AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ನಾಯಕನಾಗಲು ಹೊರಟಿದ್ದಾರೆ; ಸಿಎಂ ಯೋಗಿ ವಾಗ್ದಾಳಿ

ಮುಂಬರುವ ವಿಧಾನಸಭೆ ಚುನಾವಣೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ. ಕಾಂಗ್ರೆಸ್ ಯುವರಾಜನಾದ ರಾಹುಲ್ ಗಾಂಧಿ ಭಾರತ ವಿರೋಧಿ ಗುಂಪಿನ ನಾಯಕನಾಗಲು ಹೊರಟಿದ್ದಾರೆ ಎಂದು ಯೋಗಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ನಾಯಕನಾಗಲು ಹೊರಟಿದ್ದಾರೆ; ಸಿಎಂ ಯೋಗಿ ವಾಗ್ದಾಳಿ
ಸಿಎಂ ಯೋಗಿ ಆದಿತ್ಯನಾಥ್
ಸುಷ್ಮಾ ಚಕ್ರೆ
|

Updated on: Sep 11, 2024 | 7:36 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಅಮೆರಿಕಾ ಪ್ರವಾಸದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಭಾರತದಲ್ಲಿ ಬಿಸಿ ಏರುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ‘ ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ಗುಂಪಿನ ನಾಯಕರಾಗುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್, “ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ಗುಂಪಿನ ನಾಯಕನಾಗುವತ್ತ ಸಾಗುತ್ತಿದ್ದಾರೆ” ಎಂದು ಹೇಳಿದ್ದಾರೆ. “ಭಾರತದ ಏಕತೆ, ಸಮಗ್ರತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುವುದು ಮತ್ತು ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಅವರ ಏಕೈಕ ಗುರಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಮರ್ಯಾದೆ ತೆಗೆಯಲೆಂದೇ ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿದ್ದಾರೆ; ಬಿಜೆಪಿ ತಿರುಗೇಟು

ರಾಹುಲ್ ಗಾಂಧಿ ಹೇಳಿದ್ದೇನು?:

ಸಿಖ್ ಸಮುದಾಯ, ಮೀಸಲು ಮತ್ತು ಚೀನಾದ ಕುರಿತು ರಾಹುಲ್ ಗಾಂಧಿಯವರು ತಮ್ಮ ಅಮೇರಿಕಾ ಭೇಟಿಯ ಸಂದರ್ಭದಲ್ಲಿ ನೀಡಿದ ಇತ್ತೀಚಿನ ಹೇಳಿಕೆಗಳ ಕುರಿತು ರಾಜಕೀಯ ಕಲಹ ಹೆಚ್ಚುತ್ತಿದೆ. ಸೋಮವಾರ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನೂರಾರು ಭಾರತೀಯ ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ಕೆಲವು ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತಿದೆ ಎಂದು ಆರೋಪಿಸಿದ್ದರು. ಭಾರತದಲ್ಲಿ ಕಾಂಗ್ರೆಸ್​ನ ಹೋರಾಟವು ಇದರ ಬಗ್ಗೆಯೇ ಹೊರತು ರಾಜಕೀಯದ ಬಗ್ಗೆ ಅಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಸಿಖ್ ವಿರೋಧಿ ಹೇಳಿಕೆಗೆ ಕ್ಷಮೆ ಕೋರಿ ರಾಹುಲ್ ಗಾಂಧಿ ನಿವಾಸದ ಮುಂದೆ ಬಿಜೆಪಿ ಪ್ರತಿಭಟನೆ

ಆ ಕಾರ್ಯಕ್ರಮದ ಸಂದರ್ಭದಲ್ಲಿ ಮುಂದಿನ ಸಾಲಿನಲ್ಲಿದ್ದ ಸಿಖ್ ಸಮುದಾಯದವರಲ್ಲಿ ಒಬ್ಬರ ಹೆಸರನ್ನು ಕೇಳಿದ ರಾಹುಲ್ ಗಾಂಧಿ, ಪೇಟ ತೊಟ್ಟ ಅಣ್ಣ ನಿನ್ನ ಹೆಸರೇನು? ಎಂದು ಕೇಳಿದರು. “ಈ ಹೋರಾಟವು ಭಾರತದಲ್ಲಿ ಸಿಖ್‌ಗೆ ತನ್ನ ಪೇಟವನ್ನು ಧರಿಸಲು ಅವಕಾಶ ನೀಡಬೇಕೇ ಅಥವಾ ಭಾರತದಲ್ಲಿ ಕದವನ್ನು ಧರಿಸಲು ಅನುಮತಿಸುವುದೇ ಎಂಬುದಾಗಿದೆ. ಆಗ ಅವನು ಸಿಖ್ ಆಗಿ ಗುರುದ್ವಾರಕ್ಕೆ ಹೋಗಲು ಸಾಧ್ಯವಾಗುತ್ತದೆ. ಅದು ಹೋರಾಟದ ವಿಷಯವಾಗಿದೆ. ಅವರಿಗೆ ಮಾತ್ರವಲ್ಲ, ಎಲ್ಲಾ ಧರ್ಮಗಳಿಗೆ ಇದು ಹೋರಾಟದ ವಿಷಯವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!