AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕು, ಮೂರನೇ ಅಲೆ ಎದುರಿಸಲು ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ವಿನಂತಿ

Sonia Gandhi: ಲಸಿಕೆ ಹಿಂಜರಿಕೆಯನ್ನು ಸ್ಪಷ್ಟವಾಗಿ ಕಂಡುಬರುವಲ್ಲೆಲ್ಲಾ ಪಕ್ಷ ಅದನ್ನು ಪರಿಹರಿಸಬೇಕು ಮತ್ತು ನೋಂದಣಿಗೆ ಉತ್ತೇಜನ ನೀಡಬೇಕು, ಜೊತೆಗೆ ಲಸಿಕೆ ವ್ಯರ್ಥವಾಗುವುದನ್ನು ಕಡಿಮೆಗೊಳಿಸಬೇಕು ಎಂದು ಸೋನಿಯಾ ಗಾಂಧಿ ಹೇಳಿದರು.

ಕೊವಿಡ್ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕು, ಮೂರನೇ ಅಲೆ ಎದುರಿಸಲು ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ವಿನಂತಿ
ಸೋನಿಯಾ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 24, 2021 | 2:18 PM

Share

ದೆಹಲಿ: ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳೊಂದಿಗಿನ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಪಕ್ಷವು “ಸಂಪೂರ್ಣ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಾತ್ರಿಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸಬೇಕು” ಎಂದು ಹೇಳಿದ್ದಾರೆ. ವ್ಯಾಕ್ಸಿನೇಷನ್ ದೈನಂದಿನ ದರದಲ್ಲಿ ಕಳವಳ ವ್ಯಕ್ತಪಡಿಸಿದ ಅವರು, ವರ್ಷದ ಅಂತ್ಯದ ವೇಳೆಗೆ ಶೇಕಡಾ 75 ರಷ್ಟು ಜನಸಂಖ್ಯೆಗೆ ಲಸಿಕೆ ನೀಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಇದು ಕಡ್ಡಾಯವಾಗಿದೆ ಎಂದು ಹೇಳಿದರು. “ನಿಸ್ಸಂದೇಹವಾಗಿ, ಇದು ಸಂಪೂರ್ಣವಾಗಿ ಲಸಿಕೆ ಪೂರೈಕೆಯ ಮೇಲೆ ಅವಲಂಬಿತವಾಗಿರುತ್ತದೆ. ನಮ್ಮ ಪಕ್ಷದ ಒತ್ತಾಯದ ಮೇರೆಗೆ ಅಂತಿಮವಾಗಿ ಇದರ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸರ್ಕಾರದ ಮೇಲೆ ನಾವು ಒತ್ತಡ ಹೇರುತ್ತಲೇ ಇರಬೇಕು, ”ಎಂದು ಅವರು ಹೇಳಿದರು.

ಲಸಿಕೆ ಹಿಂಜರಿಕೆಯನ್ನು ಸ್ಪಷ್ಟವಾಗಿ ಕಂಡುಬರುವಲ್ಲೆಲ್ಲಾ ಪಕ್ಷ ಅದನ್ನು ಪರಿಹರಿಸಬೇಕು ಮತ್ತು ನೋಂದಣಿಗೆ ಉತ್ತೇಜನ ನೀಡಬೇಕು, ಜೊತೆಗೆ ಲಸಿಕೆ ವ್ಯರ್ಥವಾಗುವುದನ್ನು ಕಡಿಮೆಗೊಳಿಸಬೇಕು ಎಂದು ಸೋನಿಯಾ ಗಾಂಧಿ ಹೇಳಿದರು.

ದೇಶದಲ್ಲಿ ಮೂರನೇ ಅಲೆ ಕೊರೊನಾವೈರಸ್ ಸೋಂಕಿನ ಬೆದರಿಕೆಯ ಬಗ್ಗೆಯೂ ಅವರು ಗಮನ ಸೆಳೆದರು, ಅದು ಇಂದಿನಿಂದ ಕೆಲವು ತಿಂಗಳುಗಳಲ್ಲಿ ಅದು ಬರಲಿದೆ. ಕೆಲವು ತಜ್ಞರು ಮಕ್ಕಳನ್ನು ಇದು ಬಾಧಿಸಲಿದೆ ಎಂದು ಹೇಳಿದ್ದು “ಈ ವಿಪತ್ತನ್ನು ತಪ್ಪಿಸಲು ಪೂರ್ವಭಾವಿ ಕ್ರಮಗಳನ್ನು ಪಕ್ಷ ತೆಗೆದುಕೊಳ್ಳಬೇಕು ಎಂದು ಪ್ರತಿಪಾದಿಸಿದರು.

“ಈ ಅಲೆ ಅಪ್ಪಳಿಸುವ ಮುನ್ನ ತಯಾರಾಗಲು ನಾವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಅವರು ಹೇಳಿದರು. ಎರಡನೇ ಅಲೆ ಆಘಾತಕಾರಿ ಅನುಭವದಿಂದ ನಾವು ಕಲಿಯಬೇಕು. ನಾವು ಅದನ್ನು ಮತ್ತೆ ಅನುಭವಿಸಬಾರದು.

ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ಸಾಂಕ್ರಾಮಿಕ ರೋಗದ ಕೇಂದ್ರದ “ದುರುಪಯೋಗ” ದ ಶ್ವೇತಪತ್ರವನ್ನು ಉಲ್ಲೇಖಿಸಿ, ಅದನ್ನು “ವ್ಯಾಪಕವಾಗಿ ಪ್ರಸಾರ ಮಾಡಬೇಕು” ಎಂದು ಸೋನಿಯಾ ಹೇಳಿದರು.

ಇದನ್ನೂ ಓದಿ:  Coronavirus cases in India: ದೇಶದಲ್ಲಿ 54,336 ಹೊಸ ಕೊವಿಡ್ ಪ್ರಕರಣ ಪತ್ತೆ, 1321 ಮಂದಿ ಸಾವು

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!