Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.24ರಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದ ಸೋನಿಯಾ ಗಾಂಧಿ; ಮುಂಗಾರು ಅಧಿವೇಶನಕ್ಕೂ ಮುನ್ನ ಆಂತರಿಕ ಚರ್ಚೆ

ಜುಲೈ ಮೊದಲ ವಾರದಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದರಲ್ಲಿ ಕೇಂದ್ರ ಸರ್ಕಾರವನ್ನು ಯಾವ್ಯಾವ ವಿಚಾರದಲ್ಲಿ ಸಿಕ್ಕಿಸಬಹುದು ಎಂಬಿತ್ಯಾದಿ ವಿಷಯಗಳು ಜೂ.24ರ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಜೂ.24ರಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದ ಸೋನಿಯಾ ಗಾಂಧಿ; ಮುಂಗಾರು ಅಧಿವೇಶನಕ್ಕೂ ಮುನ್ನ ಆಂತರಿಕ ಚರ್ಚೆ
ಸೋನಿಯಾ ಗಾಂಧಿ
Follow us
TV9 Web
| Updated By: Lakshmi Hegde

Updated on: Jun 21, 2021 | 5:21 PM

ಜೂನ್ 24ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು-ಕಾಶ್ಮೀರದ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾದ ಬೆನ್ನಲ್ಲೇ ಇತ್ತ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಯವರು ತಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯಾಧ್ಯಕ್ಷರುಗಳ ಸಭೆಯನ್ನು ಅದೇ ದಿನ ಕರೆದಿದ್ದಾರೆ. ಈ ಸಭೆ ವರ್ಚ್ಯುವಲ್​ ಆಗಿ ನಡೆಯಲಿದ್ದು, ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​-ಡೀಸೆಲ್​ ದರ, ಸದ್ಯ ಎದುರಾಗಿರುವ ಕೊರೊನಾ ಪರಿಸ್ಥಿತಿ, ರಾಜಕೀಯ ಸನ್ನಿವೇಶದ ಬಗ್ಗೆ ಕಾಂಗ್ರೆಸ್ ಮುಖಂಡರು ಚರ್ಚೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ದೇಶದಲ್ಲಿ ಎದುರಾಗಿರುವ ಅನೇಕ ಕೊರೊನಾ ಪರಿಸ್ಥಿತಿ, ಪೆಟ್ರೋಲ್​-ಡೀಸೆಲ್​ ದರ ಏರಿಕೆ, ಆರ್ಥಿಕತೆ ಕುಸಿತ ಇತ್ಯಾದಿಗಳನ್ನು ನಿಭಾಯಿಸಲು ಕೇಂದ್ರ ಸರ್ಕಾರ ವಿಫಲವಾಗಿರುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಪ್ರಸ್ತುತ ಸಭೆಯಲ್ಲಿ ಚರ್ಚಿಸಲಿದ್ದು, ಕೇಂದ್ರ ಸರ್ಕಾರಕ್ಕೆ ಏನೆಲ್ಲ ಸಲಹೆಗಳನ್ನು ಕೊಡಬಹುದು ಎಂಬ ಬಗ್ಗೆಯೂ ನಿರ್ಧಾರ ಮಾಡಲಿದ್ದಾರೆ ಎನ್ನಲಾಗಿದೆ. ಹಾಗೇ, ಹಣದುಬ್ಬರ, ಕೊವಿಡ್​ 19 ಲಸಿಕೆ ಅಭಿಯಾನ, ಸಾಂಕ್ರಾಮಿಕ ರೋಗ ನಿಭಾಯಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಮತ್ತು ದೆಹಲಿ ಗಡಿಗಳಲ್ಲಿ ಏಳು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಲೂ ಕಾಂಗ್ರೆಸ್ ಯೋಜನೆ ರೂಪಿಸಲಿದೆ ಎಂದು ಹೇಳಲಾಗಿದೆ.

ಜುಲೈ ಮೊದಲ ವಾರದಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದರಲ್ಲಿ ಕೇಂದ್ರ ಸರ್ಕಾರವನ್ನು ಯಾವ್ಯಾವ ವಿಚಾರದಲ್ಲಿ ಸಿಕ್ಕಿಸಬಹುದು ಎಂಬಿತ್ಯಾದಿ ವಿಷಯಗಳು ಜೂ.24ರ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಹಾಗೇ ಇನ್ನೊಂದೆಡೆ ಪ್ರಧಾನಿ ಮೋದಿಯವರು ತಮ್ಮ ಕ್ಯಾಬಿನೆಟ್​ ವಿಸ್ತರಣೆ ಬಗ್ಗೆ ಹೆಚ್ಚಿನ ಗಮನಹರಿಸುತ್ತಿದ್ದು, ಪ್ರತಿದಿನ ಒಂದಷ್ಟು ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಲಾರ್ ಮೇಕಿಂಗ್​ನಲ್ಲಿ ಬಿಗ್​ ಟ್ವಿಸ್ಟ್​; ಎರಡನೇ ಪಾರ್ಟ್​ ಬಗ್ಗೆ ಕೇಳಿ ಬರುತ್ತಿದೆ ಗುಸುಗುಸು

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು