AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Jodo Yatra: ನವೆಂಬರ್ 1 ರಿಂದ ಕಾಂಗ್ರೆಸ್​ನ ‘ಅಸ್ಸಾಂ ಜೋಡೋ ಯಾತ್ರೆ’ ಆರಂಭ

ಭಾರತ್ ಜೋಡೋ ಯಾತ್ರೆಯ ಭಾಗವಾಗಿ ನವೆಂಬರ್ 1 ರಿಂದ ಅಸ್ಸಾಂ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಆರಂಭಿಸಲಿದೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ.

Assam Jodo Yatra: ನವೆಂಬರ್ 1 ರಿಂದ ಕಾಂಗ್ರೆಸ್​ನ ‘ಅಸ್ಸಾಂ ಜೋಡೋ ಯಾತ್ರೆ’ ಆರಂಭ
Congress
TV9 Web
| Edited By: |

Updated on: Sep 17, 2022 | 10:01 AM

Share

ಭಾರತ್ ಜೋಡೋ ಯಾತ್ರೆಯ ಭಾಗವಾಗಿ ನವೆಂಬರ್ 1 ರಿಂದ ಅಸ್ಸಾಂ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಆರಂಭಿಸಲಿದೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಹಳಿತಪ್ಪಿಸುವಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಯಶಸ್ವಿಯಾಗಲಿಲ್ಲ. ಹಿಮಂತ ಬಿಸ್ವಾ ಶರ್ಮಾ ಅವರು ಪಕ್ಷದ ಶಾಸಕರ ಮೇಲೆ ಎಷ್ಟೇ ಪ್ರಭಾವ ಬೀರಲು ಪ್ರಯತ್ನಿಸಿದರೂ ಕಾಂಗ್ರೆಸ್ ನಿಲ್ಲುವುದಿಲ್ಲ, ಶರ್ಮಾ ಅವರಂತೆ ಯಾವುದೇ ಶಾಸಕರು ಪಕ್ಷವನ್ನು ತೊರೆದರೂ ನಾವು ಹೆದರುವುದಿಲ್ಲ ಎಂದು ರಮೇಶ್ ಹೇಳಿದರು.

ಶರ್ಮಾ ಕಾಂಗ್ರೆಸ್ ಬಗ್ಗೆ ಯೋಚಿಸುವುದನ್ನು ನಿಲ್ಲಿಸಬೇಕು ಮತ್ತು ಅಸ್ಸಾಂನ ಕಲ್ಯಾಣಕ್ಕಾಗಿ ಕೆಲಸ ಮಾಡುವತ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು. ಶರ್ಮಾ ಈ ಹಿಂದೆ ರಾಹುಲ್ ಗಾಂಧಿಯನ್ನು ಟೀಕಿಸಿದ್ದರು ಮತ್ತು ಪಾಕಿಸ್ತಾನದಿಂದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಲು ಸಲಹೆ ನೀಡಿದ್ದರು, ದೇಶದ ವಿಭಜನೆಗೆ ಕಾಂಗ್ರೆಸ್ ಕಾರಣ ಎಂದು ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಮೇಶ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ದೇಶ ಇಬ್ಭಾಗವಾಗಿದೆ. ದೇಶವು ಪ್ರಚಂಡ ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ ಮತ್ತು ಅಧಿಕಾರದ ಕೇಂದ್ರೀಕರಣವನ್ನು ಎದುರಿಸುತ್ತಿದೆ, ಇದು ಸಮಾಜದ ವಿವಿಧ ವರ್ಗಗಳ ನಡುವೆ ಭಾರಿ ವಿಭಜನೆಯನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

ಇಂದು, ಜನರು ಧರ್ಮ, ಸಂಸ್ಕೃತಿ ಮತ್ತು ಆಹಾರ ಪದ್ಧತಿಯ ಮೇಲೆ ವಿಭಜನೆಗೊಂಡಿದ್ದಾರೆ. ರಾಜ್ಯ ಸರ್ಕಾರಗಳ ಅಧಿಕಾರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಕಿತ್ತುಕೊಂಡಿದೆ ಎಂದು ರಮೇಶ್ ಪ್ರತಿಪಾದಿಸಿದರು.

ಮುಂದಿನ ವರ್ಷ ಅರುಣಾಚಲ ಪ್ರದೇಶದಿಂದ ಗುಜರಾತ್‌ಗೆ ಎರಡನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸುವ ಕಾಂಗ್ರೆಸ್‌ನ ಯೋಜನೆಯ ಬಗ್ಗೆ ಪಕ್ಷದ ಹಿರಿಯ ನಾಯಕ ಸುಳಿವು ಬಿಟ್ಟುಕೊಟ್ಟಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು