AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್

ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪುಣ್ಯಸ್ಮರಣೆಗೆ ಮಾಣಿಕ್​ಶಾ ಫೊಟೊ ಬಳಕೆ; ಟ್ವಿಟರ್​ನಲ್ಲಿ ಮುಜುಗರ ಅನುಭವಿಸಿದ ಕಾಂಗ್ರೆಸ್
ಸೋನಿಯಾ ಗಾಂಧಿ- ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:30 PM

Share

ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ತಪ್ಪಾಗಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪೇಚಿಗೆ ಸಿಲುಕಿದ ಘಟನೆ ಶನಿವಾರ ನಡೆದಿದೆ. ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಪುಣ್ಯಸ್ಮರಣೆ ಹಂಚಿಕೊಳ್ಳುವ ವೇಳೆಯಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್​ಶಾ ಫೊಟೊ ಹಂಚಿಕೊಂಡು ಮುಜುಗರಕ್ಕೆ ಒಳಗಾಗಿದೆ.

ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಡಿದ್ದ ಟ್ವೀಟ್​ನಲ್ಲಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಇಂಡಿಯನ್ ಆರ್ಮಿಯ ಮೊದಲ ಕಮಾಂಡರ್ ಇನ್ ಚೀಫ್ ಆಗಿದ್ದರು. ಅವರ ಪುಣ್ಯಸ್ಮರಣೆಯ ದಿನದಂದು 1947ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದ ಅವರ ನಾಯಕತ್ವಕ್ಕೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಬರೆದುಕೊಂಡಿತ್ತು.

ಈ ವಿವರಗಳು ಸರಿಯಾಗಿಯೇ ಇದ್ದರೂ ಹಂಚಿಕೊಂಡಿದ್ದ ಫೊಟೊ ತಪ್ಪಾಗಿ ಎಡವಟ್ಟಾಗಿತ್ತು. ಕಾರಿಯಪ್ಪ ಬದಲು ಮಣಿಕ್​ಶಾ ಅವರ ಫೊಟೊವನ್ನು ಟ್ವೀಟ್​ನಲ್ಲಿ ಬಳಸಿಕೊಳ್ಳಲಾಗಿತ್ತು. ಈ ಬಗ್ಗೆ ನೂರಾರು ಮಂದಿ ನೆಟ್ಟಿಗರು ಪ್ರತಿಕ್ರಿಯೆ ನೀಡಿದರು. ಆ ಬಳಿಕ ಕಾಂಗ್ರೆಸ್ ತಾನು ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿತು.

ಇದನ್ನೂ ಓದಿ: ಕೊವಿಡ್ ಪರಿಹಾರ ಸಾಮಾಗ್ರಿ ಹಂಚಿಕೆಯಲ್ಲಿ ಅವ್ಯವಹಾರ ಆರೋಪ; ಇದಕ್ಕೆಲ್ಲಾ ಹೆದರುವುದಿಲ್ಲ ಎಂದ ಯುವ ಕಾಂಗ್ರೆಸ್ ನಾಯಕ

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

Published On - 7:32 pm, Sat, 15 May 21

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ