AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Election 2021: ನಮ್ಮೊಂದಿಗೆ ಕೈ ಜೋಡಿಸಿ, ಬಿಜೆಪಿ ವಿರುದ್ಧ ಗೆಲ್ಲೋಣ: ಕಾಂಗ್ರೆಸ್​ಗೆ ಟಿಎಂಸಿ ಸಚಿವನ ಸಲಹೆ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಆದರೆ ರಾಹುಲ್ ಗಾಂಧಿಯವರು ತಮಿಳುನಾಡು, ಕೇರಳಕ್ಕೆ ಕೊಟ್ಟಷ್ಟು ಮಹತ್ವವನ್ನು ಪಶ್ಚಿಮ ಬಂಗಾಳಕ್ಕೆ ನೀಡುತ್ತಿಲ್ಲ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

West Bengal Assembly Election 2021: ನಮ್ಮೊಂದಿಗೆ ಕೈ ಜೋಡಿಸಿ, ಬಿಜೆಪಿ ವಿರುದ್ಧ ಗೆಲ್ಲೋಣ: ಕಾಂಗ್ರೆಸ್​ಗೆ ಟಿಎಂಸಿ ಸಚಿವನ ಸಲಹೆ
ಟಿಎಂಸಿ ಸಚಿವ ತಪಸ್​ ರಾಯ್​
Lakshmi Hegde
| Edited By: |

Updated on:Feb 14, 2021 | 8:41 PM

Share

ಬಂಕುರಾ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಮತ್ತು ಕಮ್ಯೂನಿಸ್ಟ್​ ಪಕ್ಷಗಳ ಮೈತ್ರಿ ಬಿಜೆಪಿ ವಿರುದ್ಧ ಹೋರಾಡಿ ಗೆಲ್ಲಲು ಸಾಧ್ಯವಿಲ್ಲ. ಅವರನ್ನು ಗೆಲ್ಲಿಸುವ ಶಕ್ತಿ ಇದ್ದರೆ, ಅದು ನಮ್ಮ ಟಿಎಂಸಿ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಯವರಿಗೆ ಮಾತ್ರ ಎಂದು ಸಂಸದೀಯ ವ್ಯವಹಾರಗಳ ಸಚಿವ ತಪಸ್ ರಾಯ್​ ಹೇಳಿದರು.

ಬಸಿರ್ಹತ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ತಪಸ್ ರಾಯ್ ಬಂಕುರಾದ ಒಂಡಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ -ಕಮ್ಯೂನಿಸ್ಟ್​ ಪಕ್ಷಗಳು ನಮ್ಮ ತೃಣಮೂಲ ಕಾಂಗ್ರೆಸ್​ನೊಂದಿಗೆ ಸೇರಿ ಸ್ಪರ್ಧಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ನಾವೆಲ್ಲರೂ ಒಟ್ಟಾದರೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬಹುದು ಎಂದೂ ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ಅದು ಆಗಲು ಬಿಡಬಾರದು. ಮಮತಾ ಬ್ಯಾನರ್ಜಿಯವರೇ ಮತ್ತೆ ಅಧಿಕಾರ ಹಿಡಿಯಬೇಕು. ಬಿಜೆಪಿಯ ಎಲ್ಲ ನಾಯಕರೂ ಮಮತಾ ಬ್ಯಾನರ್ಜಿಯವರಿಗೆ ಹೆದರುತ್ತಾರೆ ಎಂದರು.

ತೃಣಮೂಲ ಕಾಂಗ್ರೆಸ್ ಜತೆ ಸೇರತ್ತಾ ಕಾಂಗ್ರೆಸ್ ? ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಈ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯ ಕಣವನ್ನಾಗಿ ಪರಿಗಣಿಸಿದೆ. ಪ್ರಧಾನಿ ಮೋದಿ, ಅಮಿತ್​ ಶಾ ಸೇರಿ ದಿಗ್ಗಜರೆಲ್ಲ ಇಲ್ಲಿಗೆ ಭೇಟಿ ಕೊಟ್ಟು ಈಗಾಗಲೇ ಪ್ರಚಾರ ಶುರು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಅಂಥ ಪ್ರಯತ್ನವನ್ನೇನೂ ಮಾಡುತ್ತಿರುವಂತೆ ಕಾಣುತ್ತಿಲ್ಲ. ರಾಹುಲ್ ಗಾಂಧಿಯವರು ತಮಿಳುನಾಡು, ಕೇರಳಕ್ಕೆ ಕೊಟ್ಟಷ್ಟು ಮಹತ್ವವನ್ನು ಪಶ್ಚಿಮ ಬಂಗಾಳಕ್ಕೆ ನೀಡುತ್ತಿಲ್ಲ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಹಾಗಾಗಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಡೆ ಏನೆಂಬುದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ತೃಣಮೂಲ ಕಾಂಗ್ರೆಸ್​ ಜತೆಗೇ ಕೈ ಜೋಡಿಸುತ್ತದೆಯಾ? ಅಥವಾ ಸ್ಪರ್ಧೆಗೂ ಮೊದಲೇ ಶರಣಾಗುವ ನಡೆಯಾ ಎಂಬುದನ್ನು ಕಾದು ನೋಡಬೇಕಷ್ಟೇ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ

Published On - 8:21 pm, Sun, 14 February 21

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್