AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Election 2021: ನಮ್ಮೊಂದಿಗೆ ಕೈ ಜೋಡಿಸಿ, ಬಿಜೆಪಿ ವಿರುದ್ಧ ಗೆಲ್ಲೋಣ: ಕಾಂಗ್ರೆಸ್​ಗೆ ಟಿಎಂಸಿ ಸಚಿವನ ಸಲಹೆ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಆದರೆ ರಾಹುಲ್ ಗಾಂಧಿಯವರು ತಮಿಳುನಾಡು, ಕೇರಳಕ್ಕೆ ಕೊಟ್ಟಷ್ಟು ಮಹತ್ವವನ್ನು ಪಶ್ಚಿಮ ಬಂಗಾಳಕ್ಕೆ ನೀಡುತ್ತಿಲ್ಲ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

West Bengal Assembly Election 2021: ನಮ್ಮೊಂದಿಗೆ ಕೈ ಜೋಡಿಸಿ, ಬಿಜೆಪಿ ವಿರುದ್ಧ ಗೆಲ್ಲೋಣ: ಕಾಂಗ್ರೆಸ್​ಗೆ ಟಿಎಂಸಿ ಸಚಿವನ ಸಲಹೆ
ಟಿಎಂಸಿ ಸಚಿವ ತಪಸ್​ ರಾಯ್​
Lakshmi Hegde
| Edited By: |

Updated on:Feb 14, 2021 | 8:41 PM

Share

ಬಂಕುರಾ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಮತ್ತು ಕಮ್ಯೂನಿಸ್ಟ್​ ಪಕ್ಷಗಳ ಮೈತ್ರಿ ಬಿಜೆಪಿ ವಿರುದ್ಧ ಹೋರಾಡಿ ಗೆಲ್ಲಲು ಸಾಧ್ಯವಿಲ್ಲ. ಅವರನ್ನು ಗೆಲ್ಲಿಸುವ ಶಕ್ತಿ ಇದ್ದರೆ, ಅದು ನಮ್ಮ ಟಿಎಂಸಿ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಯವರಿಗೆ ಮಾತ್ರ ಎಂದು ಸಂಸದೀಯ ವ್ಯವಹಾರಗಳ ಸಚಿವ ತಪಸ್ ರಾಯ್​ ಹೇಳಿದರು.

ಬಸಿರ್ಹತ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ತಪಸ್ ರಾಯ್ ಬಂಕುರಾದ ಒಂಡಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ -ಕಮ್ಯೂನಿಸ್ಟ್​ ಪಕ್ಷಗಳು ನಮ್ಮ ತೃಣಮೂಲ ಕಾಂಗ್ರೆಸ್​ನೊಂದಿಗೆ ಸೇರಿ ಸ್ಪರ್ಧಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ನಾವೆಲ್ಲರೂ ಒಟ್ಟಾದರೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬಹುದು ಎಂದೂ ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ಅದು ಆಗಲು ಬಿಡಬಾರದು. ಮಮತಾ ಬ್ಯಾನರ್ಜಿಯವರೇ ಮತ್ತೆ ಅಧಿಕಾರ ಹಿಡಿಯಬೇಕು. ಬಿಜೆಪಿಯ ಎಲ್ಲ ನಾಯಕರೂ ಮಮತಾ ಬ್ಯಾನರ್ಜಿಯವರಿಗೆ ಹೆದರುತ್ತಾರೆ ಎಂದರು.

ತೃಣಮೂಲ ಕಾಂಗ್ರೆಸ್ ಜತೆ ಸೇರತ್ತಾ ಕಾಂಗ್ರೆಸ್ ? ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಈ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯ ಕಣವನ್ನಾಗಿ ಪರಿಗಣಿಸಿದೆ. ಪ್ರಧಾನಿ ಮೋದಿ, ಅಮಿತ್​ ಶಾ ಸೇರಿ ದಿಗ್ಗಜರೆಲ್ಲ ಇಲ್ಲಿಗೆ ಭೇಟಿ ಕೊಟ್ಟು ಈಗಾಗಲೇ ಪ್ರಚಾರ ಶುರು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಅಂಥ ಪ್ರಯತ್ನವನ್ನೇನೂ ಮಾಡುತ್ತಿರುವಂತೆ ಕಾಣುತ್ತಿಲ್ಲ. ರಾಹುಲ್ ಗಾಂಧಿಯವರು ತಮಿಳುನಾಡು, ಕೇರಳಕ್ಕೆ ಕೊಟ್ಟಷ್ಟು ಮಹತ್ವವನ್ನು ಪಶ್ಚಿಮ ಬಂಗಾಳಕ್ಕೆ ನೀಡುತ್ತಿಲ್ಲ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಹಾಗಾಗಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಡೆ ಏನೆಂಬುದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ತೃಣಮೂಲ ಕಾಂಗ್ರೆಸ್​ ಜತೆಗೇ ಕೈ ಜೋಡಿಸುತ್ತದೆಯಾ? ಅಥವಾ ಸ್ಪರ್ಧೆಗೂ ಮೊದಲೇ ಶರಣಾಗುವ ನಡೆಯಾ ಎಂಬುದನ್ನು ಕಾದು ನೋಡಬೇಕಷ್ಟೇ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ

Published On - 8:21 pm, Sun, 14 February 21

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು