AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಕರಾಳ ಘಟ್ಟ; ಸಂವಿಧಾನ ಹತ್ಯಾ ದಿನದ ಕುರಿತು ಪಿಎಂ ಮೋದಿ ಪ್ರತಿಕ್ರಿಯೆ

ಜೂನ್ 25 ಅನ್ನು ಸಂವಿಧಾನ ಹತ್ಯಾ ದಿವಸ ಎಂದು ನಾಮಕರಣ ಮಾಡುವುದು ತುರ್ತು ಪರಿಸ್ಥಿತಿಯ ಮಿತಿಮೀರಿದ ಕಾರಣದಿಂದ ನೊಂದ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ದಿನವಾದ ಜೂನ್ 25 ಅನ್ನು 'ಸಂವಿಧಾನದ ಹತ್ಯಾ ದಿವಸ' ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.

ಕಾಂಗ್ರೆಸ್​ನ ಕರಾಳ ಘಟ್ಟ; ಸಂವಿಧಾನ ಹತ್ಯಾ ದಿನದ ಕುರಿತು ಪಿಎಂ ಮೋದಿ ಪ್ರತಿಕ್ರಿಯೆ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Jul 12, 2024 | 7:39 PM

Share

ನವದೆಹಲಿ: ಜೂನ್ 25ರಂದು ‘ಸಂವಿಧಾನದ ಹತ್ಯಾ ದಿವಸ’ ಎಂದು ಆಚರಿಸುವುದು ಸಂವಿಧಾನವನ್ನು ತುಳಿದು ಹಾಕಿದಾಗ ಏನೆಲ್ಲ ಸಂಭವಿಸಿತು ಎಂಬುದನ್ನು ನೆನಪಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯ ಘೋಷಣೆಯ ಕರಾಳ ದಿನದ ಸ್ಮರಣಾರ್ಥ ಇಂದು ಪ್ರತಿ ವರ್ಷ ಜೂನ್ 25ರಂದು ಸಂವಿಧಾನ ಹತ್ಯಾ ದಿನ ಎಂದು ಆಚರಿಸುವುದಾಗಿ ಘೋಷಿಸಿದೆ.

“ತುರ್ತು ಪರಿಸ್ಥಿತಿಯ ಮಿತಿಮೀರಿದ ಕಾರಣದಿಂದ ಬಳಲುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ. ಭಾರತೀಯ ಇತಿಹಾಸದ ಕರಾಳ ಘಟ್ಟವನ್ನು ಕಾಂಗ್ರೆಸ್ ಜಾರಿಗೆ ತಂದಿತು. 1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಜೂನ್ 25 ರಂದು ಅಮಾನವೀಯ ನೋವುಗಳನ್ನು ಸಹಿಸಿಕೊಂಡವರ ಬೃಹತ್ ಕೊಡುಗೆಗಳನ್ನು ಸ್ಮರಿಸಲು ‘ಸಂವಿಧಾನ ಹತ್ಯಾ ದಿವಸ’ ಎಂದು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಿಸಲು ಕೇಂದ್ರ ನಿರ್ಧಾರ; ‘ಜೂನ್ 4 ಮೋದಿಮುಕ್ತಿ ದಿವಸ್’ ಎಂದ ಕಾಂಗ್ರೆಸ್

“ಜೂನ್ 25 ಅನ್ನು ಸಂವಿಧಾನ ಹತ್ಯಾ ದಿವಸ್ ಎಂದು ಆಚರಿಸುವುದು ಭಾರತದ ಸಂವಿಧಾನವನ್ನು ತುಳಿದು ಹಾಕಿದಾಗ ಏನಾಗುತ್ತದೆ ಎಂಬುದನ್ನು ನೆನಪಿಸುತ್ತದೆ. ಇದು ಪ್ರತಿಯೊಬ್ಬ ವ್ಯಕ್ತಿಗೆ ಗೌರವ ಸಲ್ಲಿಸುವ ದಿನವಾಗಿದೆ. ತುರ್ತು ಪರಿಸ್ಥಿತಿಯು ಮಿತಿಮೀರಿದ ಕಾಂಗ್ರೆಸ್ ಭಾರತೀಯ ಇತಿಹಾಸದ ಕರಾಳ ಹಂತವನ್ನು ಬಿಚ್ಚಿಟ್ಟಿತು ಎಂದಿದ್ದಾರೆ.

ಘೋಷಣೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಸಂವಿಧಾನ ಹತ್ಯಾ ದಿವಸ್’ ಆಚರಣೆಯು ಪ್ರತಿಯೊಬ್ಬ ಭಾರತೀಯನಲ್ಲೂ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಶಾಶ್ವತ ಜ್ವಾಲೆಯನ್ನು ಜೀವಂತವಾಗಿಡಲು ಸಹಾಯ ಮಾಡುತ್ತದೆ, ಹೀಗಾಗಿ ಕಾಂಗ್ರೆಸ್‌ನಂತಹ ಸರ್ವಾಧಿಕಾರಿ ಶಕ್ತಿಗಳು ಹಾಗೂ ಆ ಭಯಾನಕ ದಿನಗಳು ಪುನರಾವರ್ತನೆಯಾಗದಂತೆ ತಡೆಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Modi Russia Visit: 2 ದಿನಗಳ ರಷ್ಯಾ ಪ್ರವಾಸಕ್ಕಾಗಿ ಮಾಸ್ಕೋ ತಲುಪಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಇಂದಿರಾ ಗಾಂಧಿಯವರ ಸರ್ಕಾರವು ಜೂನ್ 25, 1975ರಂದು ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಸುಮಾರು 2 ವರ್ಷಗಳ ನಂತರ ಮಾರ್ಚ್ 21, 1977ರಂದು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲಾಯಿತು. ಜೂನ್ 25, 2024ರಂದು ತುರ್ತು ಪರಿಸ್ಥಿತಿಯ 50 ವರ್ಷಗಳ ನೆನಪಿಗಾಗಿ ಕರಾಳದಿನವನ್ನು ಆಚರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು