AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಅಜಯ್​ ಮಿಶ್ರಾ ರಾಜೀನಾಮೆಗೆ ಕಾಂಗ್ರೆಸ್​ ಆಗ್ರಹ; ಅ.11ರಂದು ಮೌನವ್ರತ ಆಚರಿಸಲು ನಿರ್ಧಾರ

ಲಖಿಂಪುರ ಖೇರಿ ಹಿಂಸಾಚಾರ ನಡೆದಾಗಿನಿಂದಲೂ ಕಾಂಗ್ರೆಸ್​ ತಿರುಗಿಬಿದ್ದಿದೆ. ನಿನ್ನೆ ಭಾರತೀಯ ಯುವ ಕಾಂಗ್ರೆಸ್​ (IYC) ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಅಜಯ್​ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿದೆ.

Lakhimpur Kheri Violence: ಅಜಯ್​ ಮಿಶ್ರಾ ರಾಜೀನಾಮೆಗೆ ಕಾಂಗ್ರೆಸ್​ ಆಗ್ರಹ; ಅ.11ರಂದು ಮೌನವ್ರತ ಆಚರಿಸಲು ನಿರ್ಧಾರ
ಕಾಂಗ್ರೆಸ್​ ಬಾವುಟ
TV9 Web
| Updated By: Lakshmi Hegde|

Updated on: Oct 10, 2021 | 10:53 AM

Share

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ (Lakhimpur Kheri violence)ದಲ್ಲಿ ಆಶಿಶ್​ ಮಿಶ್ರಾ ಬಂಧನವಾಗುತ್ತಿದ್ದಂತೆ, ಅವರ ಅಪ್ಪ, ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾ (Ajay Mishra) ರಾಜೀನಾಮೆಗೆ ಆಗ್ರಹ ಹೆಚ್ಚುತ್ತಿದೆ. ಸಚಿವ ಸ್ಥಾನದಿಂದ ಅವರನ್ನು ಕೆಳಗೆ ಇಳಿಸಬೇಕು ಎಂದು ಕಾಂಗ್ರೆಸ್​ ಸೇರಿ ಹಲವು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಇದೀಗ ಕಾಂಗ್ರೆಸ್​ ಮೌನ ವ್ರತ ನಡೆಸಲು ಮುಂದಾಗಿದೆ. ಅಜಯ್​ ಮಿಶ್ರಾರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ, ಅಕ್ಟೋಬರ್​ 11ರಂದು ಮೌನವ್ರತ ಆಚರಿಸುವಂತೆ ಕಾಂಗ್ರೆಸ್​ ಹೈಕಮಾಂಡ್​ ದೇಶಾದ್ಯಂತ ಎಲ್ಲ ರಾಜ್ಯಗಳ ಕಾಂಗ್ರೆಸ್​ ಮುಖ್ಯಸ್ಥರಿಗೆ ಸೂಚನೆ ನೀಡಿದೆ.

ಅಕ್ಟೋಬರ್​ 11ರಂದು ಎಲ್ಲ​ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾಂಗ್ರೆಸ್​ ಮುಖ್ಯಸ್ಥರು, ಆಯಾ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ರಾಜಭವನದ ಎದುರು ಅಥವಾ ಕೇಂದ್ರ ಸರ್ಕಾರದ ಕಚೇರಿಗಳ ಎದುರಿಗೆ  ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೌನ ವ್ರತ ಪ್ರತಿಭಟನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧು, ಆಶಿಶ್​ ಮಿಶ್ರಾ ಬಂಧನಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆಶಿಶ್​ ಮಿಶ್ರಾ ನಿನ್ನೆ ಉತ್ತರಪ್ರದೇಶ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ನಂತರವಷ್ಟೇ ತಮ್ಮ ಉಪವಾಸ ಕೈಬಿಟ್ಟಿದ್ದರು.

ಲಖಿಂಪುರ ಖೇರಿ ಹಿಂಸಾಚಾರ ನಡೆದಾಗಿನಿಂದಲೂ ಕಾಂಗ್ರೆಸ್​ ತಿರುಗಿಬಿದ್ದಿದೆ. ನಿನ್ನೆ ಭಾರತೀಯ ಯುವ ಕಾಂಗ್ರೆಸ್​ (IYC) ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಅಜಯ್​ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿದೆ. ಸುನೀಲ್​ ಭಾಗ್​ ರಸ್ತೆಯಿಂದ ಕೃಷ್ಣಾ ಮೆನನ್​ ಮಾರ್ಗದಲ್ಲಿರುವ ಅಮಿತ್​ ಶಾ ನಿವಾಸಕ್ಕೆ ಇವರೆಲ್ಲ ಮೆರವಣಿಗೆ ಹೊರಟಿದ್ದರು. ಆದರೆ ಪೊಲೀಸರು ಅವರನ್ನು ತಡೆದು, ಬ್ಯಾರಿಕೇಡ್​ಗಳನ್ನು ಹಾಕಿದ್ದರು. ಪ್ರತಿಭಟನಾನಿರತರಲ್ಲಿ ಕೆಲವರು ಬ್ಯಾರಿಕೇಡ್​​ಗಳನ್ನೂ ಹತ್ತಿದ್ದರು. ಹಾಗೇ, ಇಂದು ಕಾಂಗ್ರೆಸ್​ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ವಾರಾಣಸಿಯಲ್ಲಿ ಕಿಸಾನ್​ ನ್ಯಾಯ ರ್ಯಾಲಿ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಈ ರ್ಯಾಲಿ ಹಮ್ಮಿಕೊಂಡಿದ್ದು, ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಲಿದೆ. ಇನ್ನು ಆಶಿಶ್​ ಮಿಶ್ರಾ ಈಗಾಗಲೇ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: IPL 2021 Qualifier 1: ದಾಖಲೆಯ 23ನೇ ಪ್ಲೇ ಆಫ್ ಪಂದ್ಯಕ್ಕೆ ಸಜ್ಜಾದ ಸಿಎಸ್​ಕೆ: ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆ?

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?