ಕೊವಿಡ್ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕು, ಮೂರನೇ ಅಲೆ ಎದುರಿಸಲು ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ವಿನಂತಿ

Sonia Gandhi: ಲಸಿಕೆ ಹಿಂಜರಿಕೆಯನ್ನು ಸ್ಪಷ್ಟವಾಗಿ ಕಂಡುಬರುವಲ್ಲೆಲ್ಲಾ ಪಕ್ಷ ಅದನ್ನು ಪರಿಹರಿಸಬೇಕು ಮತ್ತು ನೋಂದಣಿಗೆ ಉತ್ತೇಜನ ನೀಡಬೇಕು, ಜೊತೆಗೆ ಲಸಿಕೆ ವ್ಯರ್ಥವಾಗುವುದನ್ನು ಕಡಿಮೆಗೊಳಿಸಬೇಕು ಎಂದು ಸೋನಿಯಾ ಗಾಂಧಿ ಹೇಳಿದರು.

ಕೊವಿಡ್ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕು, ಮೂರನೇ ಅಲೆ ಎದುರಿಸಲು ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ವಿನಂತಿ
ಸೋನಿಯಾ ಗಾಂಧಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jun 24, 2021 | 2:18 PM

ದೆಹಲಿ: ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳೊಂದಿಗಿನ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಪಕ್ಷವು “ಸಂಪೂರ್ಣ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಾತ್ರಿಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸಬೇಕು” ಎಂದು ಹೇಳಿದ್ದಾರೆ. ವ್ಯಾಕ್ಸಿನೇಷನ್ ದೈನಂದಿನ ದರದಲ್ಲಿ ಕಳವಳ ವ್ಯಕ್ತಪಡಿಸಿದ ಅವರು, ವರ್ಷದ ಅಂತ್ಯದ ವೇಳೆಗೆ ಶೇಕಡಾ 75 ರಷ್ಟು ಜನಸಂಖ್ಯೆಗೆ ಲಸಿಕೆ ನೀಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಇದು ಕಡ್ಡಾಯವಾಗಿದೆ ಎಂದು ಹೇಳಿದರು. “ನಿಸ್ಸಂದೇಹವಾಗಿ, ಇದು ಸಂಪೂರ್ಣವಾಗಿ ಲಸಿಕೆ ಪೂರೈಕೆಯ ಮೇಲೆ ಅವಲಂಬಿತವಾಗಿರುತ್ತದೆ. ನಮ್ಮ ಪಕ್ಷದ ಒತ್ತಾಯದ ಮೇರೆಗೆ ಅಂತಿಮವಾಗಿ ಇದರ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸರ್ಕಾರದ ಮೇಲೆ ನಾವು ಒತ್ತಡ ಹೇರುತ್ತಲೇ ಇರಬೇಕು, ”ಎಂದು ಅವರು ಹೇಳಿದರು.

ಲಸಿಕೆ ಹಿಂಜರಿಕೆಯನ್ನು ಸ್ಪಷ್ಟವಾಗಿ ಕಂಡುಬರುವಲ್ಲೆಲ್ಲಾ ಪಕ್ಷ ಅದನ್ನು ಪರಿಹರಿಸಬೇಕು ಮತ್ತು ನೋಂದಣಿಗೆ ಉತ್ತೇಜನ ನೀಡಬೇಕು, ಜೊತೆಗೆ ಲಸಿಕೆ ವ್ಯರ್ಥವಾಗುವುದನ್ನು ಕಡಿಮೆಗೊಳಿಸಬೇಕು ಎಂದು ಸೋನಿಯಾ ಗಾಂಧಿ ಹೇಳಿದರು.

ದೇಶದಲ್ಲಿ ಮೂರನೇ ಅಲೆ ಕೊರೊನಾವೈರಸ್ ಸೋಂಕಿನ ಬೆದರಿಕೆಯ ಬಗ್ಗೆಯೂ ಅವರು ಗಮನ ಸೆಳೆದರು, ಅದು ಇಂದಿನಿಂದ ಕೆಲವು ತಿಂಗಳುಗಳಲ್ಲಿ ಅದು ಬರಲಿದೆ. ಕೆಲವು ತಜ್ಞರು ಮಕ್ಕಳನ್ನು ಇದು ಬಾಧಿಸಲಿದೆ ಎಂದು ಹೇಳಿದ್ದು “ಈ ವಿಪತ್ತನ್ನು ತಪ್ಪಿಸಲು ಪೂರ್ವಭಾವಿ ಕ್ರಮಗಳನ್ನು ಪಕ್ಷ ತೆಗೆದುಕೊಳ್ಳಬೇಕು ಎಂದು ಪ್ರತಿಪಾದಿಸಿದರು.

“ಈ ಅಲೆ ಅಪ್ಪಳಿಸುವ ಮುನ್ನ ತಯಾರಾಗಲು ನಾವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಅವರು ಹೇಳಿದರು. ಎರಡನೇ ಅಲೆ ಆಘಾತಕಾರಿ ಅನುಭವದಿಂದ ನಾವು ಕಲಿಯಬೇಕು. ನಾವು ಅದನ್ನು ಮತ್ತೆ ಅನುಭವಿಸಬಾರದು.

ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ಸಾಂಕ್ರಾಮಿಕ ರೋಗದ ಕೇಂದ್ರದ “ದುರುಪಯೋಗ” ದ ಶ್ವೇತಪತ್ರವನ್ನು ಉಲ್ಲೇಖಿಸಿ, ಅದನ್ನು “ವ್ಯಾಪಕವಾಗಿ ಪ್ರಸಾರ ಮಾಡಬೇಕು” ಎಂದು ಸೋನಿಯಾ ಹೇಳಿದರು.

ಇದನ್ನೂ ಓದಿ:  Coronavirus cases in India: ದೇಶದಲ್ಲಿ 54,336 ಹೊಸ ಕೊವಿಡ್ ಪ್ರಕರಣ ಪತ್ತೆ, 1321 ಮಂದಿ ಸಾವು

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ