AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್​​ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು?

ಇಂದು ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಸದನದಲ್ಲಿ ಎದ್ದ ಗಲಭೆಯಿಂದಾಗಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಆದರೆ, ಈ ಗಲಭೆ ನಡೆದಿದ್ದೇಕೆ? ಅಲ್ಲಿ ಏನು ನಡೆಯಿತು? ಪ್ರಧಾನಿ ಮೋದಿಗೆ ಭಾಷಣ ಮಾಡಲು ಏಕೆ ಅವಕಾಶ ಸಿಗಲಿಲ್ಲ? ಎಂಬಿತ್ಯಾದಿ ವಿಷಯಗಳ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್​​ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು?
Lok Sabha Session Ruckus
ಸುಷ್ಮಾ ಚಕ್ರೆ
|

Updated on: Feb 04, 2026 | 11:20 PM

Share

ನವದೆಹಲಿ, ಫೆಬ್ರವರಿ 4: ಇಂದು ಸಂಜೆ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾಷಣ ಮಾಡಬೇಕಿತ್ತು. ಆದರೆ, ಇನ್ನೇನು ಮೋದಿ ತಮ್ಮ ಮಾತು ಆರಂಭಿಸಬೇಕು ಎನ್ನುವಷ್ಟರಲ್ಲಿ ಸದನದಲ್ಲಿ ಇದ್ದಕ್ಕಿದ್ದಂತೆ ಗದ್ದಲ ಆರಂಭವಾಯಿತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣದಿಂದ ವಿರೋಧ ಪಕ್ಷಗಳ ಸಂಸದರು ಗಲಾಟೆ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದರು ಪ್ರಧಾನಿ ಮೋದಿ ಕುಳಿತಿದ್ದ ಕುರ್ಚಿಯನ್ನು ಸುತ್ತುವರೆದರು.

ಇಂದು ಸಂಜೆ ಪ್ರಧಾನಿ ಮೋದಿ ಮಾತನಾಡುವ ಸ್ವಲ್ಪ ಮೊದಲು ವರ್ಷಾ ಗಾಯಕ್​ವಾಡ್ ಮತ್ತು ಜ್ಯೋತಿಮಣಿ ಸೇರಿದಂತೆ ವಿರೋಧ ಪಕ್ಷದ ಕೆಲವು ಮಹಿಳಾ ಸಂಸದರು ಪ್ರಧಾನಿ ಮೋದಿ ಅವರ ಕುರ್ಚಿಯ ಸುತ್ತ ಮುತ್ತಿಗೆ ಹಾಕಿದರು. ಬ್ಯಾನರ್​​ಗಳನ್ನು ಹಿಡಿದು ಬಾವಿಗಿಳಿದ ಮಹಿಳಾ ಸಂಸದರು ಗದ್ದಲ ಆರಂಭಿಸಿದರು. ನಿನ್ನೆ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ಅವರ ಪ್ರತಿಭಟನೆ ನಡೆಯಿತು. ಇದರಿಂದ ಪ್ರಧಾನಿ ಮೋದಿಯವರಿಗೆ ಭಾಷಣ ಮಾಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೀಗಾಗಿ, ಸ್ಪೀಕರ್ ಸ್ಥಾನದಲ್ಲಿ ಕುಳಿತಿದ್ದ ಸಂಧ್ಯಾ ರೈ ಕಲಾಪವನ್ನು ನಾಳೆಗೆ ಮುಂದೂಡಿದರು. ಹಲವಾರು ಸಚಿವರು ಹೊರಹೋದ ನಂತರ ಮಹಿಳಾ ಸಂಸದರು ತಮ್ಮ ಮುತ್ತಿಗೆಯನ್ನು ಕೊನೆಗೊಳಿಸಿದರು. ಮಹಿಳಾ ಸಂಸೆಯರು ಮೊದಲೇ ಪ್ಲಾನ್ ಮಾಡಿ ಬೇಕೆಂದೇ ಪ್ರಧಾನಿ ಮೋದಿಯವರು ಭಾಷಣ ಮಾಡದಂತೆ ತಡೆದರು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿಯೇ ಮಹಿಳಾ ಸಂಸದರನ್ನು ಛೂ ಬಿಟ್ಟಿದ್ದರು ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಮಹಿಳಾ ಸಂಸದರ ಮುತ್ತಿಗೆಯಿಂದಾಗಿ ಧನ್ಯವಾದ ನಿರ್ಣಯವನ್ನು ಲೋಕಸಭೆ ಇನ್ನೂ ಅಂಗೀಕರಿಸಿಲ್ಲ. ಸದನವನ್ನು ನಾಳೆಯವರೆಗೆ ಮುಂದೂಡಲಾಗಿದೆ. ಆದ್ದರಿಂದ ನಾಳೆ ಚರ್ಚೆ ಮುಂದುವರಿಯುವ ಸಾಧ್ಯತೆಯಿದೆ. ನಾಳೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ