AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಹಣದ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ 3 ಕಾಂಗ್ರೆಸ್ ಶಾಸಕರ ಅಮಾನತು

ಹಣದೊಂದಿಗೆ ಕಾರಿನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ 3 ಜಾರ್ಖಂಡ್ ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ.

ಕಾರಿನಲ್ಲಿ ಹಣದ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ 3 ಕಾಂಗ್ರೆಸ್ ಶಾಸಕರ ಅಮಾನತು
CarImage Credit source: NDTV
TV9 Web
| Edited By: |

Updated on:Jul 31, 2022 | 12:56 PM

Share

ಹಣದೊಂದಿಗೆ ಕಾರಿನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ 3 ಜಾರ್ಖಂಡ್ ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಶನಿವಾರ ಪಶ್ಚಿಮ ಬಂಗಾಳದಲ್ಲಿ ಜಾರ್ಖಂಡ್​ನ 3 ಸಚಿವರು ನಗದಿನೊಂದಿಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಈ ಮೂವರು ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಾರ್ವಜನಿಕ ಪ್ರತಿನಿಧಿಯಾಗಲಿ, ಪಕ್ಷದ ಪದಾಧಿಕಾರಿಯಾಗಲಿ, ಕಾರ್ಯಕರ್ತರಾಗಲಿ ಎಲ್ಲರ ಮಾಹಿತಿಯೂ ನಮ್ಮ ಬಳಿ ಇದೆ, ಯಾರೇ ಈ ಸಂಬಂಧ ಅಥವಾ ಶಾಮೀಲಾಗಿದ್ದರೂ ಅವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದು ಜನರಲ್ ಅವಿನಾಶ್ ಪಾಂಡೆ ತಿಳಿಸಿದ್ದಾರೆ.

ಶಾಸಕರಾದ ಜಮ್ತಾರಾದಿಂದ ಇರ್ಫಾನ್ ಅನ್ಸಾರಿ, ಖಿಜ್ರಿಯಿಂದ ರಾಜೇಶ್ ಕಚ್ಚಪ್ ಮತ್ತು ಕೊಲೆಬೀರಾದಿಂದ ನಮನ್ ಬಿಕ್ಸಲ್ ಕೊಂಗರಿ ಅವರನ್ನು ಹೌರಾ ಗ್ರಾಮಾಂತರ ಪೊಲೀಸರು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ

ಕಾರಿನಲ್ಲಿದ್ದ ನಗದು ಅಪಾರ ಪ್ರಮಾಣದಲ್ಲಿದ್ದ ಕಾರಣ ಹಣ ಎಣಿಸುವ ಯಂತ್ರಗಳ ನೆರವಿನಿಂದ ಎಣಿಸಲಾಯಿತು. ಈ ಹಣ ಎಲ್ಲಿಂದ ಬಂತು ಮತ್ತು ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಶಾಸಕರನ್ನು ಪ್ರಶ್ನಿಸಲಾಯಿತು. ಶಾಸಕರೊಂದಿಗೆ ಇಬ್ಬರು ಇತರ ವ್ಯಕ್ತಿಗಳೂ ಕಾರಿನಲ್ಲಿದ್ದರು. ಈ ಕಾರಿನ ಮೇಲೆ ‘MLA Jamtara Jharkhand’ (ಶಾಸಕರು, ಜಮ್​ತಾರಾ, ಜಾರ್ಖಂಡ್) ಎನ್ನುವ ಫಲಕವಿತ್ತು. ಕಾಂಗ್ರೆಸ್​ನ ಚುನಾವಣಾ ಚಿಹ್ನೆಯೂ ಎದ್ದು ಕಾಣಿಸುವಂತಿತ್ತು ಎಂದು ಪೊಲೀಸರು ತಿಳಿಸಿದರು.

ಜಮ್​ತಾರಾ ಶಾಸಕ ಅನ್ಸಾರಿ, ರಾಂಚಿ ಜಿಲ್ಲೆ ಖಿರ್ಜಿ ಕ್ಷೇತ್ರದ ಶಾಸಕ ಕಚ್ಚಪ್ ಮತ್ತು ಸಿಮ್​ಡೆಗಾ ಜಿಲ್ಲೆ ಕೊಲೆಬಿರಾ ಶಾಸಕ ಕೊನ್​ಗಾರಿ ಪ್ರಸ್ತುತ ಪೊಲೀಸರ ವಶದಲ್ಲಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಾರ್ಖಂಡ್​ನ ಕಾಂಗ್ರೆಸ್​ ವಕ್ತಾರ ರಾಜೀವ್ ರಂಜನ್ ಪ್ರಸಾದ್, ಪ್ರಕರಣದ ಬಗ್ಗೆ ಪಕ್ಷವು ಮಾಹಿತಿ ಕಲೆಹಾಕುತ್ತಿದೆ ಎಂದು ಹೇಳಿದರು.

ಜಾರ್ಖಂಡ್​ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ವಕ್ತಾ ಸುಪ್ರಿಯೊ ಭಟ್ಟಾಚಾರ್ಯ ಮಾತನಾಡಿ, ‘ಈ ಪ್ರಕರಣದ ಬಗ್ಗೆ ಪಕ್ಷದ ಪ್ರತಿಕ್ರಿಯೆಯನ್ನು ನಾಳೆ ನೀಡಲಾಗುವುದು’ ಎಂದರು. ‘ಹಣದ ಮೂಲದ ಬಗ್ಗೆ ಶಾಸಕರು ವಿವರ ನೀಡಬೇಕು’ ಎಂದು ಬಿಜೆಪಿ ವಕ್ತಾರ ದೀಪಕ್ ಪ್ರಕಾಶ್ ಆಗ್ರಹಿಸಿದ್ದಾರೆ.

Published On - 12:47 pm, Sun, 31 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ