಜಿ 23 ಮೂಲಗಳು ತಾವು ಕಾಂಗ್ರೆಸ್ ಅನ್ನು ಬಲಪಡಿಸಲು ಬಯಸುತ್ತಾರೆ ಮತ್ತು “ಯಾವುದೇ ರೀತಿಯಲ್ಲಿ ಅದನ್ನು ದುರ್ಬಲಗೊಳಿಸಬಾರದು” ಎಂದು ಹೇಳಿವೆ. ಜಿ 23 ಹೇಳಿಕೆ ಮತ್ತು ಆಜಾದ್ ಅವರು ಬುಧವಾರ ಸೋನಿಯಾ ಗಾಂಧಿ ಅವರೊಂದಿಗೆ ತಮ್ಮ ನಿವಾಸದಲ್ಲಿ ಭೇಟಿಯ ಉದ್ದೇಶಗಳನ್ನು ತಿಳಿಸಲು ದೂರವಾಣಿ ಸಂಭಾಷಣೆ ನಡೆಸಿದ ಹಿನ್ನೆಲೆಯಲ್ಲಿ ಹೂಡಾ ಅವರೊಂದಿಗಿನ ರಾಹುಲ್ ಗಾಂಧಿ ಅವರ ಭೇಟಿಯು ಮಹತ್ವದ್ದಾಗಿದೆ.

ಆಜಾದ್ ಅವರು ಶೀಘ್ರದಲ್ಲೇ ಪ್ರಸ್ತಾವನೆಗಳೊಂದಿಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಮತ್ತು ಪಕ್ಷದೊಳಗೆ ಪ್ರಮುಖ ತಿದ್ದುಪಡಿ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!