ಎಸ್​ಸಿ, ಎಸ್​ಟಿ, ಒಬಿಸಿ ಹಕ್ಕುಗಳನ್ನು ಕಾಂಗ್ರೆಸ್​ ಕಿತ್ತುಕೊಂಡಿದೆ: ಮೋದಿ

ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು ಮೀಸಲಾತಿ ಹೆಸರಿನಲ್ಲಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಅವರ ಸತ್ಯ ದೇಶದ ಮುಂದೆ ಬಂದಿದ್ದು, ಇದರಿಂದ ಬೆಚ್ಚಿಬಿದ್ದಿದ್ದಾರೆ. ಈ ಇಡೀ ಚುನಾವಣೆಯಲ್ಲಿ ಇಂಡಿಯಾ ಹಾಗೂ ಅಘಾಡಿಯ ಈ ಎಲ್ಲಾ ಜನರು ಮೋದಿಯನ್ನು ನಿಂದಿಸುವ ಒಂದೇ ಒಂದು ಅಜೆಂಡಾವನ್ನು ಹೊಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಎಸ್​ಸಿ, ಎಸ್​ಟಿ, ಒಬಿಸಿ ಹಕ್ಕುಗಳನ್ನು ಕಾಂಗ್ರೆಸ್​ ಕಿತ್ತುಕೊಂಡಿದೆ: ಮೋದಿ
ನರೇಂದ್ರ ಮೋದಿ
Image Credit source: Moneycontrol

Updated on: Apr 29, 2024 | 3:26 PM

ಕಾಂಗ್ರೆಸ್(Congress) ​ ಪಕ್ಷವು ಎಸ್​ಸಿ, ಎಸ್​ಟಿ ಹಾಗೂ ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತನಾಡಿದ ಅವರು, ಅಷ್ಟೇ ಅಲ್ಲದೆ ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ನಡುವೆ ಜಗಳ ಸೃಷ್ಟಿಸಿದೆ ಎಂದಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು ಮೀಸಲಾತಿ ಹೆಸರಿನಲ್ಲಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಅವರ ಸತ್ಯ ದೇಶದ ಮುಂದೆ ಬಂದಿದ್ದು, ಇದರಿಂದ ಬೆಚ್ಚಿಬಿದ್ದಿದ್ದಾರೆ. ಈ ಇಡೀ ಚುನಾವಣೆಯಲ್ಲಿ ಇಂಡಿಯಾ ಅಘಾಡಿಯ ಈ ಎಲ್ಲಾ ಜನರು ಮೋದಿಯನ್ನು ನಿಂದಿಸುವ ಒಂದೇ ಒಂದು ಅಜೆಂಡಾವನ್ನು ಹೊಂದಿದ್ದಾರೆ ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಬಯಸಿದರೂ ಅವರು ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಪ್ರಧಾನಿ ಹೇಳಿದರು. ಮೋದಿ ಕೂಡ ಬದಲಾಗಲು ಸಾಧ್ಯವಿಲ್ಲ. ಮೀಸಲಾತಿಗೆ ನನ್ನ ಕೈಲಾದಷ್ಟು ಶಕ್ತಿ ನೀಡಲು ಬದ್ಧನಾಗಿದ್ದೇನೆ ಎಂದರು.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ನಿರ್ವಹಿಸುತ್ತಿಲ್ಲ, ವಸೂಲಿ ಗ್ಯಾಂಗ್​ ನಡೆಸುತ್ತಿದ್ದಾರೆ: ಮೋದಿ

60 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಎಸ್‌ಸಿ,ಎಸ್‌ಟಿ,ಒಬಿಸಿ ಕುಟುಂಬಗಳ ಸ್ಥಿತಿ ಅತ್ಯಂತ ಕೆಟ್ಟದಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಡವರ ಕಲ್ಯಾಣಕ್ಕಾಗಿ ನಾವು ಏನೇ ಯೋಜನೆಗಳನ್ನು ಮಾಡಿದ್ದೇವೆಯೋ ಅವು ಎಲ್ಲರಿಗೂ ಇವೆ.

ಒಬಿಸಿ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಪಾಲು ನೀಡುವ ಕರ್ನಾಟಕದ ಪ್ರಸ್ತಾವನೆಯನ್ನು ದೇಶಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ. ಈ ಪಕ್ಷ ಅಧಿಕಾರಕ್ಕೆ ಬಂದರೆ ಒಬಿಸಿ ಮೀಸಲಾತಿಗೆ ಧಕ್ಕೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಸ್ಥಿರ ಸರ್ಕಾರ ನೀಡುವ ಮೂಲಕ ದೇಶದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ.

ರಾಮಮಂದಿರ ನಿರ್ಮಾಣ, ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಜಾಲವನ್ನು ಬಿಜೆಪಿ ರಚಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದೆಲ್ಲವನ್ನೂ ಬದಲಿಸಿ ಈಗಿರುವ ಒಬಿಸಿ ಮೀಸಲಾತಿಯನ್ನು ಮುಂದಿಟ್ಟುಕೊಂಡು ಮುಸ್ಲಿಮರಿಗೆ ಮೀಸಲಾತಿ ನೀಡಲಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ನಮ್ಮ ಸರ್ಕಾರವು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿತು. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ ನಂತರ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಲು ಪ್ರಯತ್ನಿಸುತ್ತದೆ. ಆದರೆ ಮೋದಿ ಇಟ್ಟ ಹೆಜ್ಜೆಯನ್ನು ಹಿಮ್ಮೆಟ್ಟಿಸುವ ಧೈರ್ಯ ವಿಪಕ್ಷಗಳ ಮೈತ್ರಿಗೆ ಇದೆಯೇ ಎಂದು ಪ್ರಧಾನಿ ಪ್ರತಿಪಕ್ಷಗಳನ್ನು ಪ್ರಶ್ನಿಸಿದರು.

ಅಯೋಧ್ಯೆಯಲ್ಲಿ 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣದ ದೇಶವಾಸಿಗಳ ಕನಸು ನನಸಾಗಿದೆ. ರಾಮ ಮಂದಿರದ ವಿರುದ್ಧ ಕಾನೂನು ಹಕ್ಕು ಸಲ್ಲಿಸಿದ ಅನ್ಸಾರಿ ಕುಟುಂಬ ಪ್ರಾಣಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:25 pm, Mon, 29 April 24