AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತೀಯತೆ ಮೂಲಕ ದೇಶಭಕ್ತಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಪ್ರಯತ್ನ; ಹರಿಯಾಣ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪ್ರತಿಪಕ್ಷ ಕಾಂಗ್ರೆಸ್ ದೇಶದ "ದಲಿತ ವಿರೋಧಿ ಪಕ್ಷ" ಎಂದು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮೀಸಲಾತಿಯನ್ನು ಕೊನೆಗೊಳಿಸಲು ಪ್ರತಿಜ್ಞೆ ಮಾಡಿದೆ ಮತ್ತು ಹರಿಯಾಣದಲ್ಲಿ ಈ ಬಗ್ಗೆ ಪ್ರಯೋಗ ನಡೆಸಲು ಮುಂದಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಜಾತೀಯತೆ ಮೂಲಕ ದೇಶಭಕ್ತಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಪ್ರಯತ್ನ; ಹರಿಯಾಣ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ
ಮೋದಿ
ಸುಷ್ಮಾ ಚಕ್ರೆ
|

Updated on: Oct 01, 2024 | 5:50 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ರಾಜ್ಯ ವಿಧಾನಸಭಾ ಚುನಾವಣೆಗಾಗಿ ಹರಿಯಾಣದ ಪಲ್ವಾಲ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಜಾತಿ ರಾಜಕೀಯ, ಭ್ರಷ್ಟಾಚಾರ ಮತ್ತು ಮೀಸಲಾತಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿ, ಧರ್ಮವನ್ನು ಬೇಧಿಸುವ ಮೂಲಕ ದೇಶದ ಏಕತೆಯನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ತನ್ನ ಜಾತಿ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷವು ದೇಶಭಕ್ತಿಯನ್ನು ಹತ್ತಿಕ್ಕಲು ಬಯಸುತ್ತದೆ. ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜನೆಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಲು ಕಾಂಗ್ರೆಸ್ ಬಿಡಲಿಲ್ಲ, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನವನ್ನು ಸಂಪೂರ್ಣವಾಗಿ ಜಾರಿಗೆ ತರಲು ಕಾಂಗ್ರೆಸ್ ಬಿಡಲಿಲ್ಲ. ಅವರು ನಮ್ಮ ಸಹೋದರಿಯರಿಗೆ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮೀಸಲಾತಿಯನ್ನು ಕಸಿದುಕೊಂಡರು. ಕಾಂಗ್ರೆಸ್‌ ದೇಶದ ಮತ್ತು ಪ್ರಜೆಗಳ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.

ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹರ್ಯಾಣದ ತಳಮಟ್ಟದ ರಾಜಕೀಯವನ್ನು ದೀರ್ಘಕಾಲ ಗಮನಿಸಿದ್ದೇನೆ. ಇತ್ತೀಚೆಗೆ, ಚುನಾವಣಾ ಪ್ರಚಾರಕ್ಕಾಗಿ ಹರಿಯಾಣದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ನನಗೆ ಅವಕಾಶ ಸಿಕ್ಕಿತು. ಇಂದು ಇದು ನನ್ನ ಚುನಾವಣಾ ರ‍್ಯಾಲಿ. ನೀವೆಲ್ಲರೂ ಈ ಕೊನೆಯ ರ್ಯಾಲಿಯನ್ನು ಇನ್ನಷ್ಟು ವಿಶೇಷಗೊಳಿಸಿದ್ದೀರಿ ಎಂದು ಪ್ರಧಾನಿ ಮೋದಿ ರ್ಯಾಲಿಯಲ್ಲಿ ಹೇಳಿದರು.

ಇದನ್ನೂ ಓದಿ: ದೇವರೇಕೆ ಮೋದಿಗೆ ಅದಾನಿಗೆ ಮಾತ್ರ ಸಹಾಯ ಮಾಡಲು ಹೇಳುತ್ತಿದ್ದಾನೆ?; ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ಭಾರತದಲ್ಲಿ ಕಾಂಗ್ರೆಸ್ ಮೀಸಲಾತಿಯನ್ನು ಕೊನೆಗೊಳಿಸಲು ಯೋಜಿಸಿದೆ. ಈ ನಿಟ್ಟಿನಲ್ಲಿ ಹರಿಯಾಣ ಅವರ ಪರೀಕ್ಷಾ ರಾಜ್ಯವಾಗಿದೆ. ಆದರೆ, ನರೇಂದ್ರ ಮೋದಿ ಮತ್ತು ಬಿಜೆಪಿ ಇರುವವರೆಗೆ ಯಾರೂ ಮೀಸಲಾತಿಯನ್ನು ಅಂತ್ಯಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್​ನವರು ನನ್ನನ್ನು ಮತ್ತು ಹರಿಯಾಣ ಮುಖ್ಯಮಂತ್ರಿ ಸೈನಿ ಅವರನ್ನು ಹಗಲು ರಾತ್ರಿ ನಿಂದಿಸುತ್ತಾರೆ ಎಂದು ಮೋದಿ ಹರಿಯಾಣ ರಾಜ್ಯದ ಪಲ್ವಾಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಮತದಾರರ ಹೆಸರಿನಲ್ಲಿ ಜನರನ್ನು ಧ್ರುವೀಕರಿಸಿದೆ. ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಕೊನೆಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅವರು ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಅದೇ ರೀತಿ ಮಾಡಿದರು. ಅವರು ಮೀಸಲಾತಿಯನ್ನು ಕಸಿದುಕೊಂಡರು ಎಂದು ಆರೋಪಿಸಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಇಲ್ಲಿನ ಜನರು ಸಹ ನೋಡುತ್ತಿದ್ದಾರೆ. ದಲಿತ, ಹಿಂದುಳಿದ ಮತ್ತು ವಂಚಿತ ಸಮುದಾಯದವರೇ ಕಾಂಗ್ರೆಸ್ ವಿರುದ್ಧ ಆಕ್ರೋಶಗೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ; ಇಸ್ರೇಲ್ ಪಿಎಂ ನೆತನ್ಯಾಹು ಜೊತೆ ಪ್ರಧಾನಿ ಮೋದಿ ಚರ್ಚೆ

“ಒಗ್ಗಟ್ಟಿನ ಭಾವನೆ ಹೆಚ್ಚಾದಷ್ಟೂ ತಮ್ಮ ಗೆಲುವು ಕಷ್ಟವಾಗುತ್ತದೆ ಎಂದು ಕಾಂಗ್ರೆಸ್​ಗೆ ಗೊತ್ತಾಗಿದೆ. ಅದಕ್ಕಾಗಿಯೇ ದೇಶಭಕ್ತರ ಒಗ್ಗಟ್ಟಿನ ಮುರಿಯಲು ಕಾಂಗ್ರೆಸ್ ಹೊಸ ಪ್ರಯೋಗಗಳನ್ನು ಮಾಡುತ್ತಿದೆ” ಎಂದು ಪ್ರಧಾನಿ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಸುಳ್ಳಿನ ಪ್ರಯೋಗವನ್ನು ಕಾಂಗ್ರೆಸ್ ಮಾಡಿತ್ತು. ಇಡೀ ಹರಿಯಾಣ, ಭಾರತವನ್ನು ಪ್ರೀತಿಸುವವರು ಒಗ್ಗಟ್ಟಿನಿಂದ ಇರುತ್ತೇವೆ ಎಂದು ನಾವು ಪ್ರತಿಜ್ಞೆ ಮಾಡಬೇಕಾಗಿದೆ. ನಾವು ಒಂದಾಗಿ ದೇಶಕ್ಕಾಗಿ ಮತ ಹಾಕುತ್ತೇವೆ. ಒಂದಾಗಿ ಎಂದು ಪ್ರತಿಜ್ಞೆ ಮಾಡಬೇಕು” ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್