AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ಪಿಡುಗಿನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ಸೋನಿಯಾ ಗಾಂಧಿ ಸಲಹೆ

ದೇಶದಾದ್ಯಂತ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವುದು ಹೇಗೆ ತಮ್ಮ ದಿವಂಗತ ಪತಿ ಮತ್ತು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ ಮಹತ್ತರ ಕೊಡುಗೆಯಾಗಿತ್ತೆನ್ನುವುದನ್ನು ತಮ್ಮ ಪತ್ರದಲ್ಲಿ ಸೋನಿಯಾ ಉಲ್ಲೇಖಿಸಿದ್ದಾರೆ

ಕೋವಿಡ್-19 ಪಿಡುಗಿನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ಸೋನಿಯಾ ಗಾಂಧಿ ಸಲಹೆ
ಸೋನಿಯಾ ಗಾಂಧಿ
ಅರುಣ್​ ಕುಮಾರ್​ ಬೆಳ್ಳಿ
| Updated By: ರಾಜೇಶ್ ದುಗ್ಗುಮನೆ|

Updated on: May 20, 2021 | 10:04 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಗುರುವಾರದಂದು ಪತ್ರವೊಂದನ್ನು ಬರೆದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು, ಕೊವಿಡ್-19 ಸೋಂಕಿಗೆ ದುಡಿಯುವ ತಂದೆ ಇಲ್ಲವೇ ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಒದಗಿಸುವ ಏರ್ಪಾಟು ಮಾಡಬೇಕೆಂದು ಹೇಳಿದ್ದಾರೆ. ಈ ಕಾರ್ಯಕ್ಕೆ ದೇಶದೆಲ್ಲೆಡೆ ಇರುವ ನವೋದಯ ವಿದ್ಯಾಲಯಗಳನ್ನು ಬಳಸಿಕೊಳ್ಳಬಹುದೆಂಬ ಸಲಹೆಯನ್ನೂ ಅವರು ನೀಡಿದ್ದಾರೆ.

ತಮ್ಮ ಪತ್ರದಲ್ಲಿ ಸೋನಿಯಾ, ಅಂಥ ಮಕ್ಕಳಿಗೆ ನೆರವಾಗಿ ಉಜ್ವಲ ಭವಿಷ್ಯದ ನಿರೀಕ್ಷೆ ಹುಟ್ಟಿಸುವ ಬಾಧ್ಯತೆ ದೇಶದ ಮೇಲಿದೆ ಎಂದು ಹೇಳಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರಸ್ ನಾಯಕ ಜಿ ಎಸ್ ಬಾಲಿ ಅವರು ರಾಜ್ಯದ ಕಂಗ್ರಾ ಜಿಲ್ಲೆಯಲ್ಲಿ ಕೋವಿಡ್​ ಪಿಡುಗಿನಿಂದ ಅನಾಥರಾಗಿರುವ ಎಲ್ಲ ಮಕ್ಕಳನ್ನು ದತ್ತು ಪಡೆಯುವ ಘೋಷಣೆ ಮಾಡಿದ ಕೆಲ ದಿನಗಳ ನಂತರ ಸೋನಿಯಾ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ದೇಶದಾದ್ಯಂತ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವುದು ಹೇಗೆ ತಮ್ಮ ದಿವಂಗತ ಪತಿ ಮತ್ತು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ ಮಹತ್ತರ ಕೊಡುಗೆಯಾಗಿತ್ತೆನ್ನುವುದನ್ನು ತಮ್ಮ ಪತ್ರದಲ್ಲಿ ಸೋನಿಯಾ ಉಲ್ಲೇಖಿಸಿದ್ದಾರೆ. ಗ್ರಾಮಾಂತರ ಭಾಗದ ಪ್ರತಿಭಾವಂತ ಮಕ್ಕಳಿಗೆ ಅತ್ಯುತ್ತಮ ದರ್ಜೆಯ ಶಿಕ್ಷಣ ಅವರಿಗೆ ಸಾಧ್ಯವಾಗಬಹುದಾದ ಶುಲ್ಕದಲ್ಲಿ ಲಭ್ಯವಾಗಬೇಕೆನ್ನುವುದು ಅವರ ಕನಸಾಗಿತ್ತು ಎಂದು ಸೋನಿಯಾ ಹೇಳಿದ್ದಾರೆ.

ಕೊವಿಡ್-19 ಎರಡನೇ ಅಲೆ ವಿರುದ್ಧ ಭಾರತದ ಹೋರಾಟ ಜಾರಿಯಲ್ಲಿರುವಂತೆಯೇ, ಸಾವಿರಾರು ಮಕ್ಕಳು ತಮ್ಮ ತಂದೆ ತಾಯಿಗಳನ್ನು ಕಳೆದುಕೊಂಡು ದಿಕ್ಕಿಲ್ಲದವರಂತಾಗಿದ್ದಾರೆ ಎಂದು ಸೋನಿಯಾ ಹೇಳಿದ್ದಾರೆ. ಕೆಲ ಮಕ್ಕಳ ಒಬ್ಬ ಪಾಲಕರು ಜೀವಂತವಾಗಿದ್ದರೂ, ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಅವರನ್ನು ನೋಡಿಕೊಳ್ಳುವಂಥ ಸ್ಥಿತಿಯಲ್ಲಿ ಅವರಿಲ್ಲ ಎಂದು ಸೋನಿಯಾ ಹೇಳಿದ್ದಾರೆ.

ಸೋನಿಯಾ ಅವರ ಪುತ್ರ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಟ್ವೀಟ್​ನಲ್ಲಿ, ‘ಕೊವಿಡ್​ನಿಂದಾಗಿ ತಮ್ಮ ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಅತಿ ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಅವರು ಮಕ್ಕಳ ಭವಿಷ್ಯವನ್ನು ಕಾಪಾಡುವ ಮತ್ತು ಎನ್​ವಿಗಳಲ್ಲಿ ಉಚಿತ ಶಿಕ್ಷಣ ನೀಡುವ ಕುರಿತು ಒಂದು ಮಹತ್ತರವಾದ ಸಲಹೆಯನ್ನು ನೀಡಿದ್ದಾರೆ. ಭಾರತ ಸರ್ಕಾರ ಅದನ್ನು ಕಡೆಗಣಿಸಬಾರದು,’ ಅಂತ ಹೇಳಿದ್ದಾರೆ.

ಪಿಡುಗಿನಿಂದಾಗಿ ಅನಾಥರಾಗಿರುವ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಯುತ್ತಿರುವ ಪೋಸ್ಟ್​ಗಳ ಬಗ್ಗೆ ಕಳೆದ ವಾರ ಎಚ್ಚರಿಸಿರುವ ಉತ್ತರ ಪ್ರದೇಶ ಪೊಲೀಸ್, ಅವು ಮಕ್ಕಳ ಕಳ್ಳ ಸಾಗಾಣಿಕೆಯ ಗ್ಯಾಂಗ್​ಗಳಾಗಿರಬಹುದಾದ ಸಾಧ್ಯತೆಯಿದೆ ಎಂದು ಹೇಳಿದೆ.

ಮಂಗಳವಾರದಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಂಕಿಗೆ ತಂದೆ-ತಾಯಿಗಳನ್ನು ಕಳೆದುಕೊಂಡಿರುವ ಮಕ್ಕಳಿಗೆ ಅವರು 25 ವರ್ಷದವರಾಗುವವರೆಗೆ ಪ್ರತಿ ತಿಂಗಳು 2,500 ರೂಪಾಯಿಗಳ ಧನ ಸಹಾಯ ಒದಗಿಸುವುದರ ಜೊತೆಗೆ ಉಚಿತ ಶಿಕ್ಷಣ ನೀಡುವ ಘೋಷಣೆಯನ್ನೂ ಮಾಡಿದರು.

ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದ ಬಿಜೆಪಿ ಸರ್ಕಾರಗಳು ಸಹ ಅನಾಥರಾಗಿರುವ ಮಕ್ಕಳಿಗೆ ಕೆಲವು ಯೋಜನೆಗಳನ್ನು ಘೋಷಿಸಿ ಅವರ ಯೋಗಕ್ಷೇಮ ನೋಡಿಕೊಳ್ಳುವ ಕಾರ್ಯಕ್ರಮಗಳನ್ನು ರೂಪಿಸಿವೆ.

ಇದನ್ನೂ ಓದಿ: ಕೊರೊನಾದಿಂದ ಅನಾಥರಾದ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿ ನಮ್ಮದು: ಆದಿಚುಂಚನಗಿರಿ ಮಠ ಘೋಷಣೆ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ