AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಅಜಯ್​ ಮಿಶ್ರಾ ರಾಜೀನಾಮೆಗೆ ಕಾಂಗ್ರೆಸ್​ ಆಗ್ರಹ; ಅ.11ರಂದು ಮೌನವ್ರತ ಆಚರಿಸಲು ನಿರ್ಧಾರ

ಲಖಿಂಪುರ ಖೇರಿ ಹಿಂಸಾಚಾರ ನಡೆದಾಗಿನಿಂದಲೂ ಕಾಂಗ್ರೆಸ್​ ತಿರುಗಿಬಿದ್ದಿದೆ. ನಿನ್ನೆ ಭಾರತೀಯ ಯುವ ಕಾಂಗ್ರೆಸ್​ (IYC) ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಅಜಯ್​ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿದೆ.

Lakhimpur Kheri Violence: ಅಜಯ್​ ಮಿಶ್ರಾ ರಾಜೀನಾಮೆಗೆ ಕಾಂಗ್ರೆಸ್​ ಆಗ್ರಹ; ಅ.11ರಂದು ಮೌನವ್ರತ ಆಚರಿಸಲು ನಿರ್ಧಾರ
ಕಾಂಗ್ರೆಸ್​ ಬಾವುಟ
TV9 Web
| Edited By: |

Updated on: Oct 10, 2021 | 10:53 AM

Share

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ (Lakhimpur Kheri violence)ದಲ್ಲಿ ಆಶಿಶ್​ ಮಿಶ್ರಾ ಬಂಧನವಾಗುತ್ತಿದ್ದಂತೆ, ಅವರ ಅಪ್ಪ, ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾ (Ajay Mishra) ರಾಜೀನಾಮೆಗೆ ಆಗ್ರಹ ಹೆಚ್ಚುತ್ತಿದೆ. ಸಚಿವ ಸ್ಥಾನದಿಂದ ಅವರನ್ನು ಕೆಳಗೆ ಇಳಿಸಬೇಕು ಎಂದು ಕಾಂಗ್ರೆಸ್​ ಸೇರಿ ಹಲವು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಇದೀಗ ಕಾಂಗ್ರೆಸ್​ ಮೌನ ವ್ರತ ನಡೆಸಲು ಮುಂದಾಗಿದೆ. ಅಜಯ್​ ಮಿಶ್ರಾರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ, ಅಕ್ಟೋಬರ್​ 11ರಂದು ಮೌನವ್ರತ ಆಚರಿಸುವಂತೆ ಕಾಂಗ್ರೆಸ್​ ಹೈಕಮಾಂಡ್​ ದೇಶಾದ್ಯಂತ ಎಲ್ಲ ರಾಜ್ಯಗಳ ಕಾಂಗ್ರೆಸ್​ ಮುಖ್ಯಸ್ಥರಿಗೆ ಸೂಚನೆ ನೀಡಿದೆ.

ಅಕ್ಟೋಬರ್​ 11ರಂದು ಎಲ್ಲ​ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾಂಗ್ರೆಸ್​ ಮುಖ್ಯಸ್ಥರು, ಆಯಾ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ರಾಜಭವನದ ಎದುರು ಅಥವಾ ಕೇಂದ್ರ ಸರ್ಕಾರದ ಕಚೇರಿಗಳ ಎದುರಿಗೆ  ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೌನ ವ್ರತ ಪ್ರತಿಭಟನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧು, ಆಶಿಶ್​ ಮಿಶ್ರಾ ಬಂಧನಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆಶಿಶ್​ ಮಿಶ್ರಾ ನಿನ್ನೆ ಉತ್ತರಪ್ರದೇಶ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ನಂತರವಷ್ಟೇ ತಮ್ಮ ಉಪವಾಸ ಕೈಬಿಟ್ಟಿದ್ದರು.

ಲಖಿಂಪುರ ಖೇರಿ ಹಿಂಸಾಚಾರ ನಡೆದಾಗಿನಿಂದಲೂ ಕಾಂಗ್ರೆಸ್​ ತಿರುಗಿಬಿದ್ದಿದೆ. ನಿನ್ನೆ ಭಾರತೀಯ ಯುವ ಕಾಂಗ್ರೆಸ್​ (IYC) ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಅಜಯ್​ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿದೆ. ಸುನೀಲ್​ ಭಾಗ್​ ರಸ್ತೆಯಿಂದ ಕೃಷ್ಣಾ ಮೆನನ್​ ಮಾರ್ಗದಲ್ಲಿರುವ ಅಮಿತ್​ ಶಾ ನಿವಾಸಕ್ಕೆ ಇವರೆಲ್ಲ ಮೆರವಣಿಗೆ ಹೊರಟಿದ್ದರು. ಆದರೆ ಪೊಲೀಸರು ಅವರನ್ನು ತಡೆದು, ಬ್ಯಾರಿಕೇಡ್​ಗಳನ್ನು ಹಾಕಿದ್ದರು. ಪ್ರತಿಭಟನಾನಿರತರಲ್ಲಿ ಕೆಲವರು ಬ್ಯಾರಿಕೇಡ್​​ಗಳನ್ನೂ ಹತ್ತಿದ್ದರು. ಹಾಗೇ, ಇಂದು ಕಾಂಗ್ರೆಸ್​ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ವಾರಾಣಸಿಯಲ್ಲಿ ಕಿಸಾನ್​ ನ್ಯಾಯ ರ್ಯಾಲಿ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಈ ರ್ಯಾಲಿ ಹಮ್ಮಿಕೊಂಡಿದ್ದು, ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಲಿದೆ. ಇನ್ನು ಆಶಿಶ್​ ಮಿಶ್ರಾ ಈಗಾಗಲೇ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: IPL 2021 Qualifier 1: ದಾಖಲೆಯ 23ನೇ ಪ್ಲೇ ಆಫ್ ಪಂದ್ಯಕ್ಕೆ ಸಜ್ಜಾದ ಸಿಎಸ್​ಕೆ: ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆ?

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ