AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು, ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪರಿಣಾಮದ ಬಗ್ಗೆ ಅಂಕಿ ಅಂಶ ನೀಡುವ ತನಕ ಲಸಿಕೆ ಸ್ವೀಕರಿಸುವುದಿಲ್ಲ ಎಂದು ಹೇಳಿಕೆ ನೀಡಿವೆ.

ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!
ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲು ಕಾಂಗ್ರೆಸ್​ ಆಡಳಿತ ರಾಜ್ಯಗಳ ನಕಾರ
Skanda
|

Updated on:Jan 09, 2021 | 12:35 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ಬಹಳಷ್ಟು ರಾಜ್ಯಗಳಿಗೆ ದಿನಾಂಕವನ್ನೇ ತಿಳಿಸಿಲ್ಲ. ಮಹಾರಾಷ್ಟ್ರ, ಛತ್ತೀಸ್​ಗಢ, ಹರಿಯಾಣ ರಾಜ್ಯಗಳಿಗೆ ಕೊರೊನಾ ಲಸಿಕೆ ಯಾವಾಗ ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಭಾರತದಲ್ಲಿ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್​ ಈ ಎರಡು ಲಸಿಕೆಗಳ ತುರ್ತು ಬಳಕೆಗೆ ಮಾತ್ರ ಅನುಮತಿ ಸಿಕ್ಕಿದೆ. ಆದರೆ, ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆ 3 ನೇ ಹಂತದ ಪ್ರಯೋಗವನ್ನು ಇನ್ನಷ್ಟೇ ಮುಗಿಸಬೇಕಿದೆ ಎನ್ನುವುದು ಗಮನಾರ್ಹ.

 ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಇದೆಲ್ಲವನ್ನೂ ಗಮನಿಸಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು ಕೊರೊನಾ ಲಸಿಕೆ ಸುರಕ್ಷತೆ ಕುರಿತು ಇದೀಗ ಕಳವಳ ವ್ಯಕ್ತಪಡಿಸಿದ್ದು, ನಮಗೆ ‘ಕೊವ್ಯಾಕ್ಸಿನ್​’ ಬೇಡ ಎಂದಿವೆ. ಪೂರ್ಣ ಪ್ರಮಾಣದ ಪರೀಕ್ಷೆ ಮುಗಿಸಿರುವ ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯನ್ನೇ ನಮಗೆ ಕೊಡಿ ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್​ ಆಡಳಿತ ರಾಜ್ಯಗಳು, ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪರಿಣಾಮದ ಬಗ್ಗೆ ಅಂಕಿ ಅಂಶ ನೀಡುವ ತನಕ ಲಸಿಕೆ ಸ್ವೀಕರಿಸುವುದಿಲ್ಲ ಎಂದು ಹೇಳಿಕೆ ನೀಡಿವೆ. ಇತ್ತ ಜಾರ್ಖಂಡ್ ರಾಜ್ಯ ಕೊರೊನಾ ಲಸಿಕೆಯನ್ನು ಎಲ್ಲಾ ರಾಜ್ಯಗಳಿಗೆ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದೆ.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ

Published On - 12:32 pm, Sat, 9 January 21

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!