AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸ್ತುತ ರಾಜಕೀಯ, ಚುನಾವಣಾ ಸಿದ್ಧತೆ ಮುಂತಾದ ವಿಚಾರಗಳ ಚರ್ಚೆ: ಅ. 16ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

Congress Working Committee Meeting: ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆಯು ಅಕ್ಟೋಬರ್ 16, ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪಕ್ಷದ ಮುಖ್ಯ ಕಚೇರಿ ದೆಹಲಿಯಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿಕೆ ಬಿಡುಗಡೆಗೊಳಿಸಲಾಗಿದೆ.

ಪ್ರಸ್ತುತ ರಾಜಕೀಯ, ಚುನಾವಣಾ ಸಿದ್ಧತೆ ಮುಂತಾದ ವಿಚಾರಗಳ ಚರ್ಚೆ: ಅ. 16ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 09, 2021 | 3:41 PM

Share

ದೆಹಲಿ: ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಗಳ ಬಗ್ಗೆ ಮಾತುಕತೆ ನಡೆಸುವ ಸಲುವಾಗಿ ಅಕ್ಟೋಬರ್ 16 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಬಗ್ಗೆ ಕೆ.ಸಿ. ವೇಣುಗೋಪಾಲ್ ಇಂದು (ಅಕ್ಟೋಬರ್ 9) ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆಯು ಅಕ್ಟೋಬರ್ 16, ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪಕ್ಷದ ಮುಖ್ಯ ಕಚೇರಿ ದೆಹಲಿಯಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿಕೆ ಬಿಡುಗಡೆಗೊಳಿಸಲಾಗಿದೆ. ದೇಶದ ರಾಜಕೀಯ ಪರಿಸ್ಥಿತಿ, ಮುಂಬರುವ ಚುನಾವಣೆ, ಇತ್ಯಾದಿ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

ಕಾಂಗ್ರೆಸ್​ ಈ ವೇಳೆ, ಪಂಜಾಬ್​ನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಕೂಡ ಚರ್ಚಿಸುವ ಹಾಗೂ ಜಿ 23 ನಾಯಕರ ಪ್ರಶ್ನೆಗಳಿಗೆ ಉತ್ತರಿಸುವ ನಿರೀಕ್ಷೆ ಇದೆ. ಕಳೆದ 18 ತಿಂಗಳ ಅವಧಿಯಲ್ಲಿ ನಡೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯು ಕೊರೊನಾ ಸಾಂಕ್ರಾಮಿಕದ ಕಾರಣದಿಂದ ವರ್ಚುವಲ್ ವಿಧಾನದಲ್ಲಿ ನಡೆದಿತ್ತು. ಈ ಬಾರಿ ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿರುವ ಬಗ್ಗೆ ತಿಳಿಸಲಾಗಿದೆ. ಸಭೆಯಲ್ಲಿ ರೈತರ ಹೋರಾಟ, ಅಕ್ಟೋಬರ್ 3ರಂದು ಉತ್ತರಪ್ರದೇಶದ ಲಖಿಂಪುರ ಕೇರಿಯಲ್ಲಿ ನಡೆದ ಘಟನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ತಿಂಗಳು, ಪಕ್ಷದ ಹಿರಿಯ ನಾಯಕ ಗುಲಾಮ್ ನಬಿ ಆಜಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ನಡೆಸುವಂತೆ ತಿಳಿಸಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಪಂಜಾಬ್ ಹಾಗೂ ಗೋವಾ ಕಾಂಗ್ರೆಸ್​ನ ರಾಜಕೀಯ ಸ್ಥಿತಿಗತಿ ಮತ್ತು ಪಕ್ಷದ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡುವಂತೆ ತಿಳಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸಾಯುವ ಹಂತದಲ್ಲಿದೆ ಎಂದಿರುವ ನವಜೋತ್ ಸಿಧು ಹೈಕಮಾಂಡ್​ಗೆ ಮತ್ತೆ ತಲೆನೋವಾಗಿದ್ದಾರೆ!

ಇದನ್ನೂ ಓದಿ: ಲಖಿಂಪುರ್ ಖೇರಿ ಪ್ರಕರಣವು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಅವಕಾಶವನ್ನು ಹೆಚ್ಚಿಸಲಿದೆಯೇ? ಪ್ರಶಾಂತ್ ಕಿಶೋರ್ ಏನಂತಾರೆ?

Published On - 3:28 pm, Sat, 9 October 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!