AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟು ಹಂಚಿಕೆ ವಿಚಾರದಲ್ಲಿ ಇಂಡಿಯಾ ಒಕ್ಕೂಟದಲ್ಲಿ ಒಡಕು, ಉದ್ಧವ್ ಠಾಕ್ರೆ ಬಣದ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್​

ಶಿವಸೇನೆಯ ಉದ್ಧವ್ ಠಾಕ್ರೆ(Uddhav Thackeray) ಬಣ ಹಾಗೂ ಕಾಂಗ್ರೆಸ್(Congress)​ ನಡುವೆ ಸೀಟು ಹಂಚಿಕೆ ತಿಕ್ಕಾಟ ಆರಂಭವಾಗಿದೆ. ಕಾಂಗ್ರೆಸ್​, ಎನ್​ಸಿಪಿ ಹಾಗೂ ಶಿವಸೇನೆ ಉದ್ಧವ್ ಬಣದ ಮೂಲಕ ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ ಸೀಟು ಹಂಚಿಕೆ ಚರ್ಚೆ ಆರಂಭವಾಗಿದ್ದು ಈಗ ಒಡಕು ಶುರುವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣವು 48 ಲೋಕಸಭಾ ಕ್ಷೇತ್ರವಿರುವ ಮಹಾರಾಷ್ಟ್ರದಲ್ಲಿ 23 ಸೀಟುಗಳನ್ನು ಕೇಳುತ್ತಿವೆ.

ಸೀಟು ಹಂಚಿಕೆ ವಿಚಾರದಲ್ಲಿ ಇಂಡಿಯಾ ಒಕ್ಕೂಟದಲ್ಲಿ ಒಡಕು, ಉದ್ಧವ್ ಠಾಕ್ರೆ ಬಣದ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್​
ಉದ್ಧವ್ ಠಾಕ್ರೆ
ನಯನಾ ರಾಜೀವ್
|

Updated on: Dec 28, 2023 | 3:05 PM

Share

ಶಿವಸೇನೆಯ ಉದ್ಧವ್ ಠಾಕ್ರೆ(Uddhav Thackeray) ಬಣ ಹಾಗೂ ಕಾಂಗ್ರೆಸ್(Congress)​ ನಡುವೆ ಸೀಟು ಹಂಚಿಕೆ ತಿಕ್ಕಾಟ ಆರಂಭವಾಗಿದೆ. ಕಾಂಗ್ರೆಸ್​, ಎನ್​ಸಿಪಿ ಹಾಗೂ ಶಿವಸೇನೆ ಉದ್ಧವ್ ಬಣದ ಮೂಲಕ ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ ಸೀಟು ಹಂಚಿಕೆ ಚರ್ಚೆ ಆರಂಭವಾಗಿದ್ದು ಈಗ ಒಡಕು ಶುರುವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣವು 48 ಲೋಕಸಭಾ ಕ್ಷೇತ್ರವಿರುವ ಮಹಾರಾಷ್ಟ್ರದಲ್ಲಿ 23 ಸೀಟುಗಳನ್ನು ಕೇಳುತ್ತಿವೆ.

ಆದರೆ ಕಾಂಗ್ರೆಸ್ ಸಭೆಯಲ್ಲಿ ಈ ಬೇಡಿಕೆಯನ್ನು ಸಾರಾ ಸಗಟಾಗಿ ತಿರಸ್ಕರಿಸಲಾಗಿದೆ. ಶಿವಸೇನೆ ಇಬ್ಭಾಗವಾಗಿದೆ, ಹೀಗಿರುವಾಗ 48ರಲ್ಲಿ 23 ಸೀಟುಗಳನ್ನು ಉದ್ಧವ್ ಠಾಕ್ರೆ ಬಣಕ್ಕೆ ನೀಡುವುದು ಅಸಮಂಜಸ, ಗೆಲುವಿನ ಸೂತ್ರ ಆಧರಿಸಿ, ಸೀಟು ಹಂಚಿಕೆ ಮಾಡಬೇಕು ಎನ್ನುವ ಅಭಿಪ್ರಾಯವು ಕಾಂಗ್ರೆಸ್​ ಸಭೆಯಲ್ಲಿ ವ್ಯಕ್ತವಾಗಿದೆ.

ಈ ಮೂಲಕ ಇಂಡಿಯಾ ಒಕ್ಕೂಟದ ಭಾಗವಾಗಿರುವ ಮಹಾ ವಿಕಾಸ್ ಅಘಾಡಿಯಲ್ಲೂ ಒಡಕು ನಿರ್ಮಾಣವಾಗಿದೆ. ಮೂರು ಪಕ್ಷಗಳು ಹೆಚ್ಚು ಸೀಟುಗಳನ್ನು ಕೇಳುವುದು ಖಾತ್ರಿಯಾಗಿದೆ. ಕಳೆದವಾರ ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಉದ್ಧವ್ ಠಾಕ್ರೆ ನಡುವೆ ಈ ಸಂಬಂಧ ಮೊದಲ ಹಂತದ ಮಾತುಕತೆ ಕೂಡ ನಡೆದಿತ್ತು.

ಮತ್ತಷ್ಟು ಓದಿ: ಫೇಸ್‌ಬುಕ್‌ನಲ್ಲಿ ಏಕನಾಥ್ ಶಿಂಧೆ ವಿರುದ್ಧ ಅಶ್ಲೀಲ ಹೇಳಿಕೆ​, ದೂರು ದಾಖಲು

ಇದೇ ಸಮಸ್ಯೆ ಬಿಜೆಪಿ ಒಕ್ಕೂಟಕ್ಕೂ ಭವಿಷ್ಯದಲ್ಲಿ ಬರಬಹುದು, ಶಿವಸೇನೆ, ಏಕನಾಥ್ ಶಿಂಧೆ ಬಣ, ಎನ್​ಸಿಪಿ ಅಜಿತ್ ಪವಾತ್ ಬಣವನ್ನು ಬಿಜೆಪಿ ಹಗೆ ಸಂಬಾಳಿಸುತ್ತದೆ ಎನ್ನುವುದು ಕೂಡ ಆಸಕ್ತಿಕರ ವಿಷಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!