AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ: ಹಿಮಂತ ಬಿಸ್ವ ಶರ್ಮಾ

ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಯಾವುದೇ ರಾಷ್ಟ್ರೀಯ ನಾಯಕತ್ವವಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ ಪ್ರತ್ಯೇಕಗೊಳ್ಳಲಿದೆ, ರಾಷ್ಟ್ರೀಯ ನಾಯಕತ್ವ ಇರುವುದಿಲ್ಲ ಮತ್ತು ಕಾಂಗ್ರೆಸ್  ರಾಜ್ಯದಲ್ಲಿ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ: ಹಿಮಂತ ಬಿಸ್ವ ಶರ್ಮಾ
ಹಿಮಂತ ಬಿಸ್ವ ಶರ್ಮಾ
ರಶ್ಮಿ ಕಲ್ಲಕಟ್ಟ
|

Updated on:Mar 01, 2024 | 2:02 PM

Share

ಗುವಾಹಟಿ ಮಾರ್ಚ್ 01: ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ಗೆ ಪಕ್ಷವು ವಿವಿಧ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ (Himanta Biswa Sarma) ಹೇಳಿದ್ದಾರೆ. ಅದೇ ವೇಳೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು. ಕಾಂಗ್ರೆಸ್‌ (Congress) ಇತಿಹಾಸಕ್ಕೆ ಸೇರಲಿದೆ, ಅದು ಕಟ್ಟಿಟ್ಟ ಬುತ್ತಿ. ಕಾಂಗ್ರೆಸ್ ವಿವಿಧ ಪ್ರಾದೇಶಿಕ ಪಕ್ಷಗಳಾಗಿ ವಿಭಜನೆಯಾಗಲಿದೆ. ಈ ಚುನಾವಣೆಯ ನಂತರ ಕಾಂಗ್ರೆಸ್‌ನ ರಾಷ್ಟ್ರೀಯ ಸ್ಥಾನಮಾನವು ಕ್ಷೀಣಿಸುತ್ತದೆ. ಏಕೆಂದರೆ ಎನ್‌ಡಿಎ 400 ಪ್ಲಸ್ ಗೆಲುವಿನತ್ತ ಸಾಗುತ್ತಿದೆ. ಬೇರೆ ಯಾವುದೇ ಆಯ್ಕೆ ಇಲ್ಲ ಎಂದು ಶರ್ಮಾ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಯಾವುದೇ ರಾಷ್ಟ್ರೀಯ ನಾಯಕತ್ವವಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ ಪ್ರತ್ಯೇಕಗೊಳ್ಳಲಿದೆ, ರಾಷ್ಟ್ರೀಯ ನಾಯಕತ್ವ ಇರುವುದಿಲ್ಲ ಮತ್ತು ಕಾಂಗ್ರೆಸ್  ರಾಜ್ಯದಲ್ಲಿ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕವಾಗಲಿದೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

2015 ರಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. ಅವರು ಇತ್ತೀಚೆಗೆ ಕಾಂಗ್ರೆಸ್‌ನ ಚುಕ್ಕಾಣಿ ಹಿಡಿದಿರುವ ಗಾಂಧಿ ಕುಟುಂಬದ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಮೈತ್ರಿ ಘೋಷಿಸಿದ ಹಿಮಂತ ಬಿಸ್ವಾ ಶರ್ಮಾ

ಹಿಮಂತ ಬಿಸ್ವಾ ಶರ್ಮಾ ಅವರು ನಿನ್ನೆ ಸಾರ್ವತ್ರಿಕ ಚುನಾವಣೆಗೆ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ನೊಂದಿಗೆ ತಮ್ಮ ಪಕ್ಷದ ಮೈತ್ರಿಯನ್ನು ಘೋಷಿಸಿದರು. 14 ಲೋಕಸಭಾ ಸ್ಥಾನಗಳ ಪೈಕಿ 11ರಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಎಜಿಪಿ ಮತ್ತು ಯುಪಿಪಿಎಲ್ ಕ್ರಮವಾಗಿ ಎರಡು ಮತ್ತು ಒಂದು ಸ್ಥಾನದಲ್ಲಿ ಸ್ಪರ್ಧಿಸಲಿವೆ ಎಂದರು.

ಏತನ್ಮಧ್ಯೆ, ಅಸ್ಸಾಂ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಣಾ ಗೋಸ್ವಾಮಿ ಗುರುವಾರ ಬಿಜೆಪಿ ಸೇರಿದ್ದಾರೆ. ಅಸ್ಸಾಂ ಕಾಂಗ್ರೆಸ್‌ನ ಮತ್ತೊಬ್ಬ ಕಾರ್ಯಾಧ್ಯಕ್ಷ ಕಾಮಾಖ್ಯ ದೇ ಪುರ್ಕಾಯಸ್ಥ ಕೂಡ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.  ಈ ಹಿಂದೆ, ಶಶಿಕಾಂತ ದಾಸ್ ಮತ್ತು ಸಿದ್ದಿಕ್ ಅಹಮದ್ ಎಂಬ ಇಬ್ಬರು ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ನೀಡಿದ್ದರು.

ಇದನ್ನೂ ಓದಿ: ಪ್ರತಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯ

ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶರ್ಮಾ, ಕಾಂಗ್ರೆಸ್‌ನಲ್ಲಿನ ನಿರ್ಧಾರಗಳನ್ನು ಊಟದ ಕೋಣೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಕುಟುಂಬದ ಊಟದ ಕೋಣೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೆಲಸಗಾರರು ಮಾತ್ರ ಅದನ್ನು ಅನುಸರಿಸುತ್ತಾರೆ. ಕುಟುಂಬದ ಅಗತ್ಯಕ್ಕೆ ತಕ್ಕಂತೆ ಪಕ್ಷದ ಅಜೆಂಡಾ ಮತ್ತು ಸಿದ್ಧಾಂತವನ್ನು ಬದಲಾಯಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Fri, 1 March 24

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?