ಪಕ್ಷದ ಬ್ಯಾಂಕ್​ ಖಾತೆಗಳು ಸ್ಥಗಿತಗೊಂಡಿವೆ, ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ ಎಂದ ಕಾಂಗ್ರೆಸ್​

ನಮ್ಮ ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ, ನಮಗೆ ಸಂಬಳ ನೀಡಲು, ವಿದ್ಯುತ್ ದರ ಪಾವತಿಸಲೂ ಹಣವಿಲ್ಲದಂತಾಗಿದೆ ಎಂದು ಕಾಂಗ್ರೆಸ್​ನ ಅಜಯ್ ಮಾಕನ್ ಕೇಂದ್ರ ಸರ್ಕಾರದ ವಿರುದ್ಧ ದೂರಿದ್ದಾರೆ.

ಪಕ್ಷದ ಬ್ಯಾಂಕ್​ ಖಾತೆಗಳು ಸ್ಥಗಿತಗೊಂಡಿವೆ, ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ ಎಂದ ಕಾಂಗ್ರೆಸ್​
ಅಜಯ್ ಮಾಕನ್

Updated on: Feb 16, 2024 | 12:29 PM

ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ವಿದ್ಯುತ್ ಬಿಲ್ ಪಾವತಿ ಮಾಡಲೂ ಹಣವಿಲ್ಲ ಎಂದು ಕಾಂಗ್ರೆಸ್(Congress)​ ಕೇಂದ್ರದ ವಿರುದ್ಧ ಧ್ವನಿ ಎತ್ತಿದೆ. ಕಾಂಗ್ರೆಸ್ ಮುಖಂಡ ಅಜಯ್ ಮಾಕನ್(Ajay Maken) ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ಅಂತ್ಯಗೊಂಡಿದೆ.ಭಾರತದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ಅಂತ್ಯಗೊಂಡಿದೆ. ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಕಾಂಗ್ರೆಸ್ ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಿರುವುದು ತಿಳಿದು ಬಂದಿದೆ. ಅಚ್ಚರಿಯ ಸಂಗತಿ ಎಂದರೆ ಚುನಾವಣೆ ಘೋಷಣೆಗೆ ಎರಡು ವಾರ ಬಾಕಿ ಇರುವಾಗ ನಮ್ಮ ಖಾತೆಗಳನ್ನು ಫ್ರೀಜ್ ಮಾಡಿ ಈ ಸರ್ಕಾರ ಏನು ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಕನ್ ಪ್ರಶ್ನಿಸಿದ್ದಾರೆ.

ಏಕೆ ಸ್ಥಗಿತಗೊಳಿಸಲಾಗಿದೆ?
ಖಾತೆಯನ್ನು ಫ್ರೀಜ್ ಮಾಡಲು ಕಾರಣವನ್ನು ವಿವರಿಸಿದ ಅಜಯ್ ಮಾಕನ್, ನಮ್ಮ ಪಕ್ಷದ ಖಾತೆಯನ್ನು ಫ್ರೀಜ್ ಮಾಡಲು ಕಾರಣ ಹಾಸ್ಯಾಸ್ಪದವಾಗಿದೆ. ನಿನ್ನೆ ಸಂಜೆ ಯುವ ಕಾಂಗ್ರೆಸ್ ಖಾತೆಗಳನ್ನೂ ಸ್ಥಗಿತಗೊಳಿಸಲಾಗಿದೆ. ಕಾಂಗ್ರೆಸ್ 210 ಕೋಟಿ ರೂ. ಹಣ ಪಡೆದಿದೆ, ಈ ಹಣ ಯಾವುದೇ ದೊಡ್ಡ ಉದ್ಯಮಿಗೆ ಸೇರಿಲ್ಲ ಆದರೆ ನಾವು ಸಂಗ್ರಹಿಸಿದ ಆನ್‌ಲೈನ್ ದೇಣಿಗೆಗೆ ಸೇರಿದೆ. ದೇಶದ ಜನರು ಯುಪಿಐ ಮೂಲಕ ನಮಗೆ ಹಣ ನೀಡಿದ್ದಾರೆ. ಆ ಹಣವನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿದೆ.

ನಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಇನ್ನೊಂದೆಡೆ ಬಿಜೆಪಿ ಚುನಾವಣಾ ಬಾಂಡ್ ಹಣವನ್ನು ಖರ್ಚು ಮಾಡುತ್ತಿದೆ, ಅದನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಒಂದೇ ಪಕ್ಷ ಇರುವುದಾ, ಉಳಿದವರೆಲ್ಲರ ಖಾತೆಗಳು ಸ್ಥಗಿತಗೊಳ್ಳುತ್ತವೆಯೇ, ಉಳಿದ ಪಕ್ಷಗಳಿಗೆ ಅಸ್ತಿತ್ವದಲ್ಲಿರಲು ಹಕ್ಕಿಲ್ಲವೇ ಎಂದು ದೂರಿದ್ದಾರೆ.

ವಿಜಯ್ ಮಾಕೆನ್ ವಿಡಿಯೋ

ಮನಮೋಹನ್ ಸಿಂಗ್ ಸಮಿತಿಯ ವರದಿಯ ಆಧಾರದ ಮೇಲೆ ಕೊಡುಗೆ ನೀಡಿದ ಎಲ್ಲಾ ಶಾಸಕರು ಮತ್ತು ಸಂಸದರ ಹೆಸರನ್ನು ನಾವು ನೀಡಿದ್ದೇವೆ ಎಂದು ಮಾಕೆನ್ ಹೇಳಿದ್ದಾರೆ. ಸದ್ಯ, ನಮ್ಮ ಬಳಿ ಖರ್ಚು ಮಾಡಲು ಹಣವಿಲ್ಲ. ವಿದ್ಯುತ್ ಬಿಲ್‌ಗಳು, ಸಿಬ್ಬಂದಿ ಸಂಬಳ, ನಮ್ಮ ನ್ಯಾಯ ಯಾತ್ರೆ, ಎಲ್ಲವೂ ಪರಿಣಾಮ ಬೀರಿದೆ.

ಮತ್ತಷ್ಟು ಓದಿ: Electoral bonds: ಚುನಾವಣಾ ಬಾಂಡ್ ನಿಧಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ್ದು ಎಷ್ಟು ಪಾಲು?

ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಅಧಿಕಾರದ ಅಮಲಿನಲ್ಲಿ ಮೋದಿ ಸರ್ಕಾರವು ಲೋಕಸಭೆ ಚುನಾವಣೆಗೆ ಮುನ್ನವೇ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ಆಳವಾದ ಹೊಡೆತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಗ್ರಹಿಸಿದ ಅಸಾಂವಿಧಾನಿಕ ಹಣವನ್ನು ಚುನಾವಣೆಯಲ್ಲಿ ಬಳಸಲಾಗುತ್ತದೆ, ಆದರೆ ನಾವು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ಸೀಲ್ ಮಾಡಲಾಗುತ್ತದೆ. ಅದಕ್ಕಾಗಿಯೇ ನಾವು ಭವಿಷ್ಯದಲ್ಲಿ ಚುನಾವಣೆ ಇಲ್ಲ ಎಂದು ಹೇಳಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಓದಿ: Electoral Bonds: ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯ: ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಕೆಲವೇ ಗಂಟೆಗಳ ನಂತರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜನವರಿ 2, 2018 ರಂದು ಸರ್ಕಾರವು ಪರಿಚಯಿಸಿದ ಚುನಾವಣಾ ಬಾಂಡ್‌ಗಳ ಯೋಜನೆಯು ನಗದು ದೇಣಿಗೆಗಳನ್ನು ಬದಲಿಸಲು ಮತ್ತು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಪರಿಹಾರವಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us